Homeಮುಖಪುಟಪುಲ್ವಾಮ ದಾಳಿ ಸಂದರ್ಭದಲ್ಲಿ ಮೋದಿ ಸರ್ಕಾರದ ಅಸಮರ್ಥತೆಯಿಂದ ಸೈನಿಕರನ್ನು ಉಳಿಸಿಕೊಳ್ಳಲಾಗಲಿಲ್ಲ: ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲರ...

ಪುಲ್ವಾಮ ದಾಳಿ ಸಂದರ್ಭದಲ್ಲಿ ಮೋದಿ ಸರ್ಕಾರದ ಅಸಮರ್ಥತೆಯಿಂದ ಸೈನಿಕರನ್ನು ಉಳಿಸಿಕೊಳ್ಳಲಾಗಲಿಲ್ಲ: ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲರ ಗಂಭೀರ ಆರೋಪ

ಪ್ರಧಾನಿಗೆ ಭ್ರಷ್ಟಾಚಾರದಿಂದ ಯಾವುದೇ ಸಮಸ್ಯೆ ಇಲ್ಲ ಎಂದು ನಾನು ಖಚಿತವಾಗಿ ಹೇಳಬಲ್ಲೆ, ಪುಲ್ವಾಮ ದಾಳಿಯ ಸಂದರ್ಭದಲ್ಲಿ ನನ್ನ ಬಾಯಿ ಮುಚ್ಚಿಸಲಾಯಿತು - ಸತ್ಯ ಪಾಲ್ ಮಲಿಕ್

- Advertisement -
- Advertisement -

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ದಿ ವೈರ್ ಪತ್ರಕರ್ತ ಕರಣ್ ಥಾಪರ್‌ರವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, “ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು.

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಅದೇ ರೀತಿ ಗೋವಾದ ರಾಜ್ಯಪಾಲನಾಗಿದ್ದಾಗ ಅಲ್ಲಿನ ಭ್ರಷ್ಟಾಚಾರಗಳ ಕುರಿತು ಪ್ರಧಾನಿ ಮೋದಿಯವರಿಗೆ ದೂರು ನೀಡಿದ್ದೆ. ಅವುಗಳನ್ನು ಸರಿಪಡಿಸುವ ಬದಲು ನಿರ್ಲಕ್ಷ್ಯ ಮಾಡಿದ್ದಲ್ಲದೆ ನನ್ನನ್ನು ಗೋವಾದ ರಾಜ್ಯಪಾಲ ಸ್ಥಾನದಿಂದ ಕಿತ್ತು ಮೇಘಾಲಯಕ್ಕೆ ಕಳಿಸಿದರು. ಪ್ರಧಾನಿಯವರ ಸುತ್ತಲಿನ ಜನರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಆಗಾಗ್ಗೆ ಪ್ರಧಾನಿ ಕಚೇರಿಯ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಇದೆಲ್ಲವನ್ನೂ ಮೋದಿಯವರ ಗಮನಕ್ಕೆ ತಂದಿದ್ದೇನೆ, ಆದರೆ ಪ್ರಧಾನಿ ಕಾಳಜಿ ತೋರುತ್ತಿಲ್ಲ. ಹಾಗಾಗಿ ನಾನು ಖಚಿತವಾಗಿ ಹೇಳಬಲ್ಲೆ ಭ್ರಷ್ಟಾಚಾರ ಕುರಿತು ನರೇಂದ್ರ ಮೋದಿಯವರಿಗೆ ಹೆಚ್ಚಿನ ದ್ವೇಷವಿಲ್ಲ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

ಕಾಶ್ಮೀರದ ಬಗ್ಗೆ ಪ್ರಧಾನಿ ಮೋದಿಗೆ ಅಜ್ಞಾನ ಮತ್ತು ತಪ್ಪು ತಿಳುವಳಿಕೆ ಇದೆ. ಆ ಕಾರಣದಿಂದಲೇ ಅವರು ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ಆರ್ಟಿಕಲ್ 370 ಅನ್ನು ಕಿತ್ತು ಹಾಕಿ ರಾಜ್ಯದ ಅರ್ಹತೆ ತೆಗೆದುಹಾಕಿದರು. ಅದು ಅತ್ಯಂತ ದೊಡ್ಡ ಅಪರಾಧವಾಗಿದ್ದು, ಈ ಕೂಡಲೇ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಬೇಕು ಎಂದು ಮಲಿಕ್ ಒತ್ತಾಯಿಸಿದ್ದಾರೆ.

