Homeಮುಖಪುಟಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

ಬಂಗಾಳದ ಎಲ್ಲಾ ಅಕ್ರಮಗಳ ಕಿಂಗ್‌ಪಿನ್ ಸುವೆಂದು ಅಧಿಕಾರಿ: ಶಾ ಆರೋಪಗಳಿಗೆ ಟಿಎಂಸಿ ತಿರುಗೇಟು

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಸುದೀರ್ಘ ಪ್ರತ್ಯಾರೋಪದೊಂದಿಗೆ ತಿರುಗೇಟು ನೀಡಿದೆ.

ಬಿರ್ಭೂಮ್ ಜಿಲ್ಲೆಯ ರ್ಯಾಲಿಯಲ್ಲಿ ಅಮಿತ್ ಶಾ ಅವರು, ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ಹೊಗಳಿದ್ದರು. ಅದಕ್ಕೆ ತಿರುಗೇಟು ನೀಡಿದ ಟಿಎಂಸಿ ‘ಎಲ್ಲಾ ಅಕ್ರಮಗಳ ಕಿಂಗ್‌ಪಿನ್’ ಅವರೇ ಎಂದು ಹೇಳಿದೆ.

”ಬಂಗಾಳದ ಜನರು ನಮಗೆ 77 ಸ್ಥಾನಗಳನ್ನು ನೀಡಿದ್ದಾರೆ, ಮತ್ತು ಇದು ಬಿಜೆಪಿಗೆ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿಧಾನಸೌಧದಲ್ಲಿ, ನಮ್ಮ ಶಾಸಕರೊಂದಿಗೆ, ನಮ್ಮ ನಾಯಕ ಸುವೇಂದು ಅಧಿಕಾರಿ ದೀದಿಯ ದಾದಾಗಿರಿಯ ವಿರುದ್ಧ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದಾರೆ. ಅವರು ದೀದಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ. ಬಿಜೆಪಿಯು ಬಂಗಾಳದಲ್ಲಿ ಹೋರಾಡುತ್ತಿರುವ ಕಾರಣ, ಇಲ್ಲಿಯ ನಿಮ್ಮ ಸ್ಥಳೀಯ ನಾಯಕ, ಗೋವು ಕಳ್ಳಸಾಗಣೆದಾರನನ್ನು ಕಂಬಿ ಹಿಂದೆ ಹಾಕಲಾಗಿದೆ” ಎಂದು ಇತ್ತೀಚೆಗೆ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಅನುಬ್ರತಾ ಮೊಂಡಲ್ ಅವರನ್ನು ಉಲ್ಲೇಖಿಸಿ ಅಮಿತ್ ಶಾ ಹೇಳಿದರು.

”ವಾಷಿಂಗ್ ಮೆಷಿನ್ ರಾಜಕೀಯ”ದೊಂದಿಗೆ, ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಕಟುವಾಗಿ ಟೀಕಿಸಿತು. ಸುವೆಂದು ಅಧಿಕಾರಿಯ ಮೇಲೆ ಆರೋಪ ಮಾಡಿರುವ ಹಲವಾರು ಹಗರಣಗಳನ್ನು ತೋರಿಸಿದೆ. ಅವರು ಬಿಜೆಪಿಗೆ ಹೋದಬಳಿಕ ಶುಭ್ರವಾಗಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

”ಬಂಗಾಳ ಸರ್ಕಾರದ ಮೇಲಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಹೋರಾಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಆದರೆ, ಸುವೇಂದು ಅಧಿಕಾರಿ ಅವರೇ ವಿವಾದಗಳಲ್ಲಿ ಸಿಲುಕಿದ್ದಾರೆ. ಶಾರದಾ ಹಗರಣದಲ್ಲಿ ಭಾಗಿಯಾಗಿದ್ದರಿಂದ ಹಿಡಿದು ನೇಮಕಾತಿ ಅಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ. ಬಂಗಾಳದಲ್ಲಿ ನಡೆದ ಎಲ್ಲ ಅಕ್ರಮಗಳ ಕಿಂಗ್‌ಪಿನ್ ಅಧಿಕಾರಿ ಅವರೇ ಆಗಿದ್ದಾರೆ. ಅವರ ಅಪರಾಧಗಳ ಪ್ರಮಾಣ ಎಷ್ಟಿದೆ ಎಂದರೆ, ನಾರದ ಸ್ಟಿಂಗ್ ಆಪರೇಷನ್‌ನಲ್ಲಿ ಅಧಿಕಾರಿ ಹಣ ತೆಗೆದುಕೊಳ್ಳುವ ವೀಡಿಯೊದಲ್ಲಿ ಕಂಡುಬಂದಿದೆ. ಆದರೂ, ಅಧಿಕಾರಿ ಬಿಜೆಪಿಯ ‘ವಾಶಿಂಗ್ ಮೆಷಿನ್’ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ” ಎಂದು ಟಿಎಂಸಿ ಹೇಳಿದೆ.

