Homeಮುಖಪುಟಯುಪಿ ಸರ್ಕಾರದ ಬಯಕೆಯಂತೆ ಗ್ಯಾಂಗ್‌ಸ್ಟರ್ ಅತೀಕ್, ಅಶ್ರಫ್ ಶೂಟೌಟ್: ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಜೆಪಿ...

ಯುಪಿ ಸರ್ಕಾರದ ಬಯಕೆಯಂತೆ ಗ್ಯಾಂಗ್‌ಸ್ಟರ್ ಅತೀಕ್, ಅಶ್ರಫ್ ಶೂಟೌಟ್: ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಜೆಪಿ ಸಂಸದ

- Advertisement -
- Advertisement -

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದ, ಉತ್ತರ ಪ್ರದೇಶ ಸರ್ಕಾರದ ಬಯಕೆಯಂತೆ ಕೊಲೆ ಮಾಡಲಾಗಿದೆ ಎಂದು ಬರೆದು, ಆ ಬಳಿಕ ಆ ಟ್ವೀಟ್‌ನ್ನು ಡಿಲೀಟ್ ಮಾಡಿದ್ದಾರೆ.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದಾರಿಗಿರುವ ಪಿಸಿ ಮೋಹನ್‌ ಅವರು, ಈ ಬಗ್ಗೆ ಟ್ವೀಟ್ ಮಾಡಿ ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಆದರೆ ಡಿಲಿಟ್ ಮಾಡುವ ಮುನ್ನವೇ ಕೆಲವರು ಅದರ ಸ್ಕ್ರೀನ್‌ಶಾಟ್ ತೆಗೆದು ಸಾಮಾಜಿಕ ಮಾಧ್ಯದಲ್ಲಿ ಹಂಚಿಕೊಂಡಿದ್ದಾರೆ.

ಈ ಪ್ರಕರಣದ ಬಳಿಕ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ವಿಚಾರವಾಗಿ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಭಾರೀ ಚರ್ಚೆ ಮಾಡಲಾಗುತ್ತಿದೆ. ಈ ನಡುವೆ ಕರ್ನಾಟಕದ ಬಿಜೆಪಿ ಸಂಸದ ಪಿಸಿ ಮೋಹನ್ ಅವರು, ಈ ಕೊಲೆಯನ್ನು ಬಿಜೆಪಿ ಯೋಗಿ ನೇತೃತ್ವದ ಸರ್ಕಾರ ಬಯಸಿದಂತೆ ಈ ಕೊಲೆಯನ್ನು ಮಾಡಲಾಗಿದೆ ಎನ್ನುವಂತೆ ಯೋಗಿ ಅವರ ಪೋಟೋ ಹಾಕಿ ಟ್ವೀಟ್ ಮಾಡಿದ್ದಾರೆ. ಆ ಬಳಿಕ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

ಏನಿದು ಘಟನೆ?

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿದ್ದಾರೆ.

ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಮತ್ತು ಮಾಧ್ಯಮದವರ ಎದುರೇ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅತೀಕ್‌ ಮತ್ತು ಅಶ್ರಫ್‌ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೂವರು ಆರೋಪಿಗಳನ್ನು ಅರುಣ್ ಮೌರ್ಯ, ಲವಲೇಶ್ ತಿವಾರಿ ಮತ್ತು ಸನ್ನಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ವಿಪಕ್ಷಗಳ ಪ್ರತಿಕ್ರಿಯೆ:

ಈ ಘಟನೆ ಬಗ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದು, ”ಬಿಜೆಪಿ ಭಾರತವನ್ನು ಮಾಫಿಯಾ ಗಣರಾಜ್ಯವನ್ನಾಗಿ ಮಾಡಿದೆ ಎಂದು ಇಲ್ಲಿಯೂ ಹೇಳುತ್ತೇನೆ, ವಿದೇಶದಲ್ಲೂ ಹೇಳುತ್ತೇನೆ, ಎಲ್ಲೆಲ್ಲೂ ಹೇಳುತ್ತೇನೆ ಏಕೆಂದರೆ ಇದು ಸತ್ಯ. ಬಂಧನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಮತ್ತು ಕ್ಯಾಮೆರಾಗಳ ಮುಂದೆಯೇ ಗುಂಡಿಕ್ಕಿ ಕೊಂದರು- ಇದು ಕಾನೂನು ನಿಯಮಗಳ ಸಾವು” ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ”ಉತ್ತರ ಪ್ರದೇಶದಲ್ಲಿ ಅಪರಾಧ ಉತ್ತುಂಗಕ್ಕೇರಿದೆ ಮತ್ತು ಅಪರಾಧಿಗಳು ಬೆಚ್ಚಿಬೀಳುತ್ತಿಲ್ಲ. ಪೊಲೀಸ್ ಸರ್ಪಗಾವಲಿನ ನಡುವೆ ಯಾರನ್ನಾದರೂ ಗುಂಡಿಕ್ಕಿ ಕೊಲ್ಲಬಹುದು, ಆಗ ಸಾಮಾನ್ಯರ ಪಾಡೇನು? ಇದರಿಂದ ಸಾರ್ವಜನಿಕರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ಸೃಷ್ಟಿಸುತ್ತಿರುವಂತೆ ಕಾಣುತ್ತಿದೆ” ಎಂದಿದ್ಧಾರೆ.

ಅತೀಕ್-ಅಶ್ರಫ್ ಹತ್ಯೆ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿ, ”ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ತಂಡವನ್ನು ರಚಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ಗೆ ನಾನು ಒತ್ತಾಯಿಸುತ್ತೇನೆ. ಅಲ್ಲಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ತೆಗೆದುಹಾಕಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...