Homeಕರ್ನಾಟಕಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

- Advertisement -
- Advertisement -

ರಾಜ್ಯ ಚುನಾವಣಾ ಸಂದರ್ಭದಲ್ಲಿ ಸಿಎಂ ರೇಸ್‌ನಲ್ಲಿದ್ದ ಬಿಜೆಪಿಯ ಕೆಲವು ಲಿಂಗಾಯತ ನಾಯಕರು ಬಿಜೆಪಿ ತೊರೆಯುತ್ತಿರುವುದಕ್ಕೆ ಪಕ್ಷದಲ್ಲಿನ ಬ್ರಾಹ್ಮಣ ನಾಯಕರೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ. ಇದ್ದಕ್ಕೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿ ಆಗೋದು ಎಂದು ಹೇಳಿದ್ದಾರೆ.

ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ಯಾವ್ ಜೋಶಿ? ಯಾವ್ ಬಿ.ಎಲ್. ಸಂತೋಷ? ಅವರು ಮುಖ್ಯಮಂತ್ರಿ ಆಗಲ್ಲ. ಈ ಬಾರಿ ಲಿಂಗಾಯತರೇ ಮುಖ್ಯಮಂತ್ರಿ ಆಗೋದು” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂಬ ಚರ್ಚೆ ಬೆನ್ನಲ್ಲೇ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿಯಾಗುತ್ತರೆ ಎಂದು ಹೇಳಿದ್ದಾರೆ. ”ಪ್ರಹ್ಲಾದ್‌ ಜೋಶಿ ಅವರು ಕೇಂದ್ರ ರಾಜಕೀಯದಲ್ಲಿ ಇರುತ್ತಾರೆ. ಅವರು ಇಲ್ಲಿಗೆ ಬರುವ ಪ್ರಮೇಯ ಇಲ್ಲ. ಬಿಎಲ್‌ ಸಂತೋಷ್‌ ಕೂಡ ಇಲ್ಲಿಗೆ ಬರುವ ಮಾತಿಲ್ಲ. ಹೀಗಾಗಿ ಮುಂದೆ ಯಾವತ್ತಿದ್ದರೂ ಲಿಂಗಾಯತ ನಾಯಕರೇ ಮುಂದಿನ ಮುಖ್ಯಮಂತ್ರಿ” ಎಂದು ಹೇಳಿದರು.

ಇದನ್ನೂ ಓದಿ: ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

”ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ. ಲಿಂಗಾಯತರು ಯಾರದರೂ ಬರಬಹುದು. ಅರವಿಂದ ಬೆಲ್ಲದ್‌ ಬಗ್ಗೆ ನನಗೆ ಗೊತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿಯೊಳಗೆ ಲಿಂಗಾಯತರು ಮಾತ್ರವೇ ಮುಖ್ಯಮಂತ್ರಿ ಆಗುತ್ತಾರೆ” ಎಂದರು.

ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ

”ಕೆಲವರು ಭಾರತೀಯ ಜನತಾ ಪಾರ್ಟಿಯನ್ನು ಬಿಟ್ಟು ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ಸೇರಿಕೊಂಡಿದ್ದಾರೆ. ಯಾವುದು ದೇಶ ವಿರೋಧಿ 2047ರಲ್ಲಿ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಉದ್ದೇಶವಿರುವ ಎಸ್‌ಡಿಪಿಐ ಹಾಗೂ ಪಿಎಫ್‌ಐ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್‌ ಜೊತೆ ಹೋಗಿರುವವರು ಬಿಜೆಪಿಯಲ್ಲಿ ಎಲ್ಲ ಅಧಿಕಾರವನ್ನು ಅನುಭವಿಸಿದ್ದಾರೆ” ಎಂದು ಹೆಸರು ಹೇಳದೇ ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ಧಾಳಿ ನಡೆಸಿದರು.

”ಬಿಜೆಪಿಯಲ್ಲಿ ಎಲ್ಲ ಸುಖವನ್ನು ಅನುಭವಿಸಿದ ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಹೋದರೆ ಪಕ್ಷಕ್ಕೆ ನಷ್ಟವಿಲ್ಲ. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ನಾಯಕರಿದ್ದಾರೆ. ಲಿಂಗಾಯತ ಹೆಸರು
ಹೇಳಿಕೊಂಡು ಶೆಟ್ಟರ್‌ ಶಾಸಕ, ಮಂತ್ರಿ, ಉಪ ಮುಖ್ಯಮಂತ್ರಿ, ಸ್ಪೀಕರ್ ಆಗಿ ಸುಖ ಉಂಡಿದ್ದಾರೆ” ಎಂದು ಟೀಕಿಸಿದರು.

”ಶಾಸಕ, ಸಚಿವ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಸ್ಪೀಕರ್‌ ಹೀಗೆ ಎಲ್ಲ ಸ್ಥಾನಮಾನಗಳನ್ನು ಅನುಭವಿಸಿ ಹೋಗಿದ್ದಾರೆ. ದುಡಿಯದೇ ದುಃಖಪಡದೆ ಉಂಡಿದ್ದಾರೆ. ಇಲ್ಲಿ ದುಡಿದವರೇ ಬೇರೆ. ಕರ್ನಾಟಕಕ್ಕೆ ಹೊಸ ನಾಯಕತ್ವ ಬರಲಿದೆ. ಹೊಸ ಎರಡನೇ ಸಾಲಿನ ನಾಯಕರು ಇಲ್ಲಿ ಮುಂದೆ ಬರಲಿದ್ದಾರೆ, ನಮ್ಮಲ್ಲೂ ಯುವ ನಾಯಕರು ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...