Homeಕರ್ನಾಟಕಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

- Advertisement -
- Advertisement -

ರಾಜ್ಯ ಚುನಾವಣಾ ಸಂದರ್ಭದಲ್ಲಿ ಸಿಎಂ ರೇಸ್‌ನಲ್ಲಿದ್ದ ಬಿಜೆಪಿಯ ಕೆಲವು ಲಿಂಗಾಯತ ನಾಯಕರು ಬಿಜೆಪಿ ತೊರೆಯುತ್ತಿರುವುದಕ್ಕೆ ಪಕ್ಷದಲ್ಲಿನ ಬ್ರಾಹ್ಮಣ ನಾಯಕರೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ. ಇದ್ದಕ್ಕೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿ ಆಗೋದು ಎಂದು ಹೇಳಿದ್ದಾರೆ.

ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ಯಾವ್ ಜೋಶಿ? ಯಾವ್ ಬಿ.ಎಲ್. ಸಂತೋಷ? ಅವರು ಮುಖ್ಯಮಂತ್ರಿ ಆಗಲ್ಲ. ಈ ಬಾರಿ ಲಿಂಗಾಯತರೇ ಮುಖ್ಯಮಂತ್ರಿ ಆಗೋದು” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂಬ ಚರ್ಚೆ ಬೆನ್ನಲ್ಲೇ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿಯಾಗುತ್ತರೆ ಎಂದು ಹೇಳಿದ್ದಾರೆ. ”ಪ್ರಹ್ಲಾದ್‌ ಜೋಶಿ ಅವರು ಕೇಂದ್ರ ರಾಜಕೀಯದಲ್ಲಿ ಇರುತ್ತಾರೆ. ಅವರು ಇಲ್ಲಿಗೆ ಬರುವ ಪ್ರಮೇಯ ಇಲ್ಲ. ಬಿಎಲ್‌ ಸಂತೋಷ್‌ ಕೂಡ ಇಲ್ಲಿಗೆ ಬರುವ ಮಾತಿಲ್ಲ. ಹೀಗಾಗಿ ಮುಂದೆ ಯಾವತ್ತಿದ್ದರೂ ಲಿಂಗಾಯತ ನಾಯಕರೇ ಮುಂದಿನ ಮುಖ್ಯಮಂತ್ರಿ” ಎಂದು ಹೇಳಿದರು.

ಇದನ್ನೂ ಓದಿ: ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

”ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ. ಲಿಂಗಾಯತರು ಯಾರದರೂ ಬರಬಹುದು. ಅರವಿಂದ ಬೆಲ್ಲದ್‌ ಬಗ್ಗೆ ನನಗೆ ಗೊತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿಯೊಳಗೆ ಲಿಂಗಾಯತರು ಮಾತ್ರವೇ ಮುಖ್ಯಮಂತ್ರಿ ಆಗುತ್ತಾರೆ” ಎಂದರು.

ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ

”ಕೆಲವರು ಭಾರತೀಯ ಜನತಾ ಪಾರ್ಟಿಯನ್ನು ಬಿಟ್ಟು ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ಸೇರಿಕೊಂಡಿದ್ದಾರೆ. ಯಾವುದು ದೇಶ ವಿರೋಧಿ 2047ರಲ್ಲಿ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಉದ್ದೇಶವಿರುವ ಎಸ್‌ಡಿಪಿಐ ಹಾಗೂ ಪಿಎಫ್‌ಐ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್‌ ಜೊತೆ ಹೋಗಿರುವವರು ಬಿಜೆಪಿಯಲ್ಲಿ ಎಲ್ಲ ಅಧಿಕಾರವನ್ನು ಅನುಭವಿಸಿದ್ದಾರೆ” ಎಂದು ಹೆಸರು ಹೇಳದೇ ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ಧಾಳಿ ನಡೆಸಿದರು.

”ಬಿಜೆಪಿಯಲ್ಲಿ ಎಲ್ಲ ಸುಖವನ್ನು ಅನುಭವಿಸಿದ ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಹೋದರೆ ಪಕ್ಷಕ್ಕೆ ನಷ್ಟವಿಲ್ಲ. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ನಾಯಕರಿದ್ದಾರೆ. ಲಿಂಗಾಯತ ಹೆಸರು
ಹೇಳಿಕೊಂಡು ಶೆಟ್ಟರ್‌ ಶಾಸಕ, ಮಂತ್ರಿ, ಉಪ ಮುಖ್ಯಮಂತ್ರಿ, ಸ್ಪೀಕರ್ ಆಗಿ ಸುಖ ಉಂಡಿದ್ದಾರೆ” ಎಂದು ಟೀಕಿಸಿದರು.

”ಶಾಸಕ, ಸಚಿವ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಸ್ಪೀಕರ್‌ ಹೀಗೆ ಎಲ್ಲ ಸ್ಥಾನಮಾನಗಳನ್ನು ಅನುಭವಿಸಿ ಹೋಗಿದ್ದಾರೆ. ದುಡಿಯದೇ ದುಃಖಪಡದೆ ಉಂಡಿದ್ದಾರೆ. ಇಲ್ಲಿ ದುಡಿದವರೇ ಬೇರೆ. ಕರ್ನಾಟಕಕ್ಕೆ ಹೊಸ ನಾಯಕತ್ವ ಬರಲಿದೆ. ಹೊಸ ಎರಡನೇ ಸಾಲಿನ ನಾಯಕರು ಇಲ್ಲಿ ಮುಂದೆ ಬರಲಿದ್ದಾರೆ, ನಮ್ಮಲ್ಲೂ ಯುವ ನಾಯಕರು ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...