Homeಕರ್ನಾಟಕಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ಆಗಸ್ಟ್ 14-15 ಮಧ್ಯರಾತ್ರಿಯಿಂದಲೇ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ವಿಶಿಷ್ಟಿ ಹೋರಾಟ ನಡೆಯಲಿದೆ.

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ  ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆವರೆಗೂ ಬಡವರಿಗೆ ಭೂಮಿ ಮತ್ತು ವಸತಿಗಾಗಿ ವಿಶಿಷ್ಟ ಆಂದೋಲನ ಬೆಂಗಳೂರಿನಲ್ಲಿ ನಡೆಯಲಿದೆ.

• ಆಗಸ್ಟ್ 14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಬನಪ್ಪ ಪಾರ್ಕಿಗೆ.
• ಆಗಸ್ಟ್ 14–15ರ ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು – ಭಾಷಣಗಳು, ಹೋರಾಟದ ಹಾಡುಗಳು, ರೂಪಕಗಳು ಇತ್ಯಾದಿ.
• ಮಧ್ಯರಾತ್ರಿ 11.30ರಿಂದ 12: ಮುಖ್ಯ ಅತಿಥಿ ಚಂದ್ರಶೇಖರ ಆಜಾದ್ ‘ರಾವಣ’ರಿಂದ ಸಂಘರ್ಷದ ಸಂದೇಶ.
• ನಡುರಾತ್ರಿ 12.05ಕ್ಕೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರಿಂದ ಧ್ವಜಾರೋಹಣ ಹಾಗೂ ನಿಜ ಸ್ವಾತಂತ್ರ್ಯದ ಕರೆ
• ಆಗಸ್ಟ್ 15ರ ಮುಂಜಾನೆ 9 ಗಂಟೆಗೆ ಹಕ್ಕಿಗಾಗಿ ನಮ್ಮ ಹೆಜ್ಜೆ – ಬನಪ್ಪ ಪಾರ್ಕಿನಿಂದ ಪೆರೇಡ್ ಗ್ರೌಂಡ್ ಕಡೆಗೆ.

ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ನೂರ್ ಶ್ರೀಧರ್ ರವರು “ಬಡಜನರು ಸರ್ಕಾರಿ/ಖಾಸಗಿ ಜಾಗಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು/ಗುಡಿಸಲುಗಳನ್ನು 94ಸಿ/94ಸಿಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನೂ ನೀಡುತ್ತಿಲ್ಲ. ಬದಲಿಗೆ ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲಾ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆಯಂತೂ ಸಾವಿರಾರು ಎಕರೆ ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡವರ ಮೇಲೆ ಅಕ್ಷರಶಃ ‘ಬುಲ್‍ಡೋಜರ್ ಯುದ್ಧ’ ಸಾರಿದೆ! ಅದಕ್ಕಾಗಿ ಹೋರಾಟ ಅನಿವಾರ್ಯವಾಗಿದೆ” ಎಂದಿದ್ದಾರೆ.

