Homeಮುಖಪುಟಬಿಜೆಪಿ 2ನೇ ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ: ಪಟ್ಟಿ ಇಲ್ಲಿದೆ

ಬಿಜೆಪಿ 2ನೇ ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ: ಪಟ್ಟಿ ಇಲ್ಲಿದೆ

- Advertisement -
- Advertisement -

ಬಿಜೆಪಿ ಪಕ್ಷವು ಬುಧವಾರ ತಡರಾತ್ರಿ 23 ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಆರು ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ವಿವರ ಇಲ್ಲಿದೆ.

ಮೂಡಿಗೆರೆ – ಎಂ.ಪಿ ಕುಮಾರಸ್ವಾಮಿ

ಮೂಡಿಗೆರೆ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ದೀಪಕ್‌ ದೊಡ್ಡಯ್ಯನವರಿಗೆ ಸಿಕ್ಕಿದೆ. 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಪಿ ಕುಮಾರಸ್ವಾಮಿಯವರು ಕಾಂಗ್ರೆಸ್‌ನ ಮೋಟಮ್ಮನವರ ಎದುರು ಸೋತಿದ್ದರು. ಆನಂತರ 2004 ಮತ್ತು 2008ರಲ್ಲಿ ಮೋಟಮ್ಮ ಮತ್ತು ಚಂದ್ರಪ್ಪನವರ ಎದುರು ಗೆಲುವು ಸಾಧಿಸಿದ್ದರು. 2013ರಲ್ಲಿ ಜೆಡಿಎಸ್‌ನ ಬಿ.ಬಿ ನಿಂಗಯ್ಯನವರು ಎದುರು ಸೋಲು ಕಂಡಿದ್ದರು. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೋಟಮ್ಮನವರು ಎದುರು 12,328 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸದ್ಯ ಎಂ.ಪಿ ಕುಮಾರಸ್ವಾಮಿಯವರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಚನ್ನಗಿರಿ – ಮಾಡಾಳ್ ವಿರೂಪಾಕ್ಷಪ್ಪ

ಇತ್ತೀಚಿಗೆ ಭಾರೀ ಭ್ರಷ್ಟಾಚಾರ ನಡೆಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ತಮಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ತುಮ್ಕೋಸ್ ಮಾಜಿ ಅಧ್ಯಕ್ಷ ಶಿವಕುಮಾರ್‌ರವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಬೈಂದೂರು – ಸುಕುಮಾರ ಶೆಟ್ಟಿ

ಬೈಂದೂರಿನಲ್ಲಿ 2013ರಲ್ಲಿ ಸೋತು 2018ರಲ್ಲಿ ಗೆಲುವು ಸಾಧಿಸಿದ್ದ ಸುಕಮಾರ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲಿಗೆ ಗುರುರಾಜ್‌ ಗಂಟೀಹೊಳೆಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಕಲಘಟಗಿ; ಸಿ.ಎಂ.ನಿಂಬಣ್ಣನವರ್

2008ರಲ್ಲಿ ಬಿಜೆಪಿಯಿಂದ ಮತ್ತು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಸಂತೋಷ್ ಲಾಡ್ ವಿರುದ್ಧ ಸೋತಿದ್ದ ಸಿ.ಎಂ.ನಿಂಬಣ್ಣನವರ್ 2018ರಲ್ಲಿ ಸಂತೋಷ್ ಲಾಡ್‌ರನ್ನು 25,997 ಮತಗಳ ಅಂತರದಲ್ಲಿ ಸೋಲಿಸಿ ಶಾಸಕರಾಗಿದ್ದರು. ಆದರೆ ಒಂದೇ ಬಾರಿಗೆ ಶಾಸಕರಾಗಿದ್ದು ಸಾಕು ಎಂದಿರುವ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿ, ನಾಗರಾಜ್‌ ಛಬ್ಬಿಯವರಿಗೆ ಮಣೆ ಹಾಕಿದೆ. ಕಾಂಗ್ರೆಸ್‌ನಿಂದ ಈ ಬಾರಿಯೂ ಸಂತೋಷ್ ಲಾಡ್ ಅಭ್ಯರ್ಥಿಯಾಗಿದ್ದಾರೆ.

ಹಾವೇರಿ; ನೆಹರೂ ಓಲೇಕಾರ್‌

ಓಲೇಕಾರ್ 2008 ಮತ್ತು 2018ರಲ್ಲಿ ಹಾವೇರಿ ಶಾಸಕರಾಗಿದ್ದರು. ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ಜನಪ್ರತಿನಿಧಿಗಳ ವಿಶೇ‍ಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆ ಕಾರಣದಿಂದ ಅವರಿಗೆ ಈ ಬಾರಿಯ ಬಿಜೆಪಿ ಟಿಕೆಟ್ ಸಿಕ್ಕಿಲ್ಲ. ಅವರ ಬದಲಿಗೆ ಗವಿಸಿದ್ದಪ್ಪ ದ್ಯಾಮಣ್ಣನವರ್‌ ನವರಿಗೆ ಬಿಜೆಪಿ ಟಿಕೆಟ್ ಒಲಿದಿದೆ.

ಮಾಯಕೊಂಡ; ಪ್ರೊ.ಲಿಂಗಣ್ಣ

ಪ್ರೊ.ಎನ್ ಲಿಂಗಣ್ಣ 2018ರಲ್ಲಿ ಕಾಂಗ್ರೆಸ್‌ನ ಕೆ.ಎಸ್ ಬಸವರಾಜುರವರನ್ನು 6,458 ಮತಗಳ ಅಂತರದಲ್ಲಿ ಸೋಲಿಸಿ ಶಾಸಕರಾಗಿದ್ದರು. ಈಗ ಬಿಜೆಪಿ ಅವರ ಬದಲಿಗೆ ಬಸವರಾಜ ನಾಯಕ್‌ರವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಮತ್ತೆ ಕೆ.ಎಸ್ ಬಸವರಾಜುರವರನ್ನು ಕಣಕ್ಕಿಳಿಸಿದೆ.

ಬಿಜೆಪಿಯ ಮೊದಲ ಪಟ್ಟಿಯಲ್ಲಿ 10 ಜನ ಹಾಲಿ ಶಾಸಕರಿಗೆ ಟಿಕೆಟ್ ನೀಡಿರಲಿಲ್ಲ. ಆ ವಿವರಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತುಮಕೂರು ನಗರದ ಸೊಗಡು ಶಿವಣ್ಣ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಕೂಡ ಬಂಡಾಯದ ಬಾವುಟ ಹಾರಿಸಿದ್ದಾರೆ. ಜೇವರ್ಗಿಯ ದೊಡ್ಡಪ್ಪಗೌಡ ಪಾಟೀಲ್ ಬಿಜೆಪಿ ತೊರೆದು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಮಾಲೂರಿನಲ್ಲಿ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ. ಅವರ ಸಾಲಿಗೆ ಎಂ.ಪಿ ಕುಮಾರಸ್ವಾಮಿ ಸೇರಿಕೊಂಡಿದ್ದಾರೆ.

ಇದನ್ನೂ ಓದಿ; ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...