Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಗುಜರಾತ್ ಹತ್ಯಾಕಾಂಡ ಘಟನೆಯ ಕುರಿತು ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಎನ್ನುವ ಸಾಕ್ಷ್ಯಚಿತ್ರವನ್ನು ಬಿಬಿಸಿ ಬಿಡುಗಡೆ ಮಾಡಿತ್ತು. ಈ ಸಾಕ್ಷ್ಯಚಿತ್ರವನ್ನು ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರದರ್ಶನದ ಪ್ರಯತ್ನ ಮಾಡಿರುವುದಕ್ಕೆ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಯೊಬ್ಬರನ್ನು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಒಂದು ವರ್ಷ ಡಿಬಾರ್ ಮಾಡಲಾಗಿತ್ತು. ವಿಶ್ವವಿದ್ಯಾಲಯದ ಈ ನಿರ್ಧಾರದ ವಿರುದ್ಧ ಸಂಶೋಧನಾ ವಿದ್ಯಾರ್ಥಿ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಗುರುವಾರ ಹೈಕೋರ್ಟ್, ದೆಹಲಿ ವಿಶ್ವವಿದ್ಯಾಲಯದ ನಿಲುವು ಏನು? ಎಂದು ಕೇಳಿದೆ.

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ಮತ್ತು ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಲೋಕೇಶ್ ಚುಗ್ ಅವರ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರ ಏಕಸದಸ್ಯ ಪೀಠವು, ದೆಹಲಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಶ್ವವಿದ್ಯಾಲಯದ ಪರ ವಕೀಲರಿಗೆ ಉತ್ತರವನ್ನು ಸಲ್ಲಿಸುವಂತೆ ಕೇಳದೆ. ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

ಜನವರಿ 27ರಂದು ದೆಹಲಿ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ “ನಿಷೇಧಿಸಲಾದ BBC ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು ಎಂದು ಚುಗ್ ಅವರ ಮನವಿಯಲ್ಲಿ ತಿಳಿಸಲಾಗಿದೆ. ಆ ಸಂದರ್ಭದಲ್ಲಿ ಚುಗ್ ಪ್ರತಿಭಟನಾ ಸ್ಥಳದಲ್ಲಿ ಇರಲಿಲ್ಲ ಮತ್ತು ಯಾವುದೇ ರೀತಿಯಲ್ಲಿ ಪ್ರದರ್ಶನದಲ್ಲಿ ಭಾಗವಹಿಸಿರಲಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಚುಗ್ ಅವರು ವಿಜ್ಞಾನ ವಿಭಾಗದ ಮಾನವಶಾಸ್ತ್ರ ವಿಭಾಗದಿಂದ ತಮ್ಮ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

”ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವಾಗ ಕಲಾ ವಿಭಾಗದ ಹೊರಗೆ ತಾನು ಮಾಧ್ಯಮಗಳಿಗೆ ನೇರ ಸಂದರ್ಶನ ನೀಡುತ್ತಿದ್ದೆ. ಅಲ್ಲಿ ಶಾಂತಿ ಕದಡುವ ಕೆಲವು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದರು. ಆದರೆ ನಾನು ಯಾವುದೇ ರೀತಿಯ ಪ್ರಚೋದನೆ, ಹಿಂಸೆ ಅಥವಾ ಶಾಂತಿ ಭಂಗ ತಂದಿಲ್ಲ ಹಾಗಾಗಿ ಆಗ ಪೊಲೀಸರು ನನ್ನನ್ನು ಬಂಧಿಸಿಲ್ಲ ಮತ್ತು ನನ್ನ ಮೇಲೆ ಯಾವ ಆರೋಪವನ್ನೂ ಹೊರಿಸಿಲ್ಲ” ಎಂದು ಅವರ ಮನವಿಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 16ರಂದು ಸಾಕ್ಷ್ಯಚಿತ್ರದ ಪ್ರದರ್ಶನದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ವಿಶ್ವಿದ್ಯಾಲಯದ ಶಿಸ್ತುಪಾಲನಾಧಿಕಾರಿ ಶೋಕಾಸ್ ನೋಟಿಸ್ ನೀಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಫೆಬ್ರವರಿ 20ರಂದು ಅವರು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಿರುವ ಬಗ್ಗೆಯೂ ಚುಗ್ ಅವರ ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 3ರಂದು, ಅವರು ತಮ್ಮ ಪಿಎಚ್‌ಡಿ ಪ್ರಬಂಧವನ್ನು ಸಲ್ಲಿಸಿದರು. ಆದರೆ, ರಿಜಿಸ್ಟಾರ್ ಅವರು, ಮಾರ್ಚ್ 10ರಂದು, ಒಂದು ವರ್ಷದವರೆಗೆ ಯಾವುದೇ ವಿಶ್ವವಿದ್ಯಾಲಯ/ಕಾಲೇಜು/ಇಲಾಖೆ ಪರೀಕ್ಷೆಯನ್ನು ತೆಗೆದುಕೊಳ್ಳದಂತೆ ಡಿಬಾರ್‌ಮೆಂಟ್ ದಂಡವನ್ನು ವಿಧಿಸುವ ಮೆಮೊರಾಂಡಮ್ ಅನ್ನು ಹೊರಡಿಸಿದರು ಎಂದು ತಿಳಿಸಿದ್ದಾರೆ.

ಚುಗ್ ಅವರು ದೆಹಲಿ ವಿಶ್ವವಿದ್ಯಾಲಯದ ಪ್ರಾಮಾಣಿಕ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾರೆ. ಡಿಬಾರ್ ಮಾಡುವ ಮೂಲಕ ಅವರ ಶಿಕ್ಷಣ ಮತ್ತು ವೃತ್ತಿಪರ ಅವಕಾಶಗಳನ್ನು ಕಸಿದುಕೊಳ್ಳುವ ಸಾಧ್ಯತೆಯಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 10ರ ಡಿಬಾರ್ ಪತ್ರವನ್ನು ರದ್ದುಗೊಳಿಸುವುದು, ಫೆಬ್ರವರಿ 16ರ ಶೋಕಾಸ್ ನೋಟಿಸ್ ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ತಿಳಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...