ರಾಷ್ಟ್ರಪತಿ ಮುರ್ಮುರವರು ತಮ್ಮ ಭೇಟಿಗೆ ನೀಡುವ ಎಲ್ಲಾ ಸಮಯಗಳನ್ನು ನೇರವಾಗಿ ಪ್ರಧಾನಿ ಕಾರ್ಯಾಲಯ ಮೇಲ್ವಿಚಾರಣೆ ಮಾಡುತ್ತದೆ. ಒಮ್ಮೆ ನಾನು ರಾಷ್ಟ್ರಪತಿಗಳನ್ನು ನೋಡಲು ರಾಷ್ಟ್ರಪತಿ ಭವನಕ್ಕೆ ಹೊರಟಿದ್ದಾಗ ದಾರಿ ಮಧ್ಯೆ ನನಗೆ ನೀಡಿದ್ದ ಅವಕಾಶವನ್ನು ರದ್ದುಗೊಳಿಸಲಾಯಿತು ಎಂದು ಮಲಿಕ್ ಆರೋಪಿಸಿದ್ದಾರೆ.

ಪ್ರಧಾನ ಮಂತ್ರಿಯವರು ಬಿಬಿಸಿಯನ್ನು ನಿರ್ವಹಿಸುತ್ತಿರುವ ರೀತಿ ಭಯಾನಕ ತಪ್ಪಿನಿಂದ ಕೂಡಿದೆ. ಅದೇ ರೀತಿ ಸಂಸತ್ತಿನಲ್ಲಿ ಮಾತನಾಡಲು ರಾಹುಲ್ ಗಾಂಧಿಗೆ ಅನುಮತಿ ನಿರಾಕರಿಸಿದ್ದು ಮೋದಿ ಸರ್ಕಾರದ ಮತ್ತೊಂದು ತಪ್ಪಾಗಿದೆ. ಅದಾನಿ ಹಗರಣದ ಬಗ್ಗೆ ರಾಹುಲ್ ಗಾಂಧಿ ಸರಿಯಾದ ಪ್ರಶ್ನೆಗಳನ್ನು ಎತ್ತಿದ್ದಾರೆ. ಅದಕ್ಕೆ ಪ್ರಧಾನಿ ಉತ್ತರಿಸಲು ಸಾಧ್ಯವಾಗದ ಕಾರಣ ಅವರನ್ನು ಅನರ್ಹ ಮಾಡಲಾಗಿದೆ. ಮುಸಲ್ಮಾನರ ಬಗ್ಗೆ ಪ್ರಧಾನಿ ಮತ್ತು ಹಲವಾರು ಸಚಿವರು ನಡೆಸುತ್ತಿರುವ ವರ್ತನೆಯು ಸಹಿಸಲು ಅಸಾಧ್ಯವಾಗಿದೆ ಎಂದು ಮಲಿಕ್ ಹೇಳಿದ್ದಾರೆ. ಸರ್ಕಾರವು ‘ಮೂರನೇ ದರ್ಜೆಯ ಜನರನ್ನು’ ರಾಜ್ಯಪಾಲರನ್ನಾಗಿ ನೇಮಿಸಿದೆ ಎಂದು ಮಲಿಕ್ ಆರೋಪಿಸಿದ್ದಾರೆ.

ಪ್ರಧಾನ ಮಂತ್ರಿಯ ಬಗ್ಗೆ ತಾನು ಹೇಳಿರುವ ಎಲ್ಲಾ ಮಾತುಗಳಿಗೂ ಬದ್ಧನಾಗಿದ್ದೇನೆ ಮತ್ತು ಯಾವುದೇ ಪರಿಣಾಮಗಳ ಬಗ್ಗೆ ಚಿಂತಿಸುವುದಿಲ್ಲ ಅಥವಾ ಹೆದರುವುದಿಲ್ಲ ಎಂದು ಮಲಿಕ್ ಖಚಿತಪಡಿಸಿದ್ದಾರೆ. ತನಗೆ ಕನಿಷ್ಠ ಭದ್ರತೆಯನ್ನು ನೀಡಲಾಗಿದೆ. ಅಧಿಕೃತ ಭದ್ರತಾ ಸಮಿತಿಯು ಶಿಫಾರಸು ಮಾಡಿದ್ದಕ್ಕಿಂತ ಕಡಿಮೆಯಿದೆ. ಆದರೆ ಅದರ ಬಗ್ಗೆ ನನಗೆ ಚಿಂತೆಯಿಲ್ಲ ಎಂದು ಅವರು ಹೇಳಿದ್ದಾರೆ.

ಪೂರ್ಣ ಸಂದರ್ಶನ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...