ಗೃಹ ಸಚಿವರು ರಾಜ್ಯದಲ್ಲಿ ಹಿಂಸಾಚಾರ, ಅಕ್ರಮ ಒಳನುಸುಳುವಿಕೆ ಮತ್ತು ಹಸು ಕಳ್ಳಸಾಗಣೆಯ ವಿಷಯವನ್ನು ಪ್ರಸ್ತಾಪಿಸಿ, ಈ ಅಪರಾಧಗಳನ್ನು ತಡೆಯಲು ಏಕೈಕ ಮಾರ್ಗವೆಂದರೆ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಅಧಿಕಾರಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

”ಈ ದೀದಿ ಮತ್ತು ಭಟಿಜಾ (ತೃಣಮೂಲ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತ, ಇದು ದುರಾಡಳಿತವಲ್ಲವೇ? ಮತ್ತು ಈ ದುರಾಡಳಿತವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಬಿಜೆಪಿ. ಬಂಗಾಳವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಬೇಕು ಮತ್ತು ಅದನ್ನು ಮಾಡಲು ಬಿಜೆಪಿ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಒಳನುಸುಳುವಿಕೆ ಬೇಕೇ? ನುಸುಳುವಿಕೆಯನ್ನು ತಡೆಯಲು ಬಿಜೆಪಿಯೇ ಏಕೈಕ ಮಾರ್ಗವಾಗಿದೆ. ನಿಮಗೆ ಬಂಗಾಳದಲ್ಲಿ ಗೋವು ಕಳ್ಳಸಾಗಣೆ ಬೇಕೇ? ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರಿಂದ ನುಸುಳುವಿಕೆ ಮತ್ತು ಗೋವು ಕಳ್ಳಸಾಗಣೆ ಎರಡೂ ನಿಂತಿದೆ ಎಂದು ಅಮಿತ್ ಶಾ ಹೇಳಿದರು.

”ಬಂಗಾಳದಲ್ಲಿ ಕಮಲವನ್ನು ಒಮ್ಮೆ ಅರಳುವಂತೆ ಮಾಡಿ ಮತ್ತು ಯಾವುದೇ ಬಾಂಬ್ ಸ್ಫೋಟಗಳು ನಡೆಯುವುದಿಲ್ಲ ಮತ್ತು ಇಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ಯಾವುದೇ ದಾಳಿಗಳು ನಡೆಯುವುದಿಲ್ಲ, ಚಿತ್ರಹಿಂಸೆ ಇರುವುದಿಲ್ಲ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತೊಡೆದುಹಾಕಲು ಏಕೈಕ ಮಾರ್ಗವೆಂದರೆ ಭಾರತೀಯ ಜನತಾ ಪಕ್ಷ,” ಎಂದು ಹೇಳಿದರು.

”ರಿಶ್ರಾ ಮತ್ತು ಹೌರಾದಲ್ಲಿ ರಾಮನವಮಿ ಮೆರವಣಿಗೆಗಳ ಮೇಲೆ ದಾಳಿಗಳು ನಡೆದಿವೆ. ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಮಾಡಬೇಕೆ ಅಥವಾ ಬೇಡವೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಬಂಗಾಳದಲ್ಲಿ ರಾಮನವಮಿ ಮೆರವಣಿಗೆಗಳನ್ನು ಶಾಂತಿಯುತವಾಗಿ ನಡೆಸಲಾಗದಿದ್ದರೆ, ನಾವು ಮೆರವಣಿಗೆ ಹೇಗೆ ಮಾಡಲು ಸಾಧ್ಯ? ತೃಣಮೂಲ ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣದಿಂದಾಗಿ ಇದಕ್ಕೆ ಉತ್ತೇಜನ ಸಿಕ್ಕಿದೆ. ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿಜಿಗೆ ಒಮ್ಮೆ 35 ಸ್ಥಾನಗಳನ್ನು ನೀಡಿ, ಇಲ್ಲಿ ಬಿಜೆಪಿ ಸರಕಾರವನ್ನು ರಚಿಸಿ, ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡಲು ಯಾರಿಗೂ ಧೈರ್ಯವಿರುವುದಿಲ್ಲ ಎಂದು ನಿಮಗೆ ಭರವಸೆ ನೀಡಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು.