“ಆತ್ಮಗಳನ್ನು ಮಾರಿಕೊಂಡಿರುವ” ಆಳುವವರನ್ನು, ಅವರ ಸರ್ಕಾರಗಳನ್ನು ಮತ್ತೊಮ್ಮೆ ಕಾರ್ಯಪ್ರವೃತ್ತರಾಗುವಂತೆ ಮಾಡುವುದಕ್ಕೋಸ್ಕರ, ಹಾಗೂ, ಆಳುವವರ ನಿಷ್ಕಾಳಜಿ, ನಿಷ್ಕ್ರಿಯತೆಗೆ ಛೀಮಾರಿ ಹಾಕಿ, ‘ಇದು ಸೋತು ಸುಮ್ಮನಾಗುವ ಚಳವಳಿಯಲ್ಲ’ ಎಂಬ ಸಂದೇಶವನ್ನು ಅವರಿಗೆ ರವಾನಿಸುವ ಹಾಗೂ ಹೋರಾಟವನ್ನು ಬಿಗಿ ಮತ್ತು ಬಿರುಸುಗೊಳಿಸುವ ಸಂಕಲ್ಪ ತೊಡುವ ಸಂದರ್ಭವಾಗಿ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಬಡಜನರ “ನಡುರಾತ್ರಿ ಸ್ವಾತಂತ್ರ್ಯೋತ್ಸವ”ವನ್ನಾಗಿ ಸಂಘಟಿಸಲಾಗುತ್ತಿದೆ ಎಂದು ನೂರ್ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ ಮಾತನಾಡಿ “72 ವರ್ಷಗಳ ಹಿಂದೆ ದೇಶದ ಸ್ವಾತಂತ್ರ್ಯದ ಸಂಕೇತವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ್ದ ಸ್ವಾತಂತ್ರ್ಯ ಸೇನಾನಿ ಶತಾಯುಷಿ ದೊರೆಸ್ವಾಮಿಯವರೇ ಈ ದಿನ ಬಡವರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನೂ ನೆರವೇರಿಸುತ್ತಾರೆ ಮತ್ತು ಬಡವರ ನೈಜ ಸ್ವಾತಂತ್ರ್ಯಕ್ಕಾಗಿನ ಮತ್ತೊಂದು ಸೋಲೊಪ್ಪದ ಸಂಗ್ರಾಮಕ್ಕೆ ಚಾಲನೆಯನ್ನೂ ನೀಡುತ್ತಾರೆ. ದಲಿತ-ದಮನಿತರ ಸಿಡಿಲ ದನಿ, ಉತ್ತರ ಪ್ರದೇಶದ ‘ಭೀಮ್ ಆರ್ಮಿ’ ಸಂಸ್ಥಾಪಕ ಚಂದ್ರಶೇಖರ ಆಝಾದ್ ‘ರಾವಣ’ ಈ ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುತ್ತಾರೆ. ಈ ಅರ್ಥಪೂರ್ಣ ಸಂದರ್ಭಕ್ಕೆ ನಾಡಿನ ಸಹಸ್ರಾರು ಭೂಮಿ-ವಸತಿ ವಂಚಿತರ ಜೊತೆಯಲ್ಲಿ ನಾಡಿನೆಲ್ಲೆಡೆಯ ಹಿರಿಯ ಹೋರಾಟಗಾರರು, ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದರು.

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ವಿವಿಧ ಜನಪರ ಹೋರಾಟನಿರತ ಸಂಘಟನೆಗಳು ಒಟ್ಟುಗೂಡಿ ಮೂರು ವರ್ಷಗಳ ಹಿಂದೆ 2016ರಲ್ಲಿ [ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ] ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ರೂಪ ತಾಳಿತು. ಈ ಸಮಿತಿಯ ನೇತೃತ್ವದಲ್ಲಿ ಸತತವಾಗಿ ನಡೆಸಿದ ಹೋರಾಟಗಳ ಫಲವಾಗಿ 2018ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ, ಸಂಬಂಧಿತ ಇಲಾಖೆಗಳ ಮಂತ್ರಿಗಳ/ಪ್ರಧಾನ ಕಾರ್ಯದರ್ಶಿಗಳ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಾಗೂ ದೊರೆಸ್ವಾಮಿಯವರ ನೇತೃತ್ವದ ಹೋರಾಟಗಾರರ ನಿಯೋಗದ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಆ ಸಭೆಯಲ್ಲಿ ಚಳವಳಿ ಮುಂದಿಟ್ಟ ಎಲ್ಲಾ ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿದ್ದಲ್ಲದೆ, ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಎಲ್ಲ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೋರಾಟ ಸಮಿತಿಯ ಇಬ್ಬರು ಪ್ರತಿನಿಧಿಗಳನ್ನೊಳಗೊಂಡ “ಉನ್ನತ ಮಟ್ಟದ ಸಮಿತಿ”ಯನ್ನು ರಚಿಸಿತು. ಜೊತೆಗೆ, 2005ರವರೆಗೂ ಬಗರ್‍ಹುಕುಂ ಉಳುಮೆ ಮಾಡುತ್ತಿದ್ದವರೂ ಸಹ ಹೊಸದಾಗಿ ಭೂ ಮಂಜೂರಾತಿಗೆ ಫಾರಂ 57ರಡಿ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಿ, ಕಾಯ್ದೆ ತಿದ್ದುಪಡಿಯನ್ನೂ ಮಾಡಿತು. ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಹಳೇ ಫಾರಂ 50-53ರ ಅರ್ಜಿಗಳೇ ವಿಲೇವಾರಿಯಾಗಿಲ್ಲ, ಹೊಸ ಅರ್ಜಿಗಳನ್ನು ಮುಟ್ಟಿಯೂ ಇಲ್ಲ, ಭೂ ಮಂಜೂರಾತಿ ಮಾಡುವ ಸಮಿತಿಗಳನ್ನೇ ಪುನರ್ರಚಿಸಿಲ್ಲ ಎಂದು ಸಮಿತಿಯು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...