Homeಕರ್ನಾಟಕಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

ಬಿಜೆಪಿಯಲ್ಲೇ ಉಳಿಯಲು ರಾಮದಾಸ್ ನಿರ್ಧಾರ; ಭಾವನಾತ್ಮಕ ಭಾಷಣದಲ್ಲಿ ಹೇಳಿದ್ದೇನು?

- Advertisement -
- Advertisement -

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅವರು ಮಂಗಳವಾರ ಸಂಜೆ ಜನರೊಂದಿಗೆ ಸಭೆ ನಡೆಸಿದ್ದು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಮುಖಂಡರ ಭೇಟಿಗೂ ನಿರಾಕರಿಸಿದ್ದ ರಾಮದಾಸ್ ಅವರು ಬಂಡಾಯ ಏಳುವ ಸೂಚನೆಗಳು ದೊರೆತ್ತಿದ್ದವು. ಆದರೆ ಅಂತಿಮವಾಗಿ ಪಕ್ಷದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಕ್ಷೇತ್ರದ ಜನರೊಂದಿಗೆ ಮಾತನಾಡಿದ ಅವರು, ತಾವು ನಡೆದುಬಂದ ರಾಜಕಾರಣವನ್ನು ಮೆಲುಕು ಹಾಕಿದರು. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದರು. “ನಾನು ಶಾಸಕನಾಗಿರಲಿ, ಇಲ್ಲದಿರಲಿ ನನ್ನ ಕಚೇರಿ ತೆರೆದಿರುತ್ತದೆ. ಕ್ಷೇತ್ರದ ಪ್ರತಿ ವಾರ್ಡ್‌ನ ಮನೆಗೂ ಭೇಟಿ ನೀಡಿ ಊಟ ಉಪಚಾರ ಮಾಡುತ್ತೇನೆ. ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿ ಇರುತ್ತೇನೆ” ಎಂದು ಘೋಷಿಸಿದ್ದಾರೆ.

“ಶಾಸಕನಾದ ನಾನು ಪ್ರತಿಯೊಂದು ಬೂತ್‌ನ ಅಧ್ಯಕ್ಷರ ಮನೆಗೆ ಬರುತ್ತೇನೆ. ನಿಮ್ಮ ಮನೆಯಲ್ಲೇ ಊಟ ಮಾಡುತ್ತೇನೆ. ನಿಮ್ಮ ಯೋಗಕ್ಷೇಮ ವಿಚಾರಿಸುತ್ತೇನೆ. ಕಾರ್ಯಕರ್ತರೇ ಆಸ್ತಿ. ನನ್ನನ್ನು ಅಣ್ಣನ ಸ್ಥಾನದಲ್ಲಿ ನೋಡುತ್ತಿದ್ದೀರಿ. ಕೊನೆಯುಸಿರು ಇರುವವರೆಗೂ ನಿಮ್ಮ ಕ್ಷೇಮವನ್ನು ವಿಚಾರಿಸುತ್ತೇನೆ. ಶಾಸಕರ ಕಚೇರಿ ಇದೆ. ನಾನು ಶಾಸಕನಾಗಿ ಇರುತ್ತೇನೋ ಬಿಡುತ್ತೇನೋ ಬೇರೆ ವಿಷಯ. ಆದರೆ ನನ್ನ ಕಚೇರಿ ಜನರ ಸೇವೆಗಾಗಿ ತೆರೆದಿರುತ್ತದೆ” ಎಂದಿದ್ದಾರೆ.

“ಶಾಸಕನಾಗಿ ಸೇವೆ ಮಾಡುವುದಕ್ಕಾಗಿ ಸರ್ವೇ ಮಾಡಿಸಿದೆ. ಜಾತಿ ಮತ ಎಲ್ಲವನ್ನೂ ಮೀರಿ ನನಗೆ ಬೆಂಬಲ ನೀಡಿದ್ದಾರೆ. ಚುನಾವಣೆಯಲ್ಲಿ ನಿಂತರೆ ಹನ್ನೊಂದರಿಂದ ಹನ್ನೆರಡು ಸಾವಿರ ಮತಗಳಲ್ಲಿ ಗೆಲ್ಲುತ್ತೇನೆ ಅಂತ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

