Homeಮುಖಪುಟ11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

11ನೇ ತರಗತಿಯ ಪಠ್ಯಪುಸ್ತಕದಿಂದ ಮೌಲಾನಾ ಆಜಾದ್ ಉಲ್ಲೇಖ ಕೈಬಿಟ್ಟ NCERT

- Advertisement -
- Advertisement -

NCERT ಪ್ರಕಟಿಸಿರುವ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ‘ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್’ ಅವರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತವಾಗಿ ಉಳಿಯುತ್ತದೆ ಎಂಬ ಷರತ್ತಿನ ಮೇಲೆ ಭಾರತಕ್ಕೆ ವಿಲೀನವಾಗಿತ್ತು ಎಂಬ ಪ್ಯಾರಾಗ್ರಾಫ್‌ನ್ನು ಸಹ ಅಳಿಸಲಾಗಿದೆ ಎಂದು ಪತ್ರಿಕೆ ತಿಳಿಸಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಿದ ಹಲವಾರು ಬದಲಾವಣೆಗಳು ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಎಲ್ಲ ಲೋಪಗಳು ಸರ್ಕಾರಿ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಶಾಲೆಗಳಲ್ಲಿ ಪಠ್ಯಕ್ರಮದ ಭಾಗವಾಗಿದೆ.

ಜೂನ್‌ನಲ್ಲಿ ಎನ್‌ಸಿಇಆರ್‌ಟಿ ಪರೀಷ್ಕರಿಸುವ ವಿಷಯಗಳ ಕುರಿತು ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಆ ಪಟ್ಟಿಯಲ್ಲಿ ‘ಆಜಾದ್’ ಮತ್ತು ‘ಕಾಶ್ಮೀರ’ದ ಮೇಲಿನ ಪ್ಯಾರಾಗಳನ್ನು ತಗೆದು ಹಾಕುವ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿರಲಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ವಾರವೂ ಇದೇ ರೀತಿ ಗಾಂಧಿ ಹತ್ಯೆಯ ವಿಷಯದಲ್ಲಿ ಮಾಡಿತ್ತು. ”ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧ”ದ ಪ್ಯಾರಾಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

ಕಳೆದ ವರ್ಷ NCERT ಕೆಲವು ವಿಷಯಗಳನ್ನು ತಗೆದುಹಾಕುವ ಬಗ್ಗೆ ಹೇಳಿತ್ತು. 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳನ್ನು ಕೈಬಿಡುವುದಾಗಿ ಹೇಳಿತ್ತು. ಈಗ ಯಾವುದೇ NCERT ಪಠ್ಯಪುಸ್ತಕದಲ್ಲೂ ಗುಜರಾತ್ ಗಲಭೆಗಳ ಬಗ್ಗೆ ಯಾವುದೇ ಉಲ್ಲೇಖಗಳು ಕಾಣಸಿಗುವುದಿಲ್ಲ.

”ಸಂವಿಧಾನ – ಏಕೆ ಮತ್ತು ಹೇಗೆ?” ಎಂಬ ಶೀರ್ಷಿಕೆಯ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿ ಆಜಾದ್ ಅವರ ಪ್ಯಾರಾವನ್ನು ಕೈಬಿಡಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ವಿಧಾನ ಸಭೆಯು ವಿವಿಧ ವಿಷಯಗಳ ಮೇಲೆ ಎಂಟು ಪ್ರಮುಖ ಸಮಿತಿಗಳನ್ನು ಹೊಂದಿತ್ತು. ಸಾಮಾನ್ಯವಾಗಿ ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಆಜಾದ್ ಅಥವಾ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯು ಪ್ಯಾರಾಗ್ರಾಫ್‌ನ ಎರಡನೇ ಸಾಲನ್ನು ಹೀಗೆ ಪರಿಷ್ಕರಿಸಿದೆ- ”ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು” ಎಂದು ಬರೆಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅದೇ ಪಠ್ಯಪುಸ್ತಕದ ”ಸಂವಿಧಾನದ ತತ್ವಶಾಸ್ತ್ರ” ಎಂಬ ಇನ್ನೊಂದು ಅಧ್ಯಾಯದಲ್ಲಿ, ಜಮ್ಮು ಮತ್ತು ಕಾಶ್ಮೀರವು ಸ್ವಾಯತ್ತತೆಯ ಷರತ್ತಿನ ಮೇಲೆ ಭಾರತಕ್ಕೆ ಸೇರಿಕೊಂಡಿದೆ ಎಂಬ ಅಂಶದ ಉಲ್ಲೇಖವನ್ನು ತೆಗೆದುಹಾಕಲಾಗಿದೆ.

ಈ ಪಠ್ಯಪುಸ್ತಕದ ಹಿಂದಿನ ಆವೃತ್ತಿಗಳಲ್ಲಿ, ”ಉದಾಹರಣೆಗೆ, ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸುವುದು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಅದರ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಮೇಲೆ ಆಧಾರಿತವಾಗಿದೆ” ಎಂದು ಇದೆ.

ಆದರೆ ಪಠ್ಯಪುಸ್ತಕದ ಹೊಸ ಆವೃತ್ತಿಯಲ್ಲಿ, ಅದನ್ನು ಕೈ ಬಿಟ್ಟು, ”ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಅಡಿಯಲ್ಲಿ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.”

”ಜಮ್ಮು ಮತ್ತು ಕಾಶ್ಮೀರದ “ಶಾಶ್ವತ ನಿವಾಸಿಗಳು” ಎಂದು ವ್ಯಾಖ್ಯಾನಿಸಲಾದ ಜನರಿಗೆ ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಖಾತ್ರಿಪಡಿಸುವ ಆರ್ಟಿಕಲ್ 35A ಅನ್ನು ಕೇಂದ್ರವು ರದ್ದುಗೊಳಿಸಿದೆ. ಅಂದಿನಿಂದ, ಈ ಪ್ರದೇಶವು ಕೇಂದ್ರ ಆಡಳಿತದಲ್ಲಿದೆ” ಎಂದು ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...