Homeಮುಖಪುಟಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

- Advertisement -
- Advertisement -

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಕನಿಷ್ಟ 8 ಕ್ಷೇತ್ರಗಳಲ್ಲಿ ಬಂಡಾಯ ಸಾರಿದ್ದಾರೆ. ಹಲವರು ಪಕ್ಷೇತರರಾಗಿ ಇನ್ನು ಕೆಲವರು ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಮನಸ್ಸು ಮಾಡಿದ್ದಾರೆ.

ಬೆಳಗಾವಿ ಉತ್ತರ – ಅನಿಲ್ ಬೆನಕೆ

ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಅನಿಲ್ ಬೆನಕೆ ಬೆಂಬಲಿಗರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2018 ರಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅನಿಲ್ ಎಸ್ ಬೆನಕೆ ಕಾಂಗ್ರೆಸ್‌ನ ಫೈರೋಜ್ ನೂರುದ್ದೀನ್ ಸೇಠ್‌ರವರನ್ನು 17,267 ಮತಗಳ ಅಂತರದಲ್ಲಿ ಸೋಲಿಸಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಬಿಜೆಪಿ ಡಾ.ರವಿ ಪಾಟೀಲ್‌ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ.

ಯಮಕನಮರಡಿ – ಮಾರುತಿ ಅಷ್ಟಗಿ

ಯಮಕನಮರಡಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾರುತಿ ಅಷ್ಟಗಿಯವರಿಗೆ ಟಿಕೆಟ್ ಕೈ ತಪ್ಪಿದೆ. ಅವರು ಬದಲು ಬಸವರಾಜ ಹುಂದ್ರಿಯವರಿಗೆ ಟಿಕೆಟ್ ಸಿಕ್ಕಿದೆ. ಇದರಿಂದ ಕುಪಿತಗೊಂಡಿರುವ ಮಾರುತಿ ಅಷ್ಟಗಿಯವರು ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅಥಣಿ – ಲಕ್ಷ್ಮಣ ಸವದಿ

ಅಥಣಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಅಲ್ಲಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಹಾಗಾಗಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ.

ರಾಮದುರ್ಗ – ಮಹಾದೇವಪ್ಪ ಯಾದವಾಡ

ರಾಮದುರ್ಗ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಾಸಕ ಮಹದೇವಪ್ಪ ಯಾದವಾಡ ಬೆಂಬಲಿಗರು ಬುಧವಾರ ರಾತ್ರಿ ಮತ್ತು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬುಧವಾರ ರಾತ್ರಿಯೇ ಮಹಾದೇವಪ್ಪ ಯಾದವಾಡ ಬೆಂಗಳೂರಿಗೆ ತೆರಳಿದ್ದಾರೆ.

ಮಹದೇವಪ್ಪ ಯಾದವಾಡರವರು ರಾಮದುರ್ಗದಲ್ಲಿ 1999 ರಲ್ಲಿ ಸೋಲು ಕಂಡಿದ್ದರು. ಆನಂತರ 2004 ಮತ್ತು 2018 ರಲ್ಲಿ ಗೆಲುವು ದಾಖಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಶೋಕ್ ಮಹದೇವಪ್ಪ ಪಟ್ಟಣ್ ವಿರುದ್ಧ 2,875 ಮತಗಳ ಅಂತರದಲ್ಲಿ ಜಯ ಕಂಡಿದ್ದರು. ಈಗ ಅವರ ಬದಲಿಗೆ ಬಿಜೆಪಿಯು ಚಿಕ್ಕರೇವಣ್ಣನವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಸೋತ ಅಭ್ಯರ್ಥಿ ಮಾಜಿ ಶಾಸಕ ಅಶೋಕ್ ಮಹದೇವಪ್ಪ ಪಟ್ಟಣ್ ರವರಿಗೆ ಟಿಕೆಟ್ ನೀಡಿದೆ.

ಬೆಳಗಾವಿ ಗ್ರಾಮೀಣ – ಸಂಜಯ ಪಾಟೀಲ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೇ ಹೊಸಬರಾಗಿರುವ ನಾಗೇಶ ಮನ್ನೋಳಕರಗೆ ಟಿಕೆಟ್ ಘೋಷಿಸಿದ್ದನ್ನು ಖಂಡಿಸಿ ಬಿಜೆಪಿಯ ಜಿಲ್ಲಾ ಹಾಗೂ ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ ಹೊರ ಹಾಕಿದರು. ಮಾಜಿ ಶಾಸಕ ಸಂಜಯ ಪಾಟೀಲರವರಿಗೆ ಇಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

ಬೈಲಹೊಂಗಲ – ಡಾ. ವಿಶ್ವನಾಥ ಪಾಟೀಲ್

ಡಾ. ವಿಶ್ವನಾಥ ಪಾಟೀಲ್ ಅವರು ಬೈಲಹೊಂಗಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಗದೀಶ್ ಮೆಟಗುಡ್ಡ ಕೂಡ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮತದಾನ ನಡೆಸಲಾಗಿತ್ತು. ವೀಕ್ಷಕರ ಸಮ್ಮುಖದಲ್ಲೇ ಈ ಮತದಾನ ನಡೆದಿತ್ತು. ಈ ವೇಳೆ 109 ಮತಗಳ ಪೈಕಿ 98 ಮತ ಡಾ. ವಿಶ್ವನಾಥ ಪಾಟೀಲ್ ರವರನ್ನು ಬಿಟ್ಟು ಜಗದೀಶ್‌ ಚನ್ನಪ್ಪ ಮೆಟಗುಡ್ಡರವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದನ್ನು ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 600ಕ್ಕೂ ಹೆಚ್ಚುಕಾರ್ಯಕರ್ತರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಖಾನಾಪುರ – ಡಾ.ಸೋನಾಲಿ ಸರನೋಬತ್‌

ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ನನಗೆ ತುಂಬ ಆಘಾತವಾಗಿದೆ. ನನ್ನೊಂದಿಗೆ ಇಷ್ಟು ದಿನ ಇದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರನೋಬತ್‌ ಹೇಳಿದರು. ಅದೇ ರೀತಿ ಮತ್ತೋರ್ವ ಟಿಕೆಟ್ ಆಕಾಂಕ್ಷಿತಯಾಗಿದ್ದ ಅರವಿಂದ್ ಪಾಟೀಲ್ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇಲ್ಲಿ ವಿಠ್ಠಲ್ ಹಲಗೇಕಾರ್‌ರವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಸವದತ್ತಿ ಎಲ್ಲಮ್ಮ – ಬಸವರಾಜ ಪಟ್ಟಣಶೆಟ್ಟಿ

ಟಿಕೆಟ್ ವಂಚಿತ ಬಸವರಾಜ ಪಟ್ಟಣಶೆಟ್ಟಿಯವರು ಸಹ ಪಕ್ಷೇತರರಾಗಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇಲ್ಲಿ ರತ್ನ ವಿಶ್ವನಾಥ್ ಮಾಮನಿಯವರಿಗೆ ಟಿಕೆಟ್ ಸಿಕ್ಕಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಇದುವರೆಗೂ ಬಂಡಾಯವೆದ್ದ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...