Homeಮುಖಪುಟಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು

ಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು

- Advertisement -
- Advertisement -

ಕಾಂಗ್ರೆಸ್ ಪಕ್ಷದ ರಾಜ್ಯದ ಮುಂಚೂಣಿ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರನ್ನು ಹೆದರಿಸಲು ಬಿಜೆಪಿ ಅರೆಬರೆ ಯತ್ನ ಮಾಡುತ್ತಿದೆ. ಅದರ ಭಾಗವಾಗಿ ಆರ್ ಅಶೋಕ್‌ರವರು ಪದ್ಮನಾಭನಗರದ ಜೊತೆಗೆ ಕನಕಪುರದಲ್ಲಿ ಮತ್ತು ವಿ.ಸೋಮಣ್ಣ ಚಾಮರಾಜನಗರದ ಜೊತೆಗೆ ವರುಣದಲ್ಲಿ ಎರಡೆರೆಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಘೋಷಿಸಲಾಗಿದೆ. ಈ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದೇ ಒಂದು ರೀತಿಯಲ್ಲಿ ಚುನಾವಣೆಗೂ ಮೊದಲೆ ಬಿಜೆಪಿ ಒಂದೊಂದು ಕ್ಷೇತ್ರದಲ್ಲಿ ಸೋಲು ಒಪ್ಪಿಕೊಂಡಂತೆ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಆರ್ ಅಶೋಕ್ ಕನಕಪುರದಲ್ಲಿ ಸೋತರೂ ಪದ್ಮನಾಭನಗರ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ವಿ.ಸೋಮಣ್ಣ ಚಾಮರಾಜನಗರ ಮತ್ತು ವರುಣ ಎರಡೂ ಕಡೆ ಸೋಲಬಹುದು ಎನ್ನಲಾಗುತ್ತಿತ್ತು. ಆದರೆ ಈಗ ಪದ್ಮನಾಭನಗರದಲ್ಲಿಯೂ ಮತ್ತಷ್ಟು ಬಲಿಷ್ಠ ಅಭ್ಯರ್ಥಿಯಾದ ಡಿ.ಕೆ ಸುರೇಶ್‌ರನ್ನು ಕಣಕ್ಕಿಳಿಸುವ ಮೂಲಕ ಆರ್‌.ಅಶೋಕ್‌ಗೆ ನಡುಕ ಹುಟ್ಟಿಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗುತ್ತಿದೆ.

ಗುರಪ್ಪ ನಾಯ್ಡುರವರ ಪುತ್ರ ರಘುನಾಥ ನಾಯ್ಡುರವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಅವರು ಗುರುವಾರ ಭಿ ಫಾರಂ ಕೂಡ ಪಡೆದಿದ್ದಾರೆ. ಆದರೆ “ಡಿ.ಕೆ ಸುರೇಶ್‌ರವರು ಪದ್ಮನಾಭನಗರಕ್ಕೆ ಬಂದರೆ ಟಿಕೆಟ್ ಬಿಟ್ಟುಕೊಡಲು ಸಿದ್ದ. ಅಲ್ಲದೇ ಅವರನ್ನು 70,000 ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆಯ್ಕೆ ಮಾಡುತ್ತೇವೆ. ಅಲ್ಲದೇ ಕನಕಪುರದಲ್ಲಿಯೂ ಅಶೋಕ್‌ರನ್ನು ಸೋಲಿಸುತ್ತೇವೆ” ಎಂದು ರಘುನಾಥ ನಾಯ್ಡು ಹೇಳಿದ್ದಾರೆ.

ಪದ್ಮನಾಭನಗರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹೊಸ ಕಾಂಗ್ರೆಸ್ ಸದಸ್ಯರನ್ನು ಮಾಡಿಸಿದ್ದೇವೆ. ನಾಯ್ಡು ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಹಾಗಾಗಿ ಕಾಂಗ್ರೆಸ್ ಜಯ ಸಾಧಿಸುವುದರಲ್ಲಿ ಅನುಮಾನವಿಲ್ಲ. ಆದರೂ ಡಿ.ಕೆ ಸುರೇಶ್‌ರವರು ಇಲ್ಲಿ ಸ್ಪರ್ಧಿಸಿದರೆ ದೊಡ್ಡ ಅಂತರದಲ್ಲಿ ಗೆಲ್ಲಬಹುದು ಮತ್ತು ಆರ್‌.ಅಶೋಕ್‌ಗೆ ಮುಖಭಂಗವಾಗುವಂತೆ ಮಾಡಬಹುದು. ಈ ಕುರಿತು ಡಿ.ಕೆ ಶಿವಕುಮಾರ್‌ರವರಿಗೆ ತಿಳಿಸಿದ್ದೇನೆ ಮತ್ತು ಯಾವುದೇ ಕ್ಷಣದಲ್ಲಿ ಟಿಕೆಟ್ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಹ ರಘುನಾಥ ನಾಯ್ಡುರವರಿಗೆ ಭಿ ಫಾರಂ ನೀಡುವ ಸಂದರ್ಭದಲ್ಲಿ ಸದ್ಯ ಕ್ಷೇತ್ರದಲ್ಲಿ ಕೆಲಸ ಮತ್ತು ಪ್ರಚಾರ ಮಾಡುತ್ತೀರಿ. ಮುಂದೆ ನೋಡೋಣ ಎಂದು ಹೇಳಿರುವುದು ಡಿ.ಕೆ ಸುರೇಶ್ ಬರಬಹುದು ಎಂಬ ವಾದಕ್ಕೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಬಿಜೆಪಿ ಸೋಲಿಸಲು ಜಾತ್ಯಾತೀತ ಅಭ್ಯರ್ಥಿಗೆ ಬೆಂಬಲ; ಸ್ಪರ್ಧೆ ಮಾಡಲ್ಲ ಎಂದ ಎಡಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...