Homeಕರ್ನಾಟಕಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ: ರಾಹುಲ್ ಪರ ವಕೀಲ

ಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ: ರಾಹುಲ್ ಪರ ವಕೀಲ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇಲಿನ ಕ್ರಿಮಿನಲ್ ಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ ಎಂದು ರಾಹುಲ್ ಪರ ವಕೀಲರು ಗುರುವಾರ ಸೂರತ್ ನ್ಯಾಯಾಲಯಕ್ಕೆ ತಿಳಿಸಿದರು ಎಂದು ಬಾರ್ ಬೆಂಚ್ ವರದಿ ಮಾಡಿದೆ.

ಮೋದಿ ಸರ್‌ನೇಮ್‌ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಗುರುವಾರದ ವಿಚಾರಣೆಯಲ್ಲಿ, ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಆರ್.ಎಸ್.ಚೀಮಾ ಅವರು, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ರಾಜಕಾರಣಿ ಮಾಡಿದ ಮೂಲ ಭಾಷಣವನ್ನು ಸಾಕ್ಷಿಯಾಗಿ ಪರಿಗಣಿಸಿಲ್ಲ ಮತ್ತು ಮಾಧ್ಯಮ ವರದಿಗಳನ್ನು ಅವಲಂಬಿಸಿದ್ದಾರೆ ಎಂದು ವಾದಿಸಿದರು.

”ಭಾಷಣ ಸಿಡಿ ಸೂಚಿಸಿದ್ದಕ್ಕಿಂತ ವಿಭಿನ್ನವಾಗಿ ಪತ್ರಿಕೆಗಳ ಕಟಿಂಗ್ ಬಗ್ಗೆ ಮಾತನಾಡಿದ್ದರಿಂದ, ಅದರ ಆಧಾರದ ಮೇಲೆಯೇ  ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ವಿಚಿತ್ರ ತೀರ್ಪನ್ನು ನೀಡಿದ್ದಾರೆ” ಎಂದು ಚೀಮಾ ನ್ಯಾಯಾಲಯಕ್ಕೆ ತಿಳಿಸಿದರು.

”ಬೆಳಿಗ್ಗೆ 11:51ಕ್ಕೆ ನನ್ನ ಕಕ್ಷಿದಾರನನ್ನು ತಪ್ಪಿತಸ್ಥ ಎಂದು ಘೋಷಿಸಲಾಗುತ್ತದೆ ಮತ್ತು ಅರ್ಧ ಗಂಟೆಯೊಳಗೆ ಅವನಿಗೆ ಕಠಿಣ ಮತ್ತು ಗರಿಷ್ಠ ಶಿಕ್ಷೆಯನ್ನು ನೀಡಲಾಯಿತು ಎಂದು ನ್ಯಾಯಲಯಕ್ಕೆ ಹೇಳಿದರು.

ಮಾರ್ಚ್ 23ರಂದು, ಗಾಂಧಿಯವರು 2019ರ ಲೋಕಸಭಾ ಚುನಾವಣೆಯ ಮೊದಲು ಮಾಡಿದ ಭಾಷಣಕ್ಕಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು, ಇದರಲ್ಲಿ ಅವರು ”ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ? ಎನ್ನುವ ರಾಹುಲ್ ಹೇಳಿಕೆ ಉಲ್ಲೇಖಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಕಾಂಗ್ರೆಸ್ ನಾಯಕನನ್ನು ದೋಷಿ ಎಂದು ಘೋಷಿಸಲಾಗಿದೆ. ಆದರೆ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು, ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಿದೆ.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯಡಿಯಲ್ಲಿ ಗಾಂಧಿಯವರು ಲೋಕಸಭಾ ಸಂಸದರಾಗಿ ಅನರ್ಹಗೊಂಡರು. ಕಾನೂನಿನ ಸೆಕ್ಷನ್ 8(3)ರ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಅನರ್ಹರಾಗುತ್ತಾರೆ. ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.

ನ್ಯಾಯಾಲಯವು ಅವರ ಅಪರಾಧವನ್ನು ತಡೆಹಿಡಿದರೆ ಲೋಕಸಭೆಯಿಂದ ಗಾಂಧಿಯವರ ಅನರ್ಹತೆಯನ್ನು ರದ್ದುಗೊಳಿಸಲಾಗುತ್ತದೆ. ಏಪ್ರಿಲ್ 3ರಂದು ಸೂರತ್ ನ್ಯಾಯಾಲಯವು ಅವರ ಜಾಮೀನನ್ನು ಏಪ್ರಿಲ್ 13 ರವರೆಗೆ ವಿಸ್ತರಿಸಿತ್ತು. ಗುರುವಾರ ಮತ್ತೆ ವಿಚಾರಣೆ ಆರಂಭವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...