Homeಕರ್ನಾಟಕಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ ಎಂದ ಬಿಎಸ್‌ವೈ; ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದು ಯಾಕೆ?-ಶೆಟ್ಟರ್ ತಿರುಗೇಟು

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ನನ್ನ ಪರವಾಗಿ ಮಾತನಾಡಿದ್ದರು. ಆದರೆ, ಈಗ ಅವರು ನಾನು ಪಕ್ಷ ತೊರೆದಿರುವ ಬಗ್ಗೆ ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ಬಿಡುವುದು ಅಪರಾಧ ಎನ್ನುವುದಾದರೆ, ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಆಗ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿರಲಿಲ್ಲವೇ?” ಎಂದು ಪ್ರಶ್ನೆ ಮಾಡುವ ಮೂಲಕ ಬಿಎಸ್‌ವೈಗೆ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜೀನಾಮೆ ನೀಡಿ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡು ಸ್ಪರ್ಧೆ ಮಾಡುವುದು ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಕುರಿತು ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

”ನನಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟರೂ ನಾನು ಪಕ್ಷ ತೊರೆಯುತ್ತಿರುವುದರ ಬಗ್ಗೆ ಯಡಿಯೂರಪ್ಪ ಅವರು ಈ ಮಾತನಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಿ.ಎಸ್.‌ ಯಡಿಯೂರಪ್ಪ ಅವರಿಗೂ ಪಕ್ಷ ಸೂಕ್ತ ಸ್ಥಾನಮಾನವನ್ನು ಕೊಟ್ಟಿತ್ತು. ಆದರೆ, ಅವರು ಯಾಕೆ ಬಿಜೆಪಿ ಬಿಟ್ಟು ಕೆಜೆಪಿಯನ್ನು ಕಟ್ಟಿದರು?” ಎಂದು ಪ್ರಶ್ನೆ ಮಾಡಿದರು.

”ನಾನು ಈ ಹಿಂದೆ ನಿರ್ಧಾರ ಮಾಡಿದಂತೆ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ನಾಯಕರು ಶನಿವಾರ (ಏ. 15) ನನ್ನನ್ನು ಸಂಪರ್ಕ ಮಾಡಿದ್ದರು. ಆದರೆ, ಅವರು ನನ್ನ ಬೇಡಿಕೆಯನ್ನು ಈಡೇರಿಸುವ ಕೆಲವನ್ನು ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಭಾನುವಾರ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಶೆಟ್ಟರ್ ಸ್ಪಷ್ಟಪಡಿಸಿದರು.

”ನನಗೆ ಯಾವ ದೊಡ್ಡ ಹುದ್ದೆ ಬೇಡ. ನನಗೆ ಶಾಸಕನಾಗಿ ಕೆಲಸ ಮಾಡುವ ಅವಕಾಶ ಕೊಟ್ಟರೆ ಸಾಕಿತ್ತು. ಪಕ್ಷಕ್ಕೆ ಸಹಕಾರ ಕೊಟ್ಟು ಸಂಘಟನೆ ಮಾಡಿದ್ದೇನೆ. ನನಗೆ ಯಾವುದೇ ಮುನ್ಸೂಚನೆ ಇಲ್ಲದೆ ಈ ರೀತಿ ಮಾಡಿರೋದು ಬೇಸರ ತರಿಸಿದೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬೆಳವಣಿಗೆಗೆ ಅವಕಾಶ ಮಾಡಿಕೊಟ್ಟಿದೆ. ಮೂಲವಾಗಿ ಬಿಜೆಪಿಯಲ್ಲಿದ್ದೋರನ್ನು ಹೊರಗಡೆ ಹಾಕಲಾಗುತ್ತಿದೆ. ಇದು ಮಾನಸಿಕವಾಗಿ ಬೇಸರ ತರಿಸಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ

ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನನಗೆ ಯಾವ ಕಾಂಗ್ರೆಸ್ ನಾಯಕರೂ ಕರೆ ಮಾಡಿಲ್ಲ. ನಾನು ಹುಬ್ಬಳ್ಳಿಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಅಲ್ಲಿಗೆ ಹೋದ ಮೇಲೆ ಹೇಳುತ್ತೇನೆ” ಎಂದು ಶಿರಸಿಯಲ್ಲಿ ಶೆಟ್ಟರ್‌ ಪ್ರತಿಕ್ರಿಯೆ ನೀಡಿದರು.

