Homeಮುಖಪುಟಬಿಜೆಪಿ, ಆರ್‌ಎಸ್‌ಎಸ್‌ನಿಂದ ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ: ರಾಹುಲ್ ವಾಗ್ದಾಳಿ

ಬಿಜೆಪಿ, ಆರ್‌ಎಸ್‌ಎಸ್‌ನಿಂದ ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ: ರಾಹುಲ್ ವಾಗ್ದಾಳಿ

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ರವಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ಕೊಟ್ಟಿದ್ಧಾರೆ. ಕೋಲಾರದ ಭಾಷಣದ ಕಾರಕ್ಕಾಗಿಯೇ ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹರಾಗಿದ್ದಾರೆ. ಇದೇ ಅದೇ ಕೋಲಾರದಿಂದ ರಾಹುಲ್ ಗಾಂಧಿ ಅವರ ಪ್ರಚಾರ ಅಭಿಯಾನ ಶುರುವಾಗಿದೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ”ಬಿಜೆಪಿ ಮತ್ತು ಆರ್‌ಎಸ್‌ಎಸ್ ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಇಂದು ಭಾರತದಾದ್ಯಂತ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿರುವುದು ವಿಷಾದಕರ ಎಂದು ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಜನರ ಒಲವು ಬಲವಾಗಿದೆ ಎಂದು ತಿಳಿದು ನನಗೆ ತುಂಬಾ ಸಂತೋಷವಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದರು.

ಸಂಸತ್ತಿನ ಅಧಿವೇಶನದಲ್ಲಿ ಉದ್ದೇಶಪೂರ್ವಕವಾಗಿ ತಮ್ಮ ಮೈಕ್ ಆಫ್ ಮಾಡಲಾಯಿತು. ನನಗೆ ಮಾತನಾಡಲು ಅವಕಾಶ ನಿರಾಕರಿಸಲಾಯಿತು. ಆ ಬಳಿಕ ಅವರು ನನ್ನನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು ಎಂದು ರಾಹುಲ್ ಗಾಂಧಿ ಹೇಳಿಕೊಂಡರು.

ಇದನ್ನೂ ಓದಿ: ಬಸವಣ್ಣನವರ ವಿಚಾರಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ: ರಾಹುಲ್‌ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್‌ನೇಮ್ ಬಗ್ಗೆ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥರೆಂದು ಗುರುತಿಸಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಲಾಗಿದೆ ಎನ್ನುವುದನ್ನು ಉಲ್ಲೇಖಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸರ್ಕಾರಿ ಉದ್ಯೋಗದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸಾಕಷ್ಟು ಪ್ರಾತಿನಿಧ್ಯವನ್ನು ನೀಡಲು ವಿಫಲವಾಗಿದೆ ಎಂದು ಗಾಂಧಿ ಟೀಕಿಸಿದರು.

”ನಾವು ದೇಶದಲ್ಲಿ ಒಬಿಸಿಯನ್ನು ಮುಂದಕ್ಕೆ ಕೊಂಡೊಯ್ಯಲು ಮತ್ತು ಅವರ ಹಕ್ಕುಗಳನ್ನು ನೀಡಲು ಬಯಸುತ್ತೇವೆ. ಆದರೆ ಪ್ರಧಾನಿ ಮೋದಿ ಒಬಿಸಿ ಜನಗಣತಿಯ ಡೇಟಾವನ್ನು ಬಿಡುಗಡೆ ಮಾಡುತ್ತಿಲ್ಲ. ಏಕೇಮದರೆ ಪ್ರಧಾನಿಗೆ ಒಬಿಸಿ ಕಲ್ಯಾಣವಾಗುವುದು ಬೇಕಿಲ್ಲ, ಹಾಗಾಗಿ ಅವರು ಒಬಿಸಿ ಜನಗಣತಿ ಅಂಕಿಅಂಶಗಳನ್ನು ಬಿಡುಗಡೆ ಮಾಡುವುದಿಲ್ಲ. ನಮಗೆ ಅವಕಾಶ ಸಿಕ್ಕ ತಕ್ಷಣ ನಾವು ಬಿಡುಗಡೆ ಮಾಡಿ, ಓಬಿಸಿಗಳ ಕಲ್ಯಾನಕ್ಕೆ ಶ್ರಮಿಸುತ್ತೇವೆ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...