Homeಮುಖಪುಟಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

ಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಅಹಮದಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಗುಜರಾತ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಸಲ್ಲಿಸಿದ ಮಾನನಷ್ಟಕ್ಕಾಗಿ ಕ್ರಿಮಿನಲ್ ವಿಚಾರಣೆಯನ್ನು ವಿಲೇವಾರಿ ಮಾಡಿದ ನಂತರ, ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಜಯೇಶ್‌ಭಾಯ್ ಲಿಂಬಾಭಾಯ್ ಪಟೇಲ್ ಅವರ ನ್ಯಾಯಾಲಯವು ಎಎಪಿ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಿದೆ. ಮೇ 23ರಂದು ನ್ಯಾಯಾಲಯದ ಮುಂದೆ ಇಬ್ಬರು ನಾಯಕರಿಗೆ ಹಾಜರಾಗುವಂತೆ ಆದೇಶಿಸಲಾಗಿದೆ.

”ಮೋದಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತಮ್ಮ ಹಳೆಯ ವಿದ್ಯಾರ್ಥಿ ಪ್ರಧಾನಿಯಾಗಿದ್ದಾನೆ ಎಂದು ಸಂಭ್ರಮಿಸಬೇಕಿತ್ತು. ಆದರೆ ಅವರು ಅದನ್ನು ಹೇಳದೇ ಮುಚ್ಚಿಟ್ಟಿದ್ದಾರೆ. ಪ್ರಧಾನಿ ಅವರು ಪದವಿ ದಾಖಲಾತಿಯನ್ನು ತೋರಿಸಲಾಗುತ್ತಿಲ್ಲ ಏಕೆಂದರೆ ಆ ಪದವಿ ನಕಲಿಯಾಗಿರಬಹುದು, ಅದನ್ನು ನೀಡಿದ ವಿಶ್ವವಿದ್ಯಾಲಯವನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು… ಒಂದು ವೇಳೆ ಪದವಿ ದಾಖಲೆ ಸತ್ಯ ಆಗಿದ್ದರೆ, ಅದರ ಮಾಹಿತಿಯನ್ನು ವಿಶ್ವವಿದ್ಯಾಯ ಏಕೆ ಬಹಿರಂಗಪಡಿಸುತ್ತಿಲ್ಲ?” ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಅವರ ಇಂತಹ ಕೆಲವು ಹೇಳಿಕೆಗಳು ಮಾನಹಾನಿಕರ ಎಂದು ಪಟೇಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

ಸಂಜಯ್ ಸಿಂಗ್ ಅವರು ಪ್ರಧಾನಿ ಪದವಿ ವಿಚಾರದಲ್ಲಿ ವಿಶ್ವವಿದ್ಯಾಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಪಿಯೂಷ್ ಪಟೇಲ್ ದೂರಿನಲ್ಲಿ ತಿಳಿಸಿದ್ದಾರೆ.

ಪಟೇಲ್ ಪ್ರಕಾರ, ಕೇಜ್ರಿವಾಲ್ ಅವರು ಏಪ್ರಿಲ್ 1 ರಂದು ಪತ್ರಿಕಾಗೋಷ್ಠಿಯಲ್ಲಿ ಮತ್ತು ಸಿಂಗ್ ಏಪ್ರಿಲ್ 2 ರಂದು ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ “ಮಾನಹಾನಿಕರ ಹೇಳಿಕೆಗಳನ್ನು” ಮಾಡಿದ್ದಾರೆ.

”ವೈಯಕ್ತಿಕ ವಿಚಾರಗಳಿಗಾಗಿ ಆರ್‌ಟಿಐ ಯೋಗ್ಯವಲ್ಲ ಹಾಗಾಗಿ ಆ ರೀತಿ ಮಾಹಿತಿ ಪಡೆಯುವುದು ಮಾನನಷ್ಟ ಎಂದು ಪಟೇಲ್ ವಾದಿಸಿದರು.

ಗುಜರಾತ್ ಹೈಕೋರ್ಟ್ ಇತ್ತಿಚಿಗಷ್ಟೇ ಪ್ರಧಾನಿ ಮೋದಿ ಅವರ ಪದವಿ ಕುರಿತ ಮಾಹಿತಿ ಕೇಳಿದ್ದ ಅರ್ಜಿಗೆ ಸಂಬಂಧಿಸಿ ಆದೇಶ ನೀಡಿತ್ತು.

ಪ್ರಧಾನಿ ಮೋದಿ ಅವರ ಪದವಿಗಳಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ “ಮಾಹಿತಿ ಹುಡುಕಲು” ನಿರ್ದೇಶಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ಕಳೆದ ತಿಂಗಳು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 25,000 ರೂಪಾಯಿ ದಂಡ ವಿಧಿಸಿದ್ದು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಾಲ್ಕು ವಾರದೊಳಗೆ ಪಾವತಿಸಬೇಕು ಎಂದು ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...