“ಮೋದಿಯವರು ಮಾಡಿದ ಪ್ರಶಂಸೆ ನನಗೆ ನೆನಪಿದೆ. ಪಕ್ಷ ಮುಖ್ಯನಾ? ನೋವು ಮುಖ್ಯನಾ ಎಂದು ಪ್ರಶ್ನೆ ಬರುತ್ತದೆ. ಜಗದೀಶ್‌ ಶೆಟ್ಟರು ನಮ್ಮ ಮುಂದೆ ಇದ್ದಾರೆ. ಅವರಿಗೆ ಅನಿಸಿದ ನಿರ್ಧಾರ ತೆಗೆದುಕೊಂಡಿದ್ದಾರೆ. ವೈಯಕ್ತಿಕ ವಿಷಯ ಮುಖ್ಯನಾ? ಪಕ್ಷದ ವಿಚಾರ ಮುಖ್ಯನಾ? ದೇಶವನ್ನು ಕಾಪಾಡುತ್ತಿರುವ ಮಹಾನ್ ನಾಯಕ ಮೋದಿಯವರು ಮುಖ್ಯನಾ? ಎಂಬ ತೊಳಲಾಟದಲ್ಲಿ ಇದ್ದೇನೆ. ಹನ್ನೊಂದು ಸಾವಿರ ಪ್ರಮುಖರು ನನ್ನನ್ನು ಮನೆಯ ಮಗ ಎಂದು ಸ್ವೀಕರಿಸಿದ್ದೀರಿ. ಕಠಿಣವಾದ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳಿದರು.

“ನನ್ನ ನಿರ್ಧಾರ ನಿಮಗೆ ಕೆಟ್ಟದ್ದು ಅನಿಸಿದರೂ ಅದು ಒಳ್ಳೆಯ ನಿರ್ಧಾರವೆಂದು ನಾನು ಭಾವಿಸಿರುವೆ. ಅದನ್ನು ದಯವಿಟ್ಟು ಸ್ವೀಕರಿಸಬೇಕು. ಆರ್‌ಎಸ್‌ಎಸ್‌ನ ಸ್ವಯಂಸೇವಕನಾದ ನಾನು ಹೇಗೆ ಪಕ್ಷವನ್ನು ಕಟ್ಟಿ ಬೆಳೆಸಿದೆನೋ ಹಾಗೆಯೇ ನಡೆದುಕೊಂಡು ಹೋಗಬೇಕಾಗಿರುವುದು ಮುಖ್ಯವಾಗುತ್ತದೆ” ಎಂದಿದ್ದಾರೆ.

“ಪಕ್ಷದ ನಿರ್ಣಯವನ್ನು ತೆಗೆದುಕೊಳ್ಳಬೇಕು. ಭಾರತಾಂಬೆಯ ಗೌರವವನ್ನು ಹೆಚ್ಚಿಸುವ ಸಂದರ್ಭ ಇದು. ನಿಮ್ಮ ಶಾಸಕ ನಿಮ್ಮ ಮನೆಯಲ್ಲಿಯೇ ಇರುತ್ತಾನೆ. ಭಾರತೀಯ ಜನತಾ ಪಕ್ಷವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ನಿಮ್ಮ ಹಿತದೃಷ್ಟಿಯಿಂದ ಮತ್ತು ಕ್ಷೇತ್ರದ ಹಿತಾದೃಷ್ಟಿಯಿಂದ ಆಗಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಮೂರು ದಿನಗಳ ಅವಧಿಯಲ್ಲಿ ಯಾರ್‍ಯಾರು ಹೋದರು, ಯಾರ್‍ಯಾರು ಬಂದರು ಎಂದು ತಿಳಿಸಿದೆ. ಈ ಕ್ಷೇತ್ರದ ಶೇ. 90ರಷ್ಟು ಪದಾಧಿಕಾರಿಗಳು ನನ್ನ ಜೊತೆ ಇದ್ದೀರಿ. ಇದಕ್ಕೆ ನನ್ನ ಜೀವನ ಸಾರ್ಥಕವಾಯಿತು” ಎಂದು ಭಾವುಕವಾಗಿ ನುಡಿದ್ದಾರೆ.

“ಕಾರ್ಯಕರ್ತರ ಯೋಗ ಕ್ಷೇಮ ಮಾಡುತ್ತಿದ್ದೇನೆ. 400 ಕಿಮೀ ರಸ್ತೆ ಆಗಿದೆ, ಇನ್ನೊಂದಿಷ್ಟು ಆಗಬೇಕಾಗಿದೆ.
ಕಬಿನಿಯಿಂದ ನೀರು ಸರಬರಾಜು ಆಗುತ್ತಿದೆ. 120 ಪಾರ್ಕ್‌ಗಳ ಅಭಿವೃದ್ಧಿಯಾಗಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡಿಸುತ್ತಿದ್ದೇವೆ. ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಕೊಡಿಸಲು 4500 ಮನೆ ನಿರ್ಮಾಣ ಮಾಡುತ್ತಿದ್ದೇವೆ. ಮನೆಗಳ ಕಾರ್ಯ ಆರಂಭವಾಗಿದೆ. ಬ್ಯಾಂಕ್‌ಗಳು ಒಪ್ಪಿಗೆ ಕೊಟ್ಟಿವೆ” ಎಂದು ವಿವರಿಸಿದ್ದಾರೆ.

