Homeಮುಖಪುಟಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

ಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

- Advertisement -
- Advertisement -

ನವಿ ಮುಂಬೈನ ತೆರೆದ ಮೈದಾನದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ’ ದುರಂತಕ್ಕೆ ಕಾರಣವಾಗಿದೆ.

“ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕನಿಷ್ಠ 11 ಜನರು ನಿರ್ಜಲೀಕರಣ (dehydration) ಮತ್ತು ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ, ಗಂಭೀರವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಈ ಕುರಿತು ಪ್ರತಿಕ್ರಿಯಿಸಿದ್ದು, 11 ಸಾವುಗಳು ದೃಢಪಟ್ಟಿವೆ ಎಂದಿದೆ. ಆದರೆ 13 ಜನರು ಸತ್ತಿರಬಹುದೆಂದು ಮೂಲಗಳು ಹೇಳುತ್ತಿವೆ. ಸಾವಿಗೀಡಾದವರಲ್ಲಿ ಎಂಟು ಮಂದಿ ಮಹಿಳೆಯರಿದ್ದು, ಹೆಚ್ಚಿನವರು ವೃದ್ಧರಿದ್ದಾರೆ.

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳಿಂದಾಗಿ ಗಂಭೀರವಾಗಿದ್ದಾರೆಂದು ಹೇಳಲಾಗುತ್ತಿದೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿತ್ತು. ಲಕ್ಷಗಟ್ಟಲೆ ಜನರು ಖಾರ್ಘರ್ ಇಂಟರ್ನ್ಯಾಷನಲ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಸುಮಾರು ಐದು ಗಂಟೆಗಳ ಕಾಲ (ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ) ಉರಿಬಿಸಿಲಿನಲ್ಲಿ ಕುಳಿತುಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ವೇದಿಕೆಯಲ್ಲಿದ್ದರು. ಇತರ ವಿಐಪಿಗಳು ಪಾಲ್ಗೊಂಡಿದ್ದರು.

ಪ್ರತಿ ಜಿಲ್ಲೆಗೆ ಪ್ರಸ್ತಾಪಿಸಲಾದ ‘ಹೀಟ್ ಆಕ್ಷನ್ ಪ್ಲಾನ್‌’ಗೆ ವಿರುದ್ಧವಾಗಿ ಹೊರಂಗಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಥಾಣೆ ಭಾಗದಲ್ಲಿ ಭಾನುವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮೃತರ ಪೈಕಿ ರಾಯಗಡದ ಜಯಶ್ರೀ ಪಾಟೀಲ್ (54) ಅವರು ಖಾರ್ಘರ್ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ, ರೋಗಿಗಳನ್ನು ಭೇಟಿ ಮಾಡಲು ಶಿಂಧೆ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿದರು. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ. ಲಕ್ಷಗಟ್ಟಲೆ ಜನ ಬಂದಿದ್ದರಿಂದ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತಿತ್ತು, ಆದರೆ ಕೊನೆಗೆ ಹೀಗಾಯಿತು” ಎಂದು ಶಿಂಧೆ ವಿಷಾದಿಸಿದ್ದಾರೆ.

“ನಾನು ಇದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಚಿಕಿತ್ಸೆಯ ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೆಲವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪನ್ವೇಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಮುನ್ಸಿಪಲ್ ಕಮಿಷನರ್ ಅವರನ್ನು ರೋಗಿಗಳ ಮೇಲೆ ನಿಗಾ ಇರಿಸಲು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುನ್ಸಿಪಲ್ ಕಮಿಷನರ್‌ ರೋಗಿಗಳ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ,  ಅವರಿಗೆ ಮಾಹಿತಿಗಳನ್ನು ನೀಡುತ್ತಾರೆ. ಕನಿಷ್ಠ 50 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸಿದ ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು, “20 ಲಕ್ಷ ಜನರು ಸೇರಲು ವ್ಯವಸ್ಥೆ ಮಾಡಲಾಗಿದೆ” ಎಂದಿತ್ತು. ಇದನ್ನು ಸಾಮಾಜಿಕ ಹೋರಾಟಗಾರರು ಪ್ರಶ್ನಿಸಿದ್ದರು. “ಸರ್ಕಾರದ ದುರಾಡಳಿತದಿಂದ ಸಾವು ಸಂಭವಿಸಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಾಜೀವ್ ಮಿಶ್ರಾ ಆರೋಪಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಖಾರ್ಘರ್ ನಿವಾಸಿಯೊಬ್ಬರು, “ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಆಗಮಿಸಿದ ಕೆಲವರು ಎರಡು ದಿನಗಳ ಕಾಲ ಮೈದಾನದಲ್ಲಿ ಇದ್ದರು. ಭಾನುವಾರ ಮಧ್ಯಾಹ್ನ, ಲಕ್ಷಾಂತರ ಜನರು ಯಾವುದೇ ನೆರಳಿಲ್ಲದೆ ಉರಿಬಿಸಿಲಿನಲ್ಲಿ ಕುಳಿತ್ತಿದ್ದರು” ಎಂದಿದ್ದಾರೆ.

ಅಪ್ಪಾಸಾಹೇಬ್ ಧರ್ಮಾಧಿಕಾರಿ ನಡೆಸುತ್ತಿರುವ ಸಂಸ್ಥೆಯು ಕಾರ್ಯಕ್ರಮಕ್ಕೆ ಬರುವವರಿಗಾಗಿ ಸಾರಿಗೆ ವ್ಯವಸ್ಥೆ ಮಾಡಲು ಸಹಕರಿಸಿದೆ ಎಂದು ಹೇಳಲಾಗುತ್ತದೆ.

ಹೆಸರು ಹೇಳಲಿಚ್ಛಿಸದ ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸುಮಾರು 30 ಜನರನ್ನು ಉಪಜಿಲ್ಲಾ ಆಸ್ಪತ್ರೆ-ಪನ್ವೇಲ್, ವಾಶಿಯ ಎನ್‌ಎಂಎಂಸಿ ಮತ್ತು ಫೋರ್ಟಿಸ್, ನೆರೂಲ್‌ನ ಡಿವೈ ಪಾಟೀಲ್ ಆಸ್ಪತ್ರೆ, ಕಾಮೋಥೆಯ ಎಂಜಿಎಂ ಆಸ್ಪತ್ರೆ ಸೇರಿದಂತೆ ಖಾರ್ಘರ್‌ನಲ್ಲಿರುವ ಬೇಲಾಪುರ ಮತ್ತು ಟಾಟಾ ಕ್ಯಾನ್ಸರ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ” ಎಂದಿದ್ದಾರೆ.

ತೊಂದರೆಗೀಡಾದವರು ನಿರ್ಜಲೀಕರಣ (dehydration), ಎದೆ ನೋವು, ಇತರ ಆರೋಗ್ಯ ಸಮಸ್ಯೆಗಳ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಿಂದ ಬಳಲುತ್ತಿದ್ದರು. ಕೆಲವು ಜನರಿಗೆ ORS ಪೌಡರ್ ಅನ್ನು ಒದಗಿಸಲಾಯಿತು, ನೆರಳಿನಲ್ಲಿ ಅಥವಾ ಎಸಿ ಸೌಲಭ್ಯವಿರುವಲ್ಲಿ ಕುಳಿತುಕೊಳ್ಳಲು ಹೇಳಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ವಾಶಿ ಎನ್‌ಎಂಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಜವಡೆ ಮಾತನಾಡಿ, “55 ವರ್ಷದ ವ್ಯಕ್ತಿ ಸೇರಿದಂತೆ ಒಂಬತ್ತು ರೋಗಿಗಳು ಹೀಟ್‌ಸ್ಟ್ರೋಕ್‌ನಿಂದಾಗಿ ದಾಖಲಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಯಗಢ ಪೊಲೀಸ್ ಅಧೀಕ್ಷಕ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, “‘ಖಾರ್ಘರ್ ಕಾರ್ಯಕ್ರಮದ ಸಮಯದಲ್ಲಿ ಆಗಿರುವ ಯಾವುದೇ ಸಾವುನೋವುಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಏಕೆಂದರೆ ಅದು ನವಿ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿದೆ” ಎಂದು ನುಣುಚಿಕೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ.

ನವಿ ಮುಂಬೈ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶಿಂಧೆ, “ಚಿಕಿತ್ಸೆ ಪಡೆಯುತ್ತಿರುವ ಜನರನ್ನು ನಾನು ಭೇಟಿಯಾಗಿದ್ದೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಈ ಘಟನೆ ಅತ್ಯಂತ ವಿಷಾದನೀಯ. ಇದರಿಂದ ತುಂಬಾ ನೋವಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುತ್ತಿತ್ತು, ಕೊನೆಯಲ್ಲಿ, ಈ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...