Homeಕರ್ನಾಟಕಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

ಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

- Advertisement -
- Advertisement -

ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಪ್ರಬಲ ಜಾತಿಗಳಾದ ಲಿಂಗಾಯತ ಮತ್ತು ಬಿಜೆಪಿಗೆ ಮೀಸಲಾತಿ ನೀಡುವ ಉದ್ದೇಶದಿಂದ ತರಾತುರಿಯಲ್ಲಿ ಶೇ 4ರಷ್ಟು ಮುಸ್ಲಿಂ ಮೀಸಲಾತಿ ರದ್ದು ಮಾಡಿದೆ. ಇದೀಗ ಸುಪ್ರೀಂ ಕೋರ್ಟ್, ‘ಈ ತೀರ್ಮಾನವು ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ’ ಎಂದು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ.

ಇತ್ತೀಚೆಗೆ ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿತ್ತು. ಆದರೆ ಬಿಜೆಪಿಯ ಈ ಮುಸ್ಲಿಂ ವಿರೋಧಿ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶೇ. 4ರಷ್ಟು ಮೀಸಲಾತಿ ರದ್ದುಗೊಳಿಸಿರುವ ನಿರ್ಧಾರ ‘ತೀರ ಕಳಪೆ ಹಾಗೂ ದೋಷಪೂರಿತ’ ಎಂದು ಹೇಳಿದೆ.

ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಸರ್ಕಾರ ಏಪ್ರಿಲ್‌ 18ರವರೆಗೆ ಯಾವುದೇ ನೇಮಕಾತಿ ಅಥವಾ ದಾಖಲಾತಿಯನ್ನು ಮಾಡುವಂತಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ.

ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಹಾಗೂ ಬಿ ವಿ ನಾಗರತ್ನ ಅವರನ್ನೊಳಗೊಂಡ ಪೀಠವು, ”ಕರ್ನಾಟಕ ಸರ್ಕಾರದ ಆದೇಶದ ನಿರ್ಧಾರ ಪ್ರಕ್ರಿಯೆ ‘ಕಳಪೆ ಹಾಗೂ ದೋಷಪೂರಿತವಾಗಿದ್ದಂತೆ’ ಕಂಡು ಬರುತ್ತಿದೆ ಎಂದು ಹೇಳಿ, ಅದಕ್ಕೆ ತಡಯಾಜ್ಞೆ ನೀಡುವ ಇಂಗಿತ ವ್ಯಕ್ತಪಡಿಸಿದೆ.”

ಕರ್ನಾಟಕ ಸರ್ಕಾರದ ಪರ ಹಾಜರಿದ್ದ ನ್ಯಾಯವಾದಿ ತುಷಾರ್‌ ಮೆಹ್ತಾ ನ್ಯಾಯಾಲಯ ಆದೇಶದ ಪಾಲನೆಯ ಭರವಸೆ ನೀಡಿದರು. ಈ ವೇಳೆ ತುಷಾರ್ ಮೆಹ್ತಾ ಅವರು, ಸರ್ಕಾರದ ಪ್ರತಿಕ್ರಿಯೆಗಾಗಿ ಸಮಯಾವಕಾಶವನ್ನು ಕೇಳಿದರು. ”ಮಾರ್ಚ್ 24ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನುಸಾರ ವಯಾವುದೇ ಬಡ್ತಿಗಳು ಅಥವಾ ನೇಮಕಾತಿಗಳನ್ನು ಮಾಡುವುದಿಲ್ಲ” ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ಇನ್ನು ಮುಸ್ಲಿಂ ಸಮುದಾಯದ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ದುಷ್ಯಂತ್ ದವೆ ಹಾಗೂ ಗೋಪಾಲ್ ಶಂಕರನಾರಾಯಣನ್ ಅವರು, ”ಮುಸ್ಲಿಂ ಮೀಸಲಾತಿ ರದ್ದುಗೊಳಿಸುವ ಮೊದಲು ರಾಜ್ಯ ಸರ್ಕಾರ ಯಾವುದೇ ಅಧ್ಯಯನ ನಡೆಸಿಲ್ಲ ಮತ್ತು ಯಾವುದೇ ದತ್ತಾಂಶವನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿಲ್ಲ” ಎನ್ನುವ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಆಗ ನ್ಯಾಯಪೀಠವು, ”ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಯ ಆಧಾರದಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರೆ, ಆಯೋಗದ ಅಂತಿಮ ವರದಿ ಬರುವವರೆಗೂ ಸರ್ಕಾರ ಕಾಯಬಹುದಿತ್ತು. ಮುಸ್ಲಿಂ ಮೀಸಲಾತಿ ಸೌಲಭ್ಯ ಹಲವು ವರ್ಷಗಳಿಂದ ಸಿಗುತ್ತಿದೆ. ದಾಖಲೆಗಳ ಪ್ರಕಾರ ಆ ಸಮುದಾಯ ಬಹಳ ಹಿಂದುಳಿದಿದೆ. ಈಗ ದಿಢೀರನೆ ಹೇಗೆ ಬದಲಾಯಿತು?” ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದೆ.