“ಇಷ್ಟೆಲ್ಲ ಕೆಲಸ ನಿರಂತರವಾಗಿ ಮಾಡಿದ್ದೇನೆ. 265 ಬೂತ್‌ಗಳಲ್ಲಿ ಸಭೆ ಕರೆದು ಅಭಿಪ್ರಾಯ ತಿಳಿಸಿದ್ದೀರಿ. ನಿಮ್ಮ ಭಾವನೆಗಳನ್ನು ಸ್ಪಷ್ಟಪಡಿಸಿದ್ದೀರಿ. ನಾನು ಒಂದು ಪಕ್ಷದ ವ್ಯವಸ್ಥೆಯಲ್ಲಿ ಬಂದಿರುವವನು. ಬಿ.ಎಸ್.ಯಡಿಯೂರಪ್ಪ ಮತ್ತು ಅನಂತಕುಮಾರ್‌ ಅವರಿಂದಾಗಿ ಎರಡು ಅವಧಿಯಲ್ಲಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷನಾಗಿದ್ದೆ. ಅದನ್ನು ನಾನು ಮರೆಯಲ್ಲ. ಪಕ್ಷ ನನ್ನ ತಾಯಿ ಸಮಾನ” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿರಿ: ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ನೋವುಗಳನ್ನು ಅನುಭವಿಸಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅನೇಕ ಕಡೆ ಬೆಂಕಿ ಹಚ್ಚಿದವರಿದ್ದಾರೆ. ನನ್ನ ಕ್ಷೇತ್ರದ ಜನ ಯಾವತ್ತೂ ಜಗಳ ಮಾಡಲಿಲ್ಲ. ಈ ಬಾರಿ ಕೂಡ ಮಂತ್ರಿ ಸ್ಥಾನ ಕೊಡಲಿಲ್ಲ. ಹೊರಗಿನವರಿಗೆ ಕೊಟ್ಟರು. ನಾನು ಆಗಲೂ ಮಾತನಾಡಲಿಲ್ಲ. ನೀವು ತಾಳ್ಮೆಯಿಂದ ಇದ್ದೀರಿ. ಐದು ವರ್ಷಗಳಿಂದ ಮಂತ್ರಿ ಸ್ಥಾನವನ್ನು ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹನ್ನೊಂದು ಶಾಸಕರು ಈ ಭಾಗದಲ್ಲಿ ಬಂದು ಹೋಗಿದ್ದಾರೆ. ಉಳಿದವನು ನಾನೊಬ್ಬ ಮಾತ್ರ. ಈ ಮೂವತ್ತು ವರ್ಷಗಳ ಕಾಲ ಎಲ್ಲ ನೋವುಗಳನ್ನು ಸಹಿಸಿಕೊಂಡು ಸ್ವಯಂ ಸೇವಕನಾಗಿ ಜೀವನ ನಡೆಸುತ್ತಾ ಬಂದಿರುವೆ. ರಾಜಕಾರಣದಲ್ಲಿ ಆಪಾದನೆಗಳು ಬರುತ್ತವೆ. ನೋವಾಗುತ್ತವೆ. ಆದರೆ ಮಹಾಭಾರತ ನೆನಪಾಗುತ್ತದೆ. ಕೃಷ್ಣನನ್ನೇ ಕಳ್ಳ ಎಂದರು, ನೀನ್ಯಾವ ಮಹಾ ಎನಿಸುತ್ತದೆ ಎಂದು ಮೆಲುಕು ಹಾಕಿದ್ದಾರೆ.

“ನನ್ನ ಜೀವನ ಇರುವವರೆಗೂ ಕಾರ್ಯಕರ್ತರ ಮನೆಯಾಳು. ಅವರ ಯೋಗಕ್ಷೇಮಕ್ಕಾಗಿ ಇರುತ್ತೇನೆ. ಆಗಿಬೇಕಾಗಿರುವ ಕೆಲಸಗಳು ಮುಂದೆ ಪೂರ್ಣವಾಗುತ್ತವೆಯೋ ಇಲ್ಲವೋ ಇಲ್ಲವೋ ಎಂಬ ಆತಂಕವಿದೆ” ಎಂದೂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...