Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ರಾತ್ರಿಯೇ ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ  ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ತಡರಾತ್ರಿ ವರೆಗೂ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರೂ ಬಿಜೆಪಿಗೆ ಯಾವುದೇ ಉಪಯೋಗವಾಗಲಿಲ್ಲ. ಅಂತಿಮವಾಗಿ ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆತರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಗಳು ಶೆಟ್ಟರ್ ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪುಷ್ಟಿ ನೀಡುತ್ತಿವೆ. ಇಂದು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಸೇರಬಹುದು ಎಂದು ರಾಜಕೀಯ ವಲಯದಿಂದ ಕೇಳಿಬರುತ್ತಿವೆ.

ಶನಿವಾರ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್‌, ನಾಳೆ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದರು.

”ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ 80 ವರ್ಷ, ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ನಾನು ಈಗ ಸೀನಿಯರ್ ಲೀಡರ್. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಂಕ್‌ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಎಂದು ಹೇಳಿದ್ದರು ಆದರೆ ಪಟ್ಟಿಯಲ್ಲಿ ಈ ವರೆಗೂ ನನ್ನ ಹೆಸರು ಬರುತ್ತಿಲ್ಲ. ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಯಾರು ಏನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ಆದರೆ ಈಗ ನಾನು ಹೇಳಲ್ಲ. ಇನ್ನುಮುಂದೆ ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

”ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ” ಎಂದು ಭಾವುಕರಾದರು.

”ನನಗೆ ಟಿಕೆಟ್ ಕೊಡದೇ ಇರುವುದಕ್ಕೆ ನಮ್ಮ ಲಿಂಗಾಯತ ಸಮಾಜದವರಿಗೆ ಬಹಳಷ್ಟು ನೋವಾಗಿದೆ. ನಾನು ಹೊರ ಹೋದ ಮೇಲೆ ಅಸಮಾಧಾನಿತರ ಸಂಪರ್ಕ ಮಾಡಬಹುದು. ಈಗಾಗಲೇ ಕೆಲವರು ಸಂಪರ್ಕ ಮಾಡಿದ್ದಾರೆ. ಮೂರು ತಿಂಗಳಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮೊದಲಿನ ಬಿಜೆಪಿಯಾಗಿ ಉಳದಿಲ್ಲ. ಬಿಜೆಪಿ ಕೆಲವು ವ್ಯಕ್ತಿಗಳಿಂದ ಹಾಳಾಗುತ್ತಿದೆ. ಸ್ವಂತ ಹಿತಾಸಕ್ತಿಗಾಗಿ ಪಕ್ಷ ಹಾಳಾಗುತ್ತಿದೆ” ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಕಿಡಿಕಾರಿದರು.

”ಟಿಕೆಟ್ ಇಲ್ಲ ಅಂದಾಗ ನನ್ನ ಮನಸ್ಸಿಗೆ ಆಘಾತ ಅಗಿತ್ತು. ನನ್ನ ಬಳಿ ಬಂದು ಮಾತನಾಡಿದವರೂ ಕೂಡ ಅದಕ್ಕೆ ಉತ್ತರ ಕೊಡಲಿಲ್ಲ. ನನಗೆ ರಾಜಕೀಯ ನಿವೃತ್ತಿ ಆಗಬೇಕು ಎಂದು ಹೇಳಿದ್ದರೆ ನಾನು ಗೌರವಯುತವಾಗಿ ಹೋಗುತ್ತಿದ್ದೆನು. ನಮ್ಮಂತ ಲೀಡರ್‌ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಡ್ ಕೊಡುವುದಕ್ಕೆ ಓಕೆ ಎಂದು ಹೇಳಿದರು. ಇದಕ್ಕೆ ನಾನು, ಜಗದೀಶ್ ಶೆಟ್ಟರ್​ಗೆ ಯಾಕೆ ಇಲ್ಲ? ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಅವರ ಬಳಿ ಉತ್ತರ ಇರಲಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...