Homeಕರ್ನಾಟಕರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

ರಾಹುಲ್ ಗಾಂಧಿ ಜಾಮೀನು ಅವಧಿ ಮುಕ್ತಾಯ; ಇಂದು ಮತ್ತೆ ವಿಚಾರಣೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2019ರಲ್ಲಿ ಮಾನಹಾನಿಕರ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಸೂರತ್‌ನ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13 ರವರೆಗೆ ಜಾಮೀನು ನೀಡಿತ್ತು. ಇಂದು ಜಾಮೀನಿನ ಅವಧಿ ಮುಗಿಯಲಿದೆ. ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ಇಂದು ನಡೆಸಲಿದೆ.

ಸೂರತ್ ನ್ಯಾಯಾಲಯ ನೀಡಿದ ಶಿಕ್ಷೆಯ ತೀರ್ಪಿನಿಂದಾಗಿ ಅವರು ಲೋಕಸಭೆಯಿಂದಲೂ ಅಮಾನತ್ ಆಗಬೇಕಾಯಿತು. ಇದು ರಾಜಕೀಯವಾಗಿ ಭಾರೀ ವಿವಾದವನ್ನು ಹುಟ್ಟುಹಾಕಿತು. ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಲು ಕಾರಣವಾಯಿತು.

ಈ ಬಗ್ಗೆ ಪೂರ್ಣೇಶ್ ಮೋದಿಯವರ ಪ್ರತಿಕ್ರಿಸಿದ್ದು, ”ಪಕ್ಷದ ನಾಯಕರ ತಂಡದೊಂದಿಗೆ ರಾಹುಲ್ ಗಾಂಧಿ ಅವರು ತಮ್ಮ ತೀರ್ಪಿನ ವಿರುದ್ಧ ಮನವಿ ಸಲ್ಲಿಸಿರುವುದು ”ಅತ್ಯಂತ ದುರಹಂಕಾರ”ದ ನಡೆಯಾಗಿದೆ. ರಾಹುಲ್ ಗಾಂಧಿಯನ್ನು ಪದೇಪದೇ ಅಪರಾಧಿ ಎಂದು ಆರೋಪಿಸಿದ ಅವರು, ಕ್ರಿಮಿನಲ್ ಮಾನನಷ್ಟದ 11 ನಿದರ್ಶನಗಳೊಂದಿಗೆ, ”ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ” ಪ್ರಕರಣವನ್ನು ಉಲ್ಲೇಖಿಸಿದ್ದಾರೆ.

ಅಪರಾಧಿ ಎಂದು ಸಾಬೀತಾದ ನಂತರವೂ ರಾಹುಲ್ ಗಾಂಧಿ ಸಾರ್ವಜನಿಕ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ ಎಂದು ಪೂರ್ಣೇಶ್ ಮೋದಿ ಆರೋಪಿಸಿದ್ದಾರೆ.

ಏಪ್ರಿಲ್ 13ರಂದು, ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆಯನ್ನು ನಡೆಸಲಿದೆ. ಇದೇ ವೇಳೆ ಗುಜರಾತ್ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು, ”ಸಂಸದರೊಬ್ಬರು ಯಾವುದೇ ಕಾನೂನನ್ನು ಉಲ್ಲಂಘಿಸಿದರೆ, ಅದು ಸಮಾಜ ಮತ್ತು ನ್ಯಾಯಾಲಯಕ್ಕೆ ಹೆಚ್ಚು ಮಹತ್ವದ ಕಾಳಜಿಯಾಗುತ್ತದೆ ಎಂದು ಹೇಳಿದರು.

”ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ? ನ್ಯಾಯಾಲಯವು ಈ ಹೇಳಿಕೆಯನ್ನು ಮಾನಹಾನಿಕರವೆಂದು ಪರಿಗಣಿಸಿದೆ ಮತ್ತು ರಾಜಕೀಯ ಟೀಕೆ ಮತ್ತು ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಮಾನಹಾನಿ ಮತ್ತು ಒಂದು ಸಮಾಜದ ಜನರಿಗೆ ನೋವನ್ನುಂಟುಮಾಡುವ ಹೇಳಿಕೆಗಳನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದರು.

ಪಾಟ್ನಾದಲ್ಲೂ ರಾಹುಲ್ ವಿಚಾರಣೆ

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಪಾಟ್ನಾದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಏಪ್ರಿಲ್ 25ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು, ”ಮಾರ್ಚ್ 18ರಂದು ನೀಡಿದ ಆದೇಶದಲ್ಲಿ ಏಪ್ರಿಲ್ 12ರಂದು ತನ್ನ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ತಿಳಿಸಿತ್ತು.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿ ವಕೀಲರು, ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು. ಇದಕ್ಕೆ ನ್ಯಾಯಾಧೀಶರು, ಏಪ್ರಿಲ್ 25ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ರಾಹುಲ್ ಗಾಂಧಿಯವರ ವಕೀಲರನ್ನು ಕೇಳಿದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಸಿಕ್ಯೂಷನ್ ವಕೀಲ ಪ್ರಿಯಾ ಗುಪ್ತಾ ಅವರು, ”ದೂರುದಾರರ ಕಡೆಯಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಎಲ್ಲಾ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈಗ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...