Homeಕರ್ನಾಟಕನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

ನಟ ಚೇತನ್‌ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ

- Advertisement -
- Advertisement -

ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಸ್ವತಃ ಚೇತನ್ ಮಾಹಿತಿ ನೀಡಿದ್ದಾರೆ.

ಸಾಗರೋತ್ತರ ಭಾರತೀಯ ನಾಗರೀಕ (OCI) ವೀಸಾ ಹೊಂದಿದ್ದ ಚೇತನ್, ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ. ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ.

ಹಿಂದುತ್ವ ಸಿದ್ಧಾಂತದ ಸುಳ್ಳುಗಳ ಬಗ್ಗೆ ಪ್ರಶ್ನಿಸಿ ಟ್ವಿಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21ರಂದು ಅವರನ್ನು ಬಂಧಿಸಿದ್ದರು. ಈ ಬಗ್ಗೆ ಪ್ರತಿಕಾ ಗೋಷ್ಠಿ ನಡೆಸಿದ ಚೇತನ್, ”23 ವರ್ಷಗಳ ಕಾಲ ನಾನು ಇದ್ದಿದ್ದು, ಓದಿದ್ದು ಅಮೆರಿಕಾದಲ್ಲಿ. ಆ ನಂತರ, ಸೇವೆ ಸಲ್ಲಿಸಲು ಭಾರತಕ್ಕೆ ಬಂದೆ. ಆದಾದ ನಂತರ ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗಾಗಿ 528 ಮನೆಗಳನ್ನು ಕಟ್ಟಿಸಿದ್ದೇನೆ. ನಮ್ಮ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ. ಬ್ರಾಹ್ಮಣ್ಯ ಲಾಬಿ ಎನ್ನುವ ಮಾತು ಹೇಳಿದ್ದಕ್ಕೆ ನನ್ನ ಮೇಲೆ 295A ಕೇಸ್ ಹಾಕಿದರು. ಗನ್ ಮ್ಯಾನ್ ನನ್ನು ಒಂದೂವರೆ ವರ್ಷದ ಹಿಂದೆಯೇ ತೆಗೆದಿದ್ದಾರೆ. ಒಂದು ಸತ್ಯದ ಟ್ವಿಟ್ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಮೂರು ದಿನ ಜೈಲಿಗೆ ಕಳುಹಿಸಿದ್ದರು” ಎಂದು ಹೇಳಿದ್ದಾರೆ.

”ನನಗೆ ಓಸಿಐ (ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ತದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ (2022ರ ಜೂನ್ 8) ಶೋಕಾಸ್ ನೋಟೀಸ್ ನೀಡಿದದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದ್ದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಅಂತ ವೀಸಾ ರದ್ದು ನೋಟೀಸ್ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು ಹಾಕುವುದಲ್ಲದೇ, ಜೈಲಿಗೆ ಹಾಕಿ ಹಿಂಸೆ ಮಾಡೋದಲ್ಲದೆ, ನಾನು ದೇಶದಲ್ಲಿ ಇರಲೇ ಬಾರದು ಅಂತಾ ವೀಸಾ ರದ್ದು ಮಾಡಿದ್ದಾರೆ. ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ಧವಾಗಿ ತಡೆಯಾಜ್ಞೆ ತರಲಿದ್ದೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ತಡೆಯಾಜ್ಞೆ ತರುತ್ತೇನೆ” ಎಂದು ಚೇತನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

”ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರ ಮೇಲೆ ಸಂಶೋಧನಾ ಪದವಿ ತೆಗೆದುಕೊಂಡು 2005ರಲ್ಲಿ ನಾನು ಭಾರತಕ್ಕೆ ಬಂದಿದ್ದೇನೆ. 2015ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ. ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿದ್ದಾರೆ 2018 ರಲ್ಲಿ ನನಗೆ ಓಸಿಐ ಕೊಟ್ಟಿದ್ದಾರೆ. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ಇದೇ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ.ಈಗ ತಕ್ಷಣವೇ ಓಸಿಐ ರದ್ದು ಮಾಡಲಾಗಿದೆ ಅಂತ ನೋಟೀಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ” ಎಂದು ಚೇತನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...