ಒಕ್ಕಲಿಗರು ಮತ್ತು ಲಿಂಗಾಯತ ಸಮುದಾಯದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೊಹಟಗಿ, ”ಅರ್ಜಿಗಳಿಗೆ ತಮ್ಮ ಅಭಿಪ್ರಾಯ ನೀಡಲು ಅವಕಾಶ ಕೊಡುವವರೆಗೂ ಮಧ್ಯಂತರ ಆದೇಶ ನೀಡಬಾರದು” ಎಂದು ಮನವಿ ಮಾಡಿದರು.

ಈ ಹಿಂದೆ ಒಕ್ಕಲಿಗ ಸಮುದಾಯ ಶೇ. 4 ಮತ್ತು ಲಿಂಗಾಯತರು ಶೇ. 5 ಮೀಸಲಾತಿ ಹೊಂದಿದ್ದರು. ರಾಜ್ಯ ಸಚಿವ ಸಂಪುಟದ ನಿರ್ಧಾರದ ನಂತರ, ಒಕ್ಕಲಿಗರು ಶೇ. 6 ರಷ್ಟು ಮತ್ತು ಲಿಂಗಾಯತರು ಶೇ. 7 ರಷ್ಟು ಮೀಸಲಾತಿಯನ್ನು ಪಡೆಯುತ್ತಾರೆ.

ಒಬಿಸಿ ವರ್ಗದಿಂದ ಮುಸ್ಲಿಮರನ್ನು ತೆಗೆದುಹಾಕಿ ಶೇ. 10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವಿಭಾಗದಡಿಯಲ್ಲಿ ಅವರಿಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಮೀಸಲಾತಿ ಮಿತಿ ಸುಪ್ರೀಂಕೋರ್ಟ್ ನಿಗದಿ ಮಾಡಿದ ಶೇ 57ನ್ನು ಮೀರುತ್ತದೆ.

ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ವಿವಿಧಡೆ ಮುಸ್ಲಿಂ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದ್ದವು. ವಿಪಕ್ಷಗಳು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿವೆ.

ಸುಪ್ರೀಂ ಕೋರ್ಟ್‌ನ ಅಭಿಪ್ರಾಯದ ಬಳಿಕ ರಾಜ್ಯ ಕಾಂಗ್ರೆಸ್ ಘಟಕ ಸರಣಿ ಟ್ವೀಟ್ ಮಾಡಿದ್ದು, ”ಬಿಜೆಪಿ ಸರ್ಕಾರವು ತರಾತುರಿಯಲ್ಲಿ 4% ಮುಸ್ಲಿಂ ಮೀಸಲಾತಿ ತೆಗೆದು ಹಾಕಿ ಒಕ್ಕಲಿಗರಿಗೆ 2%, ಲಿಂಗಾಯತರಿಗೆ 2% ಹಂಚಿಕೆ ಮಾಡಿದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ‌ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಬಿಜೆಪಿಯ ತರಾತುರಿಯ ಈ ಚುನಾವಣಾ ಗಿಮಿಕ್ ಅವೈಜ್ಞಾನಿಕವಾಗಿದ್ದು ಇದಕ್ಕೆ ಸುಪ್ರೀಂಕೋರ್ಟ್ ಮಾನ್ಯತೆ ದೊರಕುವುದಿಲ್ಲ” ಎಂದು ಹೇಳಿದೆ.

”ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‌ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ದಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು @BJP4Karnataka
ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ. “ಅನುಷ್ಠಾನ ಅಸಾಧ್ಯ” ಎಂಬುದು ಸುಪ್ರೀಂ ಹೇಳುವ ಮೂಲಕ ಬಿಜೆಪಿಯ ಕಿವಿ ಮೇಲೆ ಹೂವು ಇಡುವ ಪ್ರಯತ್ನವನ್ನು ಬಯಲುಗೊಳಿಸಿದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

”ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ”ಮೀಸಲಾತಿ ಗಿಮಿಕ್” ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜನತೆಗೆ ಈಗ ನಿಮ್ಮ ಉತ್ತರವೇನು, ಸಾಬೂಬುಗಳೇನು? ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಹಾಗೂ ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ತರಾಟೆಗೆ ತಗೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...