ಅಮಿತ್ ಶಾ ದಾಳಿಗೆ ಟಿಎಂಸಿ ಪಕ್ಷದ ಹೇಳಿಕೆಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ”ಬಿರ್ಭೂಮ್‌ನಲ್ಲಿ ನಡೆದ ತಮ್ಮ ಸಾರ್ವಜನಿಕ ಸಭೆಯಲ್ಲಿ, ಬಂಗಾಳ ಸರ್ಕಾರವು ರಾಮನವಮಿ ಮೆರವಣಿಗೆಗಳನ್ನು ತಡೆಯುತ್ತಿದೆ ಎಂದು ಶಾ ಹೇಳಿದರು. ಆದರೂ, ಈ ರ್ಯಾಲಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಂದೂಕು ಮತ್ತು ಕತ್ತಿಗಳನ್ನು ಏಕೆ ಝಳಪಿಸುತ್ತಿದ್ದಾರೆ ಎನ್ನುವ ಬಗ್ಗೆ ಬಾಯಿಬಿಡಬೇಕು ಆದರೆ ಆ ವಿಚಾರದಲ್ಲಿ ಅವರು ಮೌನವಾಗಿದ್ದಾರೆ. ಬಿಹಾರದ ಮುಂಗೇರ್‌ನಿಂದ ಹೌರಾ ಪೊಲೀಸರು ಬಂಧಿಸಿದ ಆರೋಪಿ ಸುಮಿತ್ ಶಾ ಜೊತೆ ಬಿಜೆಪಿಯ ಸಂಪರ್ಕವಿರುವ ಬಗ್ಗೆ ಅವರು ಮೌನವಾಗಿದ್ದರು ಎಂದು ಹೇಳಿದೆ.

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಬಂಗಾಳ ಸರ್ಕಾರ ಉರುಳಿಹೋಗುತ್ತದೆ ಎಂಬ ಶಾ ಹೇಳಿಕೆಯು ರಾಜ್ಯದ ವಿರುದ್ಧದ ”ಪಿತೂರಿ”ಯನ್ನು ಬಹಿರಂಗಪಡಿಸಿದೆ ಎಂದು ಟಿಎಂಸಿ ಹೇಳಿದೆ.

”ಸರ್ಕಾರವನ್ನು ಉರುಳಿಸುವ ಅಮಿತ್ ಶಾ ಅವರ ಹೇಳಿಕೆಗಳು ಬಂಗಾಳದ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿದೆ, ಬಂಗಾಳದ ವಿರುದ್ಧ ಪಿತೂರಿ ನಡೆದಿದೆ ಎಂಬ ಆರೋಪವನ್ನು ಪುನರುಚ್ಚರಿಸಿದೆ.

”ಬಂಗಾಳದಿಂದ ಬಿಜೆಪಿಗೆ 35 ಸ್ಥಾನಗಳ ಅವರ ಹಕ್ಕುಗಳ ಬಗ್ಗೆ, 2021 ರ ಬಂಗಾಳ ಚುನಾವಣೆಗೆ ಮೊದಲು ‘ಅಬ್ಕಿ ಬಾರ್ 200 ಪಾರ್’ ಎಂದು ಹೇಳಿದ್ದ ಶಾ ಅವರೇ. ಕೊನೆಯಲ್ಲಿ ಬಿಜೆಪಿಗೆ ಮೂರು ಅಂಕಿಗಳ ಅಂಕವನ್ನು ಕೂಡ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಮುಂಬರುವ ಪಂಚಾಯತ್ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲೂ ಇದೇ ಮುಂದುವರೆಯುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...