Homeಕರ್ನಾಟಕನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

- Advertisement -
- Advertisement -

ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಅವರು, ”ತಮಗೆ ಟಿಕೆಟ್ ಸಿಗದಿರಲು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರೇ ನೇರ ಕಾರಣ” ಎಂದು ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ” ಎಂದು ಹೊಸ ಬಾಂಬ್ ಸಿಡಿಸಿದರು.

”ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ?” ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

”ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌” ಎಂದು ಕಾಂಗ್ರೆಸ್​ ಮುಖಂಡ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

”ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ” ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ: ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

”ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ, ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದರು, ಆದರೆ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ” ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

”ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಫೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು” ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯೊಳಗಿನ ವೇದನೆಯನ್ನುಸಹಿಸಕೊಂಡರೆ ಜಗದೀಶ್​ ಶೆಟ್ಟರ್ ಅವರಿಗೆ ಮಾನ ಮರ್ಯಾದೆ ಇಲ್ಲ ಅಂತ ಕಾಣುತ್ತಾರೆ. ನಾನು 70 ವರ್ಷ ಆದ ಮೇಲೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ನನ್ನ ಕೊನೆ ಚುನಾವಣೆ…” ಎನ್ನುತ್ತಾ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಭಾವುಕಾರದರು.

”ಕಾಂಗ್ರೆಸ್ ನಾಯಕರಿಗೆ ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ, ಪಕ್ಷ ನಶಿಸಿ ಹೋಗುತ್ತಿದೆ. ಪಕ್ಷವನ್ನು ಮುಗಿಸಲು ಕಾಯುತ್ತಿದ್ದಾರೆ. ಬಿಎಲ್ ಸಂತೋಷ್ ಜೊತೆ ಒಂದೊಂದೆ ಹೆಸರು ಬರತ್ತೆ. ಬಿಎಲ್​ ಸಂತೋಷ್ ಅವರಿಗೆ ಒಂದೇ ಹೇಳೋದು. ನಿಮ್ಮ ಮಾನಸ ಪುತ್ರನಿಗೆ ತೋರಿಸೋ ಪ್ರೀತಿ ನನಗೆ ಒಂದು ಪರ್ಸೆಂಟ್ ತೋರಸಬೇಕಿತ್ತು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....