HomeUncategorizedಬಿಜೆಪಿಯದ್ದು ಡಬಲ್‌ ಇಂಜಿನ್‌, ಡಬಲ್ ಸ್ಟ್ಯಾಂಡರ್ಡ್ ನೀತಿ: ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿಯದ್ದು ಡಬಲ್‌ ಇಂಜಿನ್‌, ಡಬಲ್ ಸ್ಟ್ಯಾಂಡರ್ಡ್ ನೀತಿ: ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಪೊಲೀಸರ ಭದ್ರತೆಯಲ್ಲೇ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‌ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

ಅತೀಕ್‌ ಹಾಗೂ ಆಶ್ರಫ್‌ನನ್ನು ವೈದ್ಯಕೀಯ ಪರೀಕ್ಷೆಗಾಗಿ ಪೊಲೀಸರು ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯನ್ನು ”ಕಾನೂನು ಸುವ್ಯವಸ್ಥೆಯ ಕುಸಿತ ಮತ್ತು ರಾಜ್ಯದಲ್ಲಿ ಆಘಾತಕಾರಿ, ಲಜ್ಜೆಗೆಟ್ಟ ಅರಾಜಕತೆ ತಾಂಡವಾಡುತ್ತಿದೆ” ಎಂದು ಬ್ಯಾನರ್ಜಿ ಬಣ್ಣಿಸಿದ್ದಾರೆ.

”ಪೊಲೀಸರು ಮತ್ತು ಮಾಧ್ಯಮದವರ ಎದುರುಗಡೆಯೇ ಅಪರಾಧಿಗಳು ನಿರ್ಭೀತಿಯಿಂದ ಕಾನೂನನ್ನು ಕೈಗೆತೆಗೆದುಕೊಂಡು ಆ ಇಬ್ಬರಿಗೂ ಗುಂಡು ಹೊಡೆದು ಸಾಯಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಉತ್ತರ ಪ್ರದೇಶ ಸರ್ಕಾರ ಅಸಮರ್ಥವಾಗಿದೆ. ಇದು ನಾಚಿಕೆಗೇಡಿನ ಕೃತ್ಯ” ಎಂದು ಕರೆದಿದ್ದಾರೆ.

”ಇದು ಬಿಜೆಪಿಯ ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಎನ್‌ಕೌಂಟರ್‌ಗಳು ಹಾಗೂ ಕೊಲೆಗಳು ಸಾಮಾನ್ಯ ಘಟನೆಯಾದಂತಾಗಿವೆ. ಇಂತಹ ಪ್ರಕರಗಳನ್ನು ಬಿಜೆಪಿ ನಿರ್ಲಕ್ಷಿಸುತ್ತದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಏನಾದರೂ ಸಂಭವಿಸಿದಾಗ ಪಕ್ಷವು ಕೇಂದ್ರೀಯ ಸಂಸ್ಥೆಗಳನ್ನು ಕಳುಹಿಸುತ್ತದೆ” ಎಂದು ಅವರು ಟೀಕಿಸಿದ್ದಾರೆ.

ಉತ್ತರ ಪ್ರದೇಶದ ಜನರಿಗೆ ಎನ್‌ಕೌಂಟರ್‌ಗಳು ಸಾಮಾನ್ಯ ಸಂಗತಿಯಾಗಿದೆ. ಈ ಎನ್‌ಕೌಂಟರ್‌ಗಳ ವಿರುದ್ಧ ಅಲ್ಲಿಯ ಜನರು ಪ್ರತಿಭಟಿಸಬೇಕು. ಪಶ್ಚಿಮ ಬಂಗಾಳದಲ್ಲಿ ಏನಾದರೂ ಸಂಭವಿಸಿದರೆ, ಅವರು (ಬಿಜೆಪಿ) ಕೇಂದ್ರ ಏಜೆನ್ಸಿಗಳನ್ನು ಕಳುಹಿಸುತ್ತಾರೆ. ಬಿಜೆಪಿ ಡಬಲ್ ಇಂಜಿನ್… ಡಬಲ್ ಸ್ಟ್ಯಾಂಡರ್ಡ್ ನೀತಿ ಎಂದು ಅವರು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರವು ಎನ್‌ಕೌಂಟರ್‌ಗಳನ್ನು ಸಮರ್ಥಿಸಿಕೊಂಡಿದೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ನಾಗರಿಕರನ್ನು ಅಪರಾಧಿಗಳಿಂದ ರಕ್ಷಿಸಲು ಎನ್‌ಕೌಂಟರ್‌ಗಳು ಅಗತ್ಯವೆಂದು ಪ್ರತಿಪಾದಿಸುತ್ತಿದೆ. ಈ ನಡುವೆ ಉತ್ತರ ಪ್ರದೇಶದಲ್ಲಿ ನಕಲಿ ಎನ್‌ಕೌಂಟರ್‌ಗಳ ಆರೋಪಗಳಿವೆ ಮತ್ತು ಉತ್ತರ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯ ಬಗ್ಗೆ ಹಲವಾರು ಮಾನವ ಹಕ್ಕುಗಳ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...