Homeಮುಖಪುಟಬಿಜೆಪಿ 2ನೇ ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ: ಪಟ್ಟಿ ಇಲ್ಲಿದೆ

ಬಿಜೆಪಿ 2ನೇ ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ: ಪಟ್ಟಿ ಇಲ್ಲಿದೆ

- Advertisement -
- Advertisement -

ಬಿಜೆಪಿ ಪಕ್ಷವು ಬುಧವಾರ ತಡರಾತ್ರಿ 23 ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಆರು ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ವಿವರ ಇಲ್ಲಿದೆ.

ಮೂಡಿಗೆರೆ – ಎಂ.ಪಿ ಕುಮಾರಸ್ವಾಮಿ

ಮೂಡಿಗೆರೆ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ದೀಪಕ್‌ ದೊಡ್ಡಯ್ಯನವರಿಗೆ ಸಿಕ್ಕಿದೆ. 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಪಿ ಕುಮಾರಸ್ವಾಮಿಯವರು ಕಾಂಗ್ರೆಸ್‌ನ ಮೋಟಮ್ಮನವರ ಎದುರು ಸೋತಿದ್ದರು. ಆನಂತರ 2004 ಮತ್ತು 2008ರಲ್ಲಿ ಮೋಟಮ್ಮ ಮತ್ತು ಚಂದ್ರಪ್ಪನವರ ಎದುರು ಗೆಲುವು ಸಾಧಿಸಿದ್ದರು. 2013ರಲ್ಲಿ ಜೆಡಿಎಸ್‌ನ ಬಿ.ಬಿ ನಿಂಗಯ್ಯನವರು ಎದುರು ಸೋಲು ಕಂಡಿದ್ದರು. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೋಟಮ್ಮನವರು ಎದುರು 12,328 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸದ್ಯ ಎಂ.ಪಿ ಕುಮಾರಸ್ವಾಮಿಯವರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಚನ್ನಗಿರಿ – ಮಾಡಾಳ್ ವಿರೂಪಾಕ್ಷಪ್ಪ

ಇತ್ತೀಚಿಗೆ ಭಾರೀ ಭ್ರಷ್ಟಾಚಾರ ನಡೆಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ತಮಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ತುಮ್ಕೋಸ್ ಮಾಜಿ ಅಧ್ಯಕ್ಷ ಶಿವಕುಮಾರ್‌ರವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಬೈಂದೂರು – ಸುಕುಮಾರ ಶೆಟ್ಟಿ

ಬೈಂದೂರಿನಲ್ಲಿ 2013ರಲ್ಲಿ ಸೋತು 2018ರಲ್ಲಿ ಗೆಲುವು ಸಾಧಿಸಿದ್ದ ಸುಕಮಾರ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲಿಗೆ ಗುರುರಾಜ್‌ ಗಂಟೀಹೊಳೆಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಕಲಘಟಗಿ; ಸಿ.ಎಂ.ನಿಂಬಣ್ಣನವರ್

2008ರಲ್ಲಿ ಬಿಜೆಪಿಯಿಂದ ಮತ್ತು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಸಂತೋಷ್ ಲಾಡ್ ವಿರುದ್ಧ ಸೋತಿದ್ದ ಸಿ.ಎಂ.ನಿಂಬಣ್ಣನವರ್ 2018ರಲ್ಲಿ ಸಂತೋಷ್ ಲಾಡ್‌ರನ್ನು 25,997 ಮತಗಳ ಅಂತರದಲ್ಲಿ ಸೋಲಿಸಿ ಶಾಸಕರಾಗಿದ್ದರು. ಆದರೆ ಒಂದೇ ಬಾರಿಗೆ ಶಾಸಕರಾಗಿದ್ದು ಸಾಕು ಎಂದಿರುವ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿ, ನಾಗರಾಜ್‌ ಛಬ್ಬಿಯವರಿಗೆ ಮಣೆ ಹಾಕಿದೆ. ಕಾಂಗ್ರೆಸ್‌ನಿಂದ ಈ ಬಾರಿಯೂ ಸಂತೋಷ್ ಲಾಡ್ ಅಭ್ಯರ್ಥಿಯಾಗಿದ್ದಾರೆ.

ಹಾವೇರಿ; ನೆಹರೂ ಓಲೇಕಾರ್‌

ಓಲೇಕಾರ್ 2008 ಮತ್ತು 2018ರಲ್ಲಿ ಹಾವೇರಿ ಶಾಸಕರಾಗಿದ್ದರು. ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ಜನಪ್ರತಿನಿಧಿಗಳ ವಿಶೇ‍ಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆ ಕಾರಣದಿಂದ ಅವರಿಗೆ ಈ ಬಾರಿಯ ಬಿಜೆಪಿ ಟಿಕೆಟ್ ಸಿಕ್ಕಿಲ್ಲ. ಅವರ ಬದಲಿಗೆ ಗವಿಸಿದ್ದಪ್ಪ ದ್ಯಾಮಣ್ಣನವರ್‌ ನವರಿಗೆ ಬಿಜೆಪಿ ಟಿಕೆಟ್ ಒಲಿದಿದೆ.

ಮಾಯಕೊಂಡ; ಪ್ರೊ.ಲಿಂಗಣ್ಣ

ಪ್ರೊ.ಎನ್ ಲಿಂಗಣ್ಣ 2018ರಲ್ಲಿ ಕಾಂಗ್ರೆಸ್‌ನ ಕೆ.ಎಸ್ ಬಸವರಾಜುರವರನ್ನು 6,458 ಮತಗಳ ಅಂತರದಲ್ಲಿ ಸೋಲಿಸಿ ಶಾಸಕರಾಗಿದ್ದರು. ಈಗ ಬಿಜೆಪಿ ಅವರ ಬದಲಿಗೆ ಬಸವರಾಜ ನಾಯಕ್‌ರವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಮತ್ತೆ ಕೆ.ಎಸ್ ಬಸವರಾಜುರವರನ್ನು ಕಣಕ್ಕಿಳಿಸಿದೆ.

ಬಿಜೆಪಿಯ ಮೊದಲ ಪಟ್ಟಿಯಲ್ಲಿ 10 ಜನ ಹಾಲಿ ಶಾಸಕರಿಗೆ ಟಿಕೆಟ್ ನೀಡಿರಲಿಲ್ಲ. ಆ ವಿವರಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತುಮಕೂರು ನಗರದ ಸೊಗಡು ಶಿವಣ್ಣ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಕೂಡ ಬಂಡಾಯದ ಬಾವುಟ ಹಾರಿಸಿದ್ದಾರೆ. ಜೇವರ್ಗಿಯ ದೊಡ್ಡಪ್ಪಗೌಡ ಪಾಟೀಲ್ ಬಿಜೆಪಿ ತೊರೆದು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಮಾಲೂರಿನಲ್ಲಿ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ. ಅವರ ಸಾಲಿಗೆ ಎಂ.ಪಿ ಕುಮಾರಸ್ವಾಮಿ ಸೇರಿಕೊಂಡಿದ್ದಾರೆ.

ಇದನ್ನೂ ಓದಿ; ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...