Homeಕರ್ನಾಟಕಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

- Advertisement -
- Advertisement -

ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಕಾವು ಜೋರಾಗಿದೆ. ಮತ್ತೊಂದೆಡೆ ಮಾಜಿ ಸಚಿವ, ದಿವಂಗತ ಅನಂತಕುಮಾರ್‌ ಅವರ ಪಾಳೆಯದಲ್ಲಿದ್ದ ಬಿಜೆಪಿ ನಾಯಕರಿಗೆ ಟಿಕೆಟ್ ಕೈತಪ್ಪುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಅನಂತಕುಮಾರ್‌ ಅವರ ಪತ್ನಿ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಮಾಡಿರುವ ಟ್ವೀಟ್ ರಾಜಕೀಯ ಅರ್ಥಗಳನ್ನು ಹೊಮ್ಮಿಸಿದಂತೆ ಭಾಸವಾಗಿದೆ.

ಸೋಮವಾರ ಮಾಡಿರುವ ಟ್ವೀಟ್‌ವೊಂದರಲ್ಲಿ ತೇಜಸ್ವಿನಿ ಅನಂತಕುಮಾರ್‌, “ಈ ಗಿಡ ಜೂನ್ 5, 2015ರಂದು ಲಾಲ್‌‌ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂದು ಕೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೂ ತೇಜಸ್ವಿನಿಯವರ ಟ್ವೀಟ್‌ಗಳಿಗೂ ಕಾಕತಾಳೀಯವೆಂಬಂತೆ ಹೋಲಿಕೆ ಮಾಡಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್‌ ಅವರೊಂದಿಗೆ ಗುರುತಿಸಿಕೊಂಡು ಬೆಳೆದ ಅನೇಕರಿಗೆ ಬಿಜೆಪಿ ಟಿಕೆಟ್ ಕೈತಪ್ಪಿರುವಾಗ ಹಾಗೂ ರಾಜ್ಯ ಬಿಜೆಪಿಯೊಳಗೆ ಬಿಕ್ಕಟ್ಟು ತಾರಕ್ಕೇರುತ್ತಿರುವಾಗ ತೇಜಸ್ವಿನಿಯವರ ಪೋಸ್ಟ್‌ ವಿವಿಧ ಅರ್ಥಗಳಿಗೆ ಅವಕಾಶ ಮಾಡಿಕೊಟ್ಟಿದೆ.

“Cryptic message (ನಿಗೂಢ ಸಂದೇಶ) ಯಾಕೆ ಮೇಡಂ? ನೇರವಾಗಿ ಹೇಳಬಿಡಿ” ಎಂದು ಸಿಟಿಜನ್‌ ಆಫ್‌ ಕನ್ನಡಸ್ಥಾನ ಟ್ವಿಟರ್‌ ಖಾತೆ ಒತ್ತಾಯಿಸಿದೆ.

“ರೆಂಬೆ ಕೊಂಬೆ ಮುರಿದಿದೆ ಒಣಗಿಲ್ಲ. ಒಣಗಲು ಬಿಡಬಾರದು. ನಾವು ನೆಟ್ಟ ಸಸಿ ಮರವಾಗಿದೆ ಹೆಮ್ಮರವಾಗಿ ಬೆಳೆದು ನೂರಾರು ವರ್ಷಗಳ ಕಾಲ ಫಲ ನೀಡಬೇಕು. ಯಾರೂ ರಕ್ಷಿಸದಿದ್ದರೆ ನಾವೇ ಕಾರ್ಯ ಪ್ರವೃತ್ತರಾಗಬೇಕು. ಇಲ್ಲವಾದರೆ ನಮ್ಮ ಕಣ್ಮುಂದೆಯೇ ಒಣಗಿ ಸಾಯಬಹುದು, ಯೋಚಿಸೋಣ” ಎಂದು ಗಂಗಾಧರ್‌ ಬಿಕೆಎಸ್‌ ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಅನಂತಕುಮಾರ್ ಅವರು ನೆಟ್ಟ ಗಿಡ ಉಳಿಸೋದು ಎಷ್ಟು ಮುಖ್ಯನೋ ಹಾಗೆ ಅವರು ಬೆವರು ಸುರಿಸಿ ಕಟ್ಟಿದ ಪಕ್ಷ ಮತ್ತು ಸಿದ್ಧಾಂತ ಉಳಿಸುವುದು ಮುಖ್ಯವೆ, ಆ ಕೆಲಸ ಎಂದಿನಿಂದ ಶುರು ಮಾಡುತ್ತೀರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

“ಕಮಲ ಕರ್ನಾಟಕದಲ್ಲಿ, ಈ ಗಿಡ ಲಾಲ್ಬಾಗ್‌ನಲ್ಲಿ (ಒಣಗುತ್ತಿದೆ)” ಎಂದು ನವೀನ್‌ಕುಮಾರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಬಿ.ಎಲ್‌.ಸಂತೋಷ್, ಜೋಶಿ ಅವರಿಂದಾಗಿ ಗಿಡ ಮುದುಡಿ ಹೋಗಿದೆ ಅಷ್ಟೇ ಮೇಡಂ” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ನಮ್ಮ ಈ ಸುಂದರವಾದ ಸರ್ವಜನಾಂಗದ ಶಾಂತಿಯ ತೋಟದ ಶಾಂತಿಯನ್ನು ಕದಡುತ್ತಿರುವ ಬಿಜೆಪಿ ಮುಂಬರುವ ದಿನಗಳಲ್ಲಿ ಮುದುರಿಕೊಳ್ಳುವುದರ ಸಂಕೇತವೆನಿಸುತ್ತೆ. ಬೇಗ ಬಿದ್ದು ನಾಶವಾಗಿ ಹೋಗಲಿ, ಉಳಿದೆಲ್ಲ ಮರ-ಗಿಡ-ಬಳ್ಳಿಗಳು ಹಸಿರಿನಿಂದ ಕಂಗೊಳಿಸಲಿ” ಎಂದು ಬಾರುಕೋಲು ಟ್ವಿಟರ್‌ ಖಾತೆ ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...