Homeಕರ್ನಾಟಕಬಸವಣ್ಣನವರ ವಿಚಾರಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ: ರಾಹುಲ್‌ ಗಾಂಧಿ

ಬಸವಣ್ಣನವರ ವಿಚಾರಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ: ರಾಹುಲ್‌ ಗಾಂಧಿ

- Advertisement -
- Advertisement -

“ಪ್ರಜಾಪ್ರಭುತ್ವದ ಮಾರ್ಗ ತೋರಿದ ಬಸವಣ್ಣನವರ ವಿಚಾರಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾಲ್ಕಿಯಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಜನ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿರುವ ಅವರು, “ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತಿವೆ. ಬೀದರ್‌ ಬಸವಣ್ಣನ ಕರ್ಮಭೂಮಿಯಾಗಿದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವಗಳನ್ನು ಬೋಧಿಸಿ ದೇಶಕ್ಕೆ ಪ್ರಜಾಪ್ರಭುತ್ವದ ಮಾರ್ಗ ತೋರಿದ ಬಸವಣ್ಣನವರ ವಿಚಾರಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ” ಎಂದು ತಿಳಿಸಿದ್ದಾರೆ.

“ದೇಶದಲ್ಲಿ ಹಿಂಸೆ ಹಾಗೂ ದ್ವೇಷ ಹರಡಲಾಗುತ್ತಿದೆ. ಬಡವರು ಹಾಗೂ ಶೋಷಿತರಿಂದ ಹಣ ಕಿತ್ತುಕೊಂಡು ಇಬ್ಬರು, ಮೂವರು ಶ್ರೀಮಂತರಿಗೆ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿಯಂತೆ ಕಾಂಗ್ರೆಸ್‌ನವರು ಸುಳ್ಳು ಭರವಸೆ ಕೊಡಬಾರದೆಂದು ಸೂಚಿಸಿದ್ದೇನೆ” ಎಂದಿದ್ದಾರೆ.

“ನರೇಂದ್ರ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ ₹15 ಲಕ್ಷ ಜಮಾ ಮಾಡುವ ಭರವಸೆ ನೀಡಿದ್ದರು. ಆದರೆ, ಏನೂ ಮಾಡಲಿಲ್ಲ. ಅಂತಹ ಭರವಸೆಗಳನ್ನು ಕಾಂಗ್ರೆಸ್‌ನವರು ಕೊಡಬಾರದು ಎಂದು ಮುಖಂಡರಿಗೆ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.

‘ಬಿಜೆಪಿ ಸರ್ಕಾರ 40% ಭ್ರಷ್ಟಾಚಾರ ಮಾಡಿರುವುದನ್ನು ಕರ್ನಾಟಕದ ಜನತೆಯೇ ಹೇಳಿದೆ. ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನೇರವಾಗಿ ಪ್ರಧಾನಮಂತ್ರಿಗೆ ‍ಪತ್ರ ಬರೆದಿದ್ದರು. ಆದರೆ, ಮೋದಿಯವರು ಪ್ರತಿಕ್ರಿಯೆ ನೀಡಲಿಲ್ಲ. ಪಿಎಸ್‌ಐ, ಜ್ಯೂನಿಯರ್ ಎಂಜಿನಿಯರ್, ಉಪನ್ಯಾಸಕರ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದು ರಾಜ್ಯದ ಜನತೆಗೆ ಗೊತ್ತಿದೆ” ಎಂದು ಗುಡುಗಿದ್ದಾರೆ.

ಇದನ್ನೂ ಓದಿರಿ: ಪುಲ್ವಾಮಾ ದಾಳಿ ಕುರಿತ ಸತ್ಯಪಾಲ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯೆ

“ಚುನಾವಣೆಯಲ್ಲಿ ನೀಡಿದ ಆಶ್ವಾಸನೆಯನ್ನು ಕಾಂಗ್ರೆಸ್ ಆಡಳಿತಕ್ಕೆ ಬಂದ ಮೊದಲ ದಿನವೇ ನಾಲ್ಕು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಈ ಆಶ್ವಾಸನೆ ಕೋಟ್ಯಧಿಪತಿಗಳಿಲ್ಲ. ಬಡ ಕುಟುಂಬದವರಿಗೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

“ಅಧಿಕಾರಕ್ಕೆ ಬರುವ ಸರ್ಕಾರವನ್ನು ಉರುಳಿಸಲು ಬಿಜೆಪಿ ಶೇ. 40ರಷ್ಟು ಲಂಚವನ್ನು ಬಳಸಲಿದೆ. ಅದಕ್ಕೆ ಅವಕಾಶ ನೀಡಬಾರದು. ರಾಜ್ಯದ ಜನತೆ ಕನಿಷ್ಠ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಪೂರ್ಣ ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

“ಸಂಸತ್ತಿನಲ್ಲಿ ಭ್ರಷ್ಟಾಚಾರ ವಿರುದ್ಧ ಧ್ವನಿ ಎತ್ತಿರುವೆ. ಅದಾನಿ ಅವರ ₹20 ಸಾವಿರ ಕೋಟಿ ಎಲ್ಲಿಂದ ಬಂತು ಎಂದು ಕೇಳಿದೆ. ಆದರೆ, ಉತ್ತರ ದೊರೆಯಲಿಲ್ಲ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ನನ್ನನ್ನು ಲೋಕಸಭೆಯಿಂದಲೇ ಹೊರಗೆ ಹಾಕಲಾಗಿದೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...