ಬಿಎಸ್ ಯಡಿಯೂರಪ್ಪ ಹೇಳಿದ್ದೇನು?

”ಭಾರತೀಯ ಜನತಾ ಪಕ್ಷವು ಎಲ್ಲವನ್ನೂ ನೀಡಿದ್ದರೂ ಆ ಋಣವನ್ನು ತೀರಿಸದೆ ಇದೀಗ ಕಾಂಗ್ರೆಸ್‌ಗೆ ಹೊರಟಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್‌ ನಡೆ ಅಕ್ಷಮ್ಯ ಅಪರಾಧ” ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಕಿಡಿಕಾರಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ”ಈ ಪಕ್ಷವು ನನಗೆ, ಶೆಟ್ಟರ್‌ ಅವರಿಗೆ, ಲಕ್ಷ್ಮಣ ಸವದಿ ಅವರಿಗೆ ಹಾಗೂ ಈಶ್ವರಪ್ಪ ಅವರಿಗೆ ಅನೇಕ ಅವಕಾಶ ನೀಡಿದೆ. ನನ್ನಂತಹ ಸಾಮಾನ್ಯ ಕಾರ್ಯಕರ್ತ ರಾಜ್ಯದ ಎಲ್ಲೇ ಹೋದರೂ ವಿಶ್ವಾಸ ಗಳಿಸಲು ಬಿಜೆಪಿಯೇ ಕಾರಣ ಎನ್ನುವುದನ್ನು ನಾನು ಮರೆತಿಲ್ಲ” ಎಂದು ಹೇಳಿದರು.

”ಜಗದೀಶ ಶೆಟ್ಟರ್‌ ಜನಸಂಘದ ಕಾಲದಿಂದ ಬಿಜೆಪಿಯಲ್ಲಿರುವವರು. ವಿರೋಧ ಪಕ್ಷದ ನಾಯಕ, ಮಂತ್ರಿ ಜತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಯಿತು. ಬಿಬಿ ಶಿವಪ್ಪ ಅವರನ್ನು ಎದುರು ಹಾಕಿಕೊಂಡು, ಒಬ್ಬ ಯುವಕ ಬೆಳೆಯಬೇಕು ಎಂಬ ಕಾರಣಕ್ಕೆ ಜಗದೀಶ ಶೆಟ್ಟರ್‌ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಯಿತು” ಎಂದರು.

”ನಾನು ಹಾಗೂ ಅನಂತಕುಮಾರ್‌, ಅವರ ಬೆನ್ನಿಗೆ ನಿಂತಿದ್ದೆವು. ನಾವೇ ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಮಾಡಿದ್ದೆವು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಮುನ್ನಡೆಯುತ್ತಿರುವ ಸಮಯದಲ್ಲಿ ನಾವು ಅವರೊಂದಿಗೆ ಹೆಜ್ಜೆ ಹಾಕಬೇಕಾಗಿತ್ತು. ಜಗದೀಶ ಶೆಟ್ಟರ್‌ ಅವರ ಹೇಳಿಕೆ ಹಾಗೂ ಅವರ ನಿರ್ಧಾರ, ಅವರು ನಂಬಿಕೊಂಡಿರುವ ವಿಚಾರಕ್ಕೆ ತದ್ವಿರುದ್ಧವಾಗಿದೆ. ಸ್ಥಾನಮಾನ ಸಿಗಲಿ, ಸಿಗದೇ ಇರಲಿ ದೇಶಕ್ಕಾಗಿ ಕೆಲಸ ಮಾಡುವಂತಹದ್ದು ನಾವು ನಡೆದುಕೊಂಡುಬಂದಿರುವ ದಾರಿ. ಜಗದೀಶ್‌ ಶೆಟ್ಟರ್‌ ಅವರನ್ನು ರಾಜ್ಯದ ಜನತೆ ಗುರುತು ಮಾಡಿದ್ದು ಭಾರತೀಯ ಜನತಾ ಪಾರ್ಟಿ ಮೂಲಕ. ಪಕ್ಷವಿಲ್ಲದೆ ವ್ಯಕ್ತಿ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...