Homeಕರ್ನಾಟಕಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

- Advertisement -
- Advertisement -

ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಕಾವು ಜೋರಾಗಿದೆ. ಮತ್ತೊಂದೆಡೆ ಮಾಜಿ ಸಚಿವ, ದಿವಂಗತ ಅನಂತಕುಮಾರ್‌ ಅವರ ಪಾಳೆಯದಲ್ಲಿದ್ದ ಬಿಜೆಪಿ ನಾಯಕರಿಗೆ ಟಿಕೆಟ್ ಕೈತಪ್ಪುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಅನಂತಕುಮಾರ್‌ ಅವರ ಪತ್ನಿ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಮಾಡಿರುವ ಟ್ವೀಟ್ ರಾಜಕೀಯ ಅರ್ಥಗಳನ್ನು ಹೊಮ್ಮಿಸಿದಂತೆ ಭಾಸವಾಗಿದೆ.

ಸೋಮವಾರ ಮಾಡಿರುವ ಟ್ವೀಟ್‌ವೊಂದರಲ್ಲಿ ತೇಜಸ್ವಿನಿ ಅನಂತಕುಮಾರ್‌, “ಈ ಗಿಡ ಜೂನ್ 5, 2015ರಂದು ಲಾಲ್‌‌ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂದು ಕೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೂ ತೇಜಸ್ವಿನಿಯವರ ಟ್ವೀಟ್‌ಗಳಿಗೂ ಕಾಕತಾಳೀಯವೆಂಬಂತೆ ಹೋಲಿಕೆ ಮಾಡಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್‌ ಅವರೊಂದಿಗೆ ಗುರುತಿಸಿಕೊಂಡು ಬೆಳೆದ ಅನೇಕರಿಗೆ ಬಿಜೆಪಿ ಟಿಕೆಟ್ ಕೈತಪ್ಪಿರುವಾಗ ಹಾಗೂ ರಾಜ್ಯ ಬಿಜೆಪಿಯೊಳಗೆ ಬಿಕ್ಕಟ್ಟು ತಾರಕ್ಕೇರುತ್ತಿರುವಾಗ ತೇಜಸ್ವಿನಿಯವರ ಪೋಸ್ಟ್‌ ವಿವಿಧ ಅರ್ಥಗಳಿಗೆ ಅವಕಾಶ ಮಾಡಿಕೊಟ್ಟಿದೆ.

“Cryptic message (ನಿಗೂಢ ಸಂದೇಶ) ಯಾಕೆ ಮೇಡಂ? ನೇರವಾಗಿ ಹೇಳಬಿಡಿ” ಎಂದು ಸಿಟಿಜನ್‌ ಆಫ್‌ ಕನ್ನಡಸ್ಥಾನ ಟ್ವಿಟರ್‌ ಖಾತೆ ಒತ್ತಾಯಿಸಿದೆ.

“ರೆಂಬೆ ಕೊಂಬೆ ಮುರಿದಿದೆ ಒಣಗಿಲ್ಲ. ಒಣಗಲು ಬಿಡಬಾರದು. ನಾವು ನೆಟ್ಟ ಸಸಿ ಮರವಾಗಿದೆ ಹೆಮ್ಮರವಾಗಿ ಬೆಳೆದು ನೂರಾರು ವರ್ಷಗಳ ಕಾಲ ಫಲ ನೀಡಬೇಕು. ಯಾರೂ ರಕ್ಷಿಸದಿದ್ದರೆ ನಾವೇ ಕಾರ್ಯ ಪ್ರವೃತ್ತರಾಗಬೇಕು. ಇಲ್ಲವಾದರೆ ನಮ್ಮ ಕಣ್ಮುಂದೆಯೇ ಒಣಗಿ ಸಾಯಬಹುದು, ಯೋಚಿಸೋಣ” ಎಂದು ಗಂಗಾಧರ್‌ ಬಿಕೆಎಸ್‌ ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಅನಂತಕುಮಾರ್ ಅವರು ನೆಟ್ಟ ಗಿಡ ಉಳಿಸೋದು ಎಷ್ಟು ಮುಖ್ಯನೋ ಹಾಗೆ ಅವರು ಬೆವರು ಸುರಿಸಿ ಕಟ್ಟಿದ ಪಕ್ಷ ಮತ್ತು ಸಿದ್ಧಾಂತ ಉಳಿಸುವುದು ಮುಖ್ಯವೆ, ಆ ಕೆಲಸ ಎಂದಿನಿಂದ ಶುರು ಮಾಡುತ್ತೀರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

“ಕಮಲ ಕರ್ನಾಟಕದಲ್ಲಿ, ಈ ಗಿಡ ಲಾಲ್ಬಾಗ್‌ನಲ್ಲಿ (ಒಣಗುತ್ತಿದೆ)” ಎಂದು ನವೀನ್‌ಕುಮಾರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಬಿ.ಎಲ್‌.ಸಂತೋಷ್, ಜೋಶಿ ಅವರಿಂದಾಗಿ ಗಿಡ ಮುದುಡಿ ಹೋಗಿದೆ ಅಷ್ಟೇ ಮೇಡಂ” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ನಮ್ಮ ಈ ಸುಂದರವಾದ ಸರ್ವಜನಾಂಗದ ಶಾಂತಿಯ ತೋಟದ ಶಾಂತಿಯನ್ನು ಕದಡುತ್ತಿರುವ ಬಿಜೆಪಿ ಮುಂಬರುವ ದಿನಗಳಲ್ಲಿ ಮುದುರಿಕೊಳ್ಳುವುದರ ಸಂಕೇತವೆನಿಸುತ್ತೆ. ಬೇಗ ಬಿದ್ದು ನಾಶವಾಗಿ ಹೋಗಲಿ, ಉಳಿದೆಲ್ಲ ಮರ-ಗಿಡ-ಬಳ್ಳಿಗಳು ಹಸಿರಿನಿಂದ ಕಂಗೊಳಿಸಲಿ” ಎಂದು ಬಾರುಕೋಲು ಟ್ವಿಟರ್‌ ಖಾತೆ ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...