Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ರಾತ್ರಿಯೇ ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ  ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ತಡರಾತ್ರಿ ವರೆಗೂ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರೂ ಬಿಜೆಪಿಗೆ ಯಾವುದೇ ಉಪಯೋಗವಾಗಲಿಲ್ಲ. ಅಂತಿಮವಾಗಿ ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆತರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಗಳು ಶೆಟ್ಟರ್ ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪುಷ್ಟಿ ನೀಡುತ್ತಿವೆ. ಇಂದು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಸೇರಬಹುದು ಎಂದು ರಾಜಕೀಯ ವಲಯದಿಂದ ಕೇಳಿಬರುತ್ತಿವೆ.

ಶನಿವಾರ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್‌, ನಾಳೆ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದರು.

”ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ 80 ವರ್ಷ, ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ನಾನು ಈಗ ಸೀನಿಯರ್ ಲೀಡರ್. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಂಕ್‌ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಎಂದು ಹೇಳಿದ್ದರು ಆದರೆ ಪಟ್ಟಿಯಲ್ಲಿ ಈ ವರೆಗೂ ನನ್ನ ಹೆಸರು ಬರುತ್ತಿಲ್ಲ. ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಯಾರು ಏನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ಆದರೆ ಈಗ ನಾನು ಹೇಳಲ್ಲ. ಇನ್ನುಮುಂದೆ ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

”ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ” ಎಂದು ಭಾವುಕರಾದರು.

”ನನಗೆ ಟಿಕೆಟ್ ಕೊಡದೇ ಇರುವುದಕ್ಕೆ ನಮ್ಮ ಲಿಂಗಾಯತ ಸಮಾಜದವರಿಗೆ ಬಹಳಷ್ಟು ನೋವಾಗಿದೆ. ನಾನು ಹೊರ ಹೋದ ಮೇಲೆ ಅಸಮಾಧಾನಿತರ ಸಂಪರ್ಕ ಮಾಡಬಹುದು. ಈಗಾಗಲೇ ಕೆಲವರು ಸಂಪರ್ಕ ಮಾಡಿದ್ದಾರೆ. ಮೂರು ತಿಂಗಳಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮೊದಲಿನ ಬಿಜೆಪಿಯಾಗಿ ಉಳದಿಲ್ಲ. ಬಿಜೆಪಿ ಕೆಲವು ವ್ಯಕ್ತಿಗಳಿಂದ ಹಾಳಾಗುತ್ತಿದೆ. ಸ್ವಂತ ಹಿತಾಸಕ್ತಿಗಾಗಿ ಪಕ್ಷ ಹಾಳಾಗುತ್ತಿದೆ” ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಕಿಡಿಕಾರಿದರು.

”ಟಿಕೆಟ್ ಇಲ್ಲ ಅಂದಾಗ ನನ್ನ ಮನಸ್ಸಿಗೆ ಆಘಾತ ಅಗಿತ್ತು. ನನ್ನ ಬಳಿ ಬಂದು ಮಾತನಾಡಿದವರೂ ಕೂಡ ಅದಕ್ಕೆ ಉತ್ತರ ಕೊಡಲಿಲ್ಲ. ನನಗೆ ರಾಜಕೀಯ ನಿವೃತ್ತಿ ಆಗಬೇಕು ಎಂದು ಹೇಳಿದ್ದರೆ ನಾನು ಗೌರವಯುತವಾಗಿ ಹೋಗುತ್ತಿದ್ದೆನು. ನಮ್ಮಂತ ಲೀಡರ್‌ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಡ್ ಕೊಡುವುದಕ್ಕೆ ಓಕೆ ಎಂದು ಹೇಳಿದರು. ಇದಕ್ಕೆ ನಾನು, ಜಗದೀಶ್ ಶೆಟ್ಟರ್​ಗೆ ಯಾಕೆ ಇಲ್ಲ? ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಅವರ ಬಳಿ ಉತ್ತರ ಇರಲಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...