Homeಮುಖಪುಟಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

- Advertisement -
- Advertisement -

2011ರಲ್ಲಿ ಮಾಡಲಾದ ಜಾತಿ ಗಣತಿಯ ಅಂಕಿಅಂಶಗಳನ್ನು ಪ್ರಕಟಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೂ ರಾಹುಲ್‌ ಹೇಳಿಕೆಗೆ ಧ್ವನಿಗೂಡಿಸಿದ್ದು ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.

ಜಾತಿ ಗಣತಿಯ ಬಹುದಿನದ ಬೇಡಿಕೆಯನ್ನು ಪ್ರಸ್ತಾಪಿಸಿರುವ ಖರ್ಗೆಯವರು ಕೇಂದ್ರ ಸರ್ಕಾರದ ಮೇಲೆ ಒತ್ತಡವನ್ನು ಹೆಚ್ಚಿಸಿದ್ದಾರೆ. ಅಂತಹ ದತ್ತಾಂಶ ಇಲ್ಲವಾದರೆ, ‘ಅರ್ಥಪೂರ್ಣ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯಕ್ರಮಗಳ ಮೇಲೆ, ವಿಶೇಷವಾಗಿ ಒಬಿಸಿಗಳ ಮೇಲೆ ಪರಿಣಾಮ ಬೀರಬಹುದು’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

“2011-12ರ ಅವಧಿಯಲ್ಲಿ ಯುಪಿಎ ಸರ್ಕಾರವು ಮೊದಲ ಬಾರಿಗೆ ಸುಮಾರು 25 ಕೋಟಿ ಕುಟುಂಬಗಳನ್ನು ಒಳಗೊಂಡ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯನ್ನು (ಎಸ್‌ಇಸಿಸಿ) ನಡೆಸಿದ್ದು ನಿಮಗೆ (ಪಿಎಂ ಮೋದಿ) ತಿಳಿದಿದೆ. ಮೇ 2014 ರಲ್ಲಿ ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಮತ್ತು ಇತರ ಸಂಸದರು ಅದನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರೂ ಹಲವಾರು ಕಾರಣಗಳಿಗಾಗಿ ಜಾತಿ ದತ್ತಾಂಶವನ್ನು ಪ್ರಕಟಿಸಿಲ್ಲ. ನವೀಕರಿಸಲಾದ ಜಾತಿ ಗಣತಿ ಇಲ್ಲದಿರುವಾಗ, ನಾನು ವಿಶ್ವಾಸಾರ್ಹ ದತ್ತಾಂಶಗಳ ಬಗ್ಗೆ ಆತಂಕಗೊಂಡಿದ್ದೇನೆ. ಅರ್ಥಪೂರ್ಣ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯಕ್ರಮಗಳಿಗೆ, ವಿಶೇಷವಾಗಿ ಒಬಿಸಿಗಳಿಗೆ ಜಾತಿ ಗಣತಿಯಿಂದ ಅನುಕೂಲವಾಗುತ್ತದೆ” ಎಂದು ಖರ್ಗೆ ತಿಳಿಸಿದ್ದಾರೆ.

2021 ರ ವೇಳೆಗೆ ಮಾಡಬೇಕಾದ ಕೊನೆಯ ಗಣತಿಯನ್ನು ಮುಂದೂಡಲಾಗಿದೆ ಎಂದು ಖರ್ಗೆಯವರು ಕೇಂದ್ರ ಸರ್ಕಾರಕ್ಕೆ ನೆನಪಿಸಿದ್ದಾರೆ. ಕೂಡಲೇ ಗಣತಿ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ. ಟ್ವಿಟರ್ ಮೂಲಕ ತಮ್ಮ ಪತ್ರವನ್ನು ಸಾರ್ವಜನಿಕಗೊಳಿಸಿದ್ದಾರೆ.

ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 2011ರಲ್ಲಿ ಯುಪಿಎ ಸರ್ಕಾರ ನಡೆಸಿದ ಜಾತಿ ಗಣತಿಯನ್ನು ಕೇಂದ್ರವು ಮರೆಮಾಚುತ್ತಿದೆ. ಮೀಸಲಾತಿ ಪಡೆಯುತ್ತಿರುವ ಸಮುದಾಯಗಳಿಗೆ ಅಗೌರವ ತೋರುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿರಿ: ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

ಕಳೆದ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರಿಗೆ ಗುಜರಾತ್‌ನ ಸೂರತ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ‘ಮೋದಿ’ ಸರ್‌ ನೇಮ್‌ ಬಳಸಿರುವುದಕ್ಕೆ ಸಂಬಂಧಿಸಿದಂತೆ ಶಿಕ್ಷೆ ಪ್ರಕಟಿಸಿದ ಬಳಿಕ ಲೋಕಸಭಾ ಸದಸ್ಯತ್ವದಿಂದ ರಾಹುಲ್‌ ಗಾಂಧಿಯವರನ್ನು ಅನರ್ಹಗೊಳಿಸಲಾಯಿತು. ಇದೇ ಕೋಲಾರದಲ್ಲಿಯೇ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ರಾಹುಲ್‌, ಜಾತಿ ಗಣತಿಯ ಪ್ರಸ್ತಾಪ ಮಾಡಿದ್ದಾರೆ. ಒಬಿಸಿ ಸಮುದಾಯದ ಪರ ಮಾತನಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ ‘ಮೋದಿ ಸರ್‌ ನೇಮ್‌’ ಪ್ರಕರಣವನ್ನು ಉಲ್ಲೇಖಿಸುತ್ತಾ, “ರಾಹುಲ್ ಗಾಂಧಿಯವರು ಒಬಿಸಿ ಸಮುದಾಯಕ್ಕೆ ಅಗೌರವ ತೋರಿದ್ದಾರೆ” ಎಂದು ಆರೋಪಿಸುತ್ತಿದೆ.

ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯು ಗ್ರಾಮೀಣ ಮತ್ತು ನಗರ ಕುಟುಂಬಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಸಮಗ್ರ ಅಧ್ಯಯನವಾಗಿದೆ. ಹೆಚ್ಚುವರಿಯಾಗಿ, ಇದು ಜಾತಿ ಗಣತಿಯನ್ನು ಒಳಗೊಂಡಿದೆ, ಇದು ಜನಸಂಖ್ಯೆಯ ಜಾತಿ ಸಂಯೋಜನೆಯ ಮಾಹಿತಿಯನ್ನು ಒದಗಿಸುತ್ತದೆ. 1931ರ ನಂತರ ಜಾತಿ ಗಣತಿ ಸ್ಥಗಿತವಾಗಿತ್ತು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2011ರಲ್ಲಿ ಮತ್ತೆ ಜಾತಿ ಗಣತಿ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...