Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ರಾತ್ರಿಯೇ ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ  ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ತಡರಾತ್ರಿ ವರೆಗೂ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರೂ ಬಿಜೆಪಿಗೆ ಯಾವುದೇ ಉಪಯೋಗವಾಗಲಿಲ್ಲ. ಅಂತಿಮವಾಗಿ ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆತರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಗಳು ಶೆಟ್ಟರ್ ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪುಷ್ಟಿ ನೀಡುತ್ತಿವೆ. ಇಂದು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಸೇರಬಹುದು ಎಂದು ರಾಜಕೀಯ ವಲಯದಿಂದ ಕೇಳಿಬರುತ್ತಿವೆ.

ಶನಿವಾರ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್‌, ನಾಳೆ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದರು.

”ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ 80 ವರ್ಷ, ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ನಾನು ಈಗ ಸೀನಿಯರ್ ಲೀಡರ್. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಂಕ್‌ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಎಂದು ಹೇಳಿದ್ದರು ಆದರೆ ಪಟ್ಟಿಯಲ್ಲಿ ಈ ವರೆಗೂ ನನ್ನ ಹೆಸರು ಬರುತ್ತಿಲ್ಲ. ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಯಾರು ಏನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ಆದರೆ ಈಗ ನಾನು ಹೇಳಲ್ಲ. ಇನ್ನುಮುಂದೆ ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

”ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ” ಎಂದು ಭಾವುಕರಾದರು.

”ನನಗೆ ಟಿಕೆಟ್ ಕೊಡದೇ ಇರುವುದಕ್ಕೆ ನಮ್ಮ ಲಿಂಗಾಯತ ಸಮಾಜದವರಿಗೆ ಬಹಳಷ್ಟು ನೋವಾಗಿದೆ. ನಾನು ಹೊರ ಹೋದ ಮೇಲೆ ಅಸಮಾಧಾನಿತರ ಸಂಪರ್ಕ ಮಾಡಬಹುದು. ಈಗಾಗಲೇ ಕೆಲವರು ಸಂಪರ್ಕ ಮಾಡಿದ್ದಾರೆ. ಮೂರು ತಿಂಗಳಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮೊದಲಿನ ಬಿಜೆಪಿಯಾಗಿ ಉಳದಿಲ್ಲ. ಬಿಜೆಪಿ ಕೆಲವು ವ್ಯಕ್ತಿಗಳಿಂದ ಹಾಳಾಗುತ್ತಿದೆ. ಸ್ವಂತ ಹಿತಾಸಕ್ತಿಗಾಗಿ ಪಕ್ಷ ಹಾಳಾಗುತ್ತಿದೆ” ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಕಿಡಿಕಾರಿದರು.

”ಟಿಕೆಟ್ ಇಲ್ಲ ಅಂದಾಗ ನನ್ನ ಮನಸ್ಸಿಗೆ ಆಘಾತ ಅಗಿತ್ತು. ನನ್ನ ಬಳಿ ಬಂದು ಮಾತನಾಡಿದವರೂ ಕೂಡ ಅದಕ್ಕೆ ಉತ್ತರ ಕೊಡಲಿಲ್ಲ. ನನಗೆ ರಾಜಕೀಯ ನಿವೃತ್ತಿ ಆಗಬೇಕು ಎಂದು ಹೇಳಿದ್ದರೆ ನಾನು ಗೌರವಯುತವಾಗಿ ಹೋಗುತ್ತಿದ್ದೆನು. ನಮ್ಮಂತ ಲೀಡರ್‌ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಡ್ ಕೊಡುವುದಕ್ಕೆ ಓಕೆ ಎಂದು ಹೇಳಿದರು. ಇದಕ್ಕೆ ನಾನು, ಜಗದೀಶ್ ಶೆಟ್ಟರ್​ಗೆ ಯಾಕೆ ಇಲ್ಲ? ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಅವರ ಬಳಿ ಉತ್ತರ ಇರಲಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...