Homeಮುಖಪುಟನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು...

ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಾನು ಏಕೆ ಕಾಂಗ್ರೆಸ್ ಸೇರಿದೆ ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ. ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಶಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸ೦ಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ಶೆಟ್ಟರ್ ಹೇಳಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎ೦ದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...