Homeಮುಖಪುಟಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

- Advertisement -
- Advertisement -

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ದೇಶದಾದ್ಯಂತ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ. ಒಂಡರ್ಮನ್‌ ನಗರ, ದಕ್ಷಿಣ ಡಾರ್ಫರ್‌, ನ್ಯಾಲಾ, ರಾಜಧಾನಿ ಖಾರ್ಟೂಮ್‌ ಸೇರಿ ವಿವಿಧ ನಗರಗಳನ್ನು ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ಶಸ್ತ್ರಸಜ್ಜಿತ ವಾಹನಗಳು, ಮಷೀನ್‌ಗನ್‌ ಜೋಡಿಸಲಾದ ಟ್ರಕ್‌ಗಳು ಜಮಾವಣೆಗೊಂಡಿವೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಈ ಸಂಘರ್ಷದಿಂದ ಸುಡಾನ್‌ ರಾಜಧಾನಿ ಖಾರ್ಟೂಮ್‌ನಲ್ಲಿ 50 ಲಕ್ಷಕ್ಕಿಂತಲೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಯುದ್ಧಭೀತಿಯಿಂದ ಯಾರೂ ಮನೆಯಿಂದ ಹೊರ ಬರಲಾರದೆ ಪರಿಸ್ಥಿತಿ ಎದುರಾಗಿದೆ. ಮುಸಲ್ಮಾನರ ಪವಿತ್ರ ತಿಂಗಳು ರಂಜಾನ್‌ ಕೂಡ ಆಗಿರುವುದರಿಂದ ಇಲ್ಲಿನ ಜನರು ವಿದ್ಯುತ್ ಮತ್ತು ನೀರಿನ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

 ಇನ್ನು ಕರ್ನಾಟಕದ 31 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಮಂದಿ ಶಿವಮೊಗ್ಗ ಮತ್ತು 19 ಮಂದಿ ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ 31 ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಜನ, ಶಿವಮೊಗ್ಗ ಮತ್ತು 19 ಜನರು, ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

”ಮೂರು ದಿನಗಳಿಂದ ನಾವು ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಡಿಗೆ ಮನೆಯೊಳಗೆ ಸಿಕ್ಕಿಬಿದ್ದಿದ್ದೇವೆ. ಹೊರಗಿನಿಂದ ಪದೇ ಪದೇ ಗುಂಡಿನ ಸದ್ದು ಮತ್ತು ಶೆಲ್‌ಗಳ ಸದ್ದು ಕೇಳಿಸುತ್ತದೆ. ನಮ್ಮ ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ ಮತ್ತು ನಾವು ಭಾರತಕ್ಕೆ ಹೇಗೆ ಹಿಂತಿರುಗುತ್ತೇವೆ ಎಂದು ನಮಗೆ ಖಚಿತವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸುಡಾನ್‌ನಲ್ಲಿ ನೂರಾರು ಭಾರತೀಯರು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸೂಡಾನ್‌ನಲ್ಲಿ ಕರ್ನಾಟಕದ ಜನರು ಆತಂಕದಲ್ಲಿರುವ ವಿಷಯ ತಿಳಿದು ಅವರ ರಕ್ಷಣೆಗೆ ಮನವಿ ಮಾಡಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಕಳೆದ ಕೆಲವು ಸಮಯದಿಂದ ಆಹಾರವಿಲ್ಲದೆ ಸುಡಾನ್‌ನ ಅಂತರ್ಯುದ್ಧದಲ್ಲಿ ಸಿಲುಕಿ ತತ್ತರಿಸಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...