Homeಮುಖಪುಟನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು...

ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಾನು ಏಕೆ ಕಾಂಗ್ರೆಸ್ ಸೇರಿದೆ ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ. ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಶಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸ೦ಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ಶೆಟ್ಟರ್ ಹೇಳಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎ೦ದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...