Homeಮುಖಪುಟಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

ಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

- Advertisement -
- Advertisement -

ಕಪ್ಪುವರ್ಣೀಯ ಯುವಕನೊಬ್ಬ ಬಾಗಿಲು ಬೆಲ್ ಬಾರಿಸಿದ್ದಕ್ಕೆ ಮನೆ ಮಾಲಿಕ ಆತನ ಮೇಲೆ ಎರಡು ಬಾರಿ ಗುಂಡು ಹಾರಿಸಿರುವ ಘಟನೆ ಕಳೆದ ವಾರ ಮಿಸೌರಿಯ ಕನ್ಸಾಸ್ ಸಿಟಿಯಲ್ಲಿ ನಡೆದಿದೆ. ಸಧ್ಯ ಗುಂಡು ಹಾರಿಸಿರುವ ವಯಸ್ಸಾದ ವ್ಯಕ್ತಿಯ ವಿರುದ್ಧ ಸೋಮವಾರ ಆರೋಪಗಳನ್ನು ದಾಖಲಿಸಲಾಗಿದೆ ಎಂದು ಕ್ಲೇ ಕೌಂಟಿ ಪ್ರಾಸಿಕ್ಯೂಟಿಂಗ್ ಅಟಾರ್ನಿ ಜಕಾರಿ ಥಾಂಪ್ಸನ್ ಹೇಳಿದ್ದಾರೆ.

85 ವರ್ಷ ವಯಸ್ಸಿನ ಬಿಳಿವರ್ಣೀಯ ಆಂಡ್ರ್ಯೂ ಲೆಸ್ಟರ್ ಅವರು, 16 ವರ್ಷದ ರಾಲ್ಫ್ ಯಾರ್ಲ್ ಅವರಿಗೆ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಪಾಂಯಿಂಟ್ 32-ಕ್ಯಾಲಿಬರ್ ಪಿಸ್ತೂಲ್‌ನಿಂದ ಗುಂಡುಹೊಡೆದಿದ್ದಾರೆ. ಈ ಸಂಬಂಧ ಅವರ ಮೇಲೆ ಸಶಸ್ತ್ರ ಆಕ್ರಮಣ ಮತ್ತೊಂದು ಸಶಸ್ತ್ರ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಗುಂಡೇಟು ತಿಂದ ಯಾರ್ಲ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ತಲೆ ಮತ್ತು ತೋಳಿಗೆ ಗುಂಡುಬಿದ್ದು ಗಾಯಗೊಂಡಿದ್ದರು, ಸಧ್ಯ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಗುಂಡಿನ ದಾಳಿಯು ”ಜನಾಂಗೀಯ ಅಂಶ” ಒಳಗೊಂಡಿದೆ ಎಂದು ಥಾಂಪ್ಸನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

”ಇದು ಎಷ್ಟು ನಿರಾಶಾದಾಯಕವಾಗಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದರೆ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಈ ಬಗ್ಗೆ ತನಿಖೆ ಮುಂದುವರಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ” ಎಂದು ಥಾಂಪ್ಸನ್ ಹೇಳಿದರು.

ಇದನ್ನೂ ಓದಿ: ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಯಾರ್ಲ್‌ನ ಚಿಕ್ಕಮ್ಮ ಸ್ಪೂನ್‌ಮೋರ್ ಅವರು, ಆತನ ಆರೈಕೆಗಾಗಿ ಹಣವನ್ನು ಸಂಗ್ರಹಿಸಲು GoFundMe ಪುಟವನ್ನು ತೆರೆದಿದ್ದಾರೆ. ಆ ಪುಟದ ಪ್ರಕಾರ, ಯಾರ್ಲ್ ಸಹೋದರರು ಸ್ನೇಹಿತರ ಮನೆಗೆ ಹೋಗಿದ್ದರು. ಅವರನ್ನು ಕರೆತರಲು ಹೋದಾಗ ತಪ್ಪಾದ ವಿಳಾಸಕ್ಕೆ ಹೋಗಿ ಬೆಲ್ ಮಾಡಿದ್ದಾನೆ. ಈ ವೇಳೆ ಮನೆ ಮಾಲಿಕ ಗ್ಲಾಸ್‌ನಲ್ಲಿ ