Homeಮುಖಪುಟಪುಲ್ವಾಮಾ ದಾಳಿ ಕುರಿತ ಸತ್ಯಪಾಲ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯೆ

ಪುಲ್ವಾಮಾ ದಾಳಿ ಕುರಿತ ಸತ್ಯಪಾಲ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯೆ

- Advertisement -
- Advertisement -

ಫೆಬ್ರವರಿ 14, 2019ರಂದು ನಡೆದ ಪುಲ್ವಾಮಾ ದಾಳಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಾಡಿರುವ ಗಂಭೀರ ಆರೋಪಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರತಿಕ್ರಿಯಿಸಿದೆ.

ಮೋದಿ ಸರ್ಕಾರವು ‘ಹಿಂದುತ್ವದ ಅಜೆಂಡಾವನ್ನು ಮುಂದಿಡಲು’ ಘಟನೆಯನ್ನು ಬಳಸಿಕೊಂಡಿದೆ ಎಂಬ ಅಂಶ ಇದರಿಂದ ಸಾಬೀತಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಏಪ್ರಿಲ್ 16 ರಂದು ತಿಳಿಸಿದೆ.

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪತ್ರಿಕಾ ಪ್ರಕಟಣೆ ನೀಡಿದ್ದು, “ಪುಲ್ವಾಮ ಘಟನೆಯ ಕುರಿತ ಪಾಕಿಸ್ತಾನದ ನಿಲುವನ್ನು ಮಲಿಕ್ ಅವರ ಹೇಳಿಕೆಗಳು ಸಮರ್ಥಿಸಿವೆ” ಎಂದು ಅಭಿಪ್ರಾಯಪಟ್ಟಿದೆ.

“ಭಾರತೀಯ ನಾಯಕತ್ವವು ಪಾಕಿಸ್ತಾನದ ಭಯೋತ್ಪಾದನೆ ಎಂಬ ಹುಸಿ ನಿರೂಪಣೆಯ ಮೂಲಕ ಮತ್ತು ಹಿಂದುತ್ವದ ಅಜೆಂಡಾವನ್ನು ಸ್ಪಷ್ಟವಾಗಿ ಹೇಗೆ ತಮ್ಮ ದೇಶೀಯ ಲಾಭಕ್ಕಾಗಿ ಬಳಸಿಕೊಂಡಿದೆ ಎಂಬುದನ್ನು ಸತ್ಯಪಾಲ್ ಹೇಳಿಕೆ ತೋರಿಸಿದೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ವ್ಯಾಪಕವಾಗಿ ಪ್ರಸಾರವಾದ ಸಂದರ್ಶನದಲ್ಲಿ ಮಲಿಕ್ ಅವರು ಪುಲ್ವಾಮ ದಾಳಿಯ ಕುರಿತು ಹೇಳಿದ್ದಾರೆ. ದಾಳಿಯಲ್ಲಿ ಮಡಿದ ಸಿಆರ್‌ಪಿಎಫ್ ಸಿಬ್ಬಂದಿಗೆ ಭದ್ರತೆಯನ್ನು ಖಾತರಿಪಡಿಸುವಲ್ಲಿ ಸರ್ಕಾರದ ವೈಫಲ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ”.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್ ಅವರು ನಡೆಸಿದ ಸಂದರ್ಶನದಲ್ಲಿ ಸತ್ಯಪಾಲ್‌ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದರು.

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಸತ್ಯಪಾಲ್ ಮಲಿಕ್ ಸ್ಫೋಟಕ ಹೇಳಿಕೆ ನೀಡಿದ್ದರು.

“ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು.

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು.

ಇದನ್ನೂ ಓದಿರಿ: ಪುಲ್ವಾಮ ದಾಳಿ ಸಂದರ್ಭದಲ್ಲಿ ಮೋದಿ ಸರ್ಕಾರದ ಅಸಮರ್ಥತೆಯಿಂದ ಸೈನಿಕರನ್ನು ಉಳಿಸಿಕೊಳ್ಳಲಾಗಲಿಲ್ಲ: ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲರ ಗಂಭೀರ ಆರೋಪ

“ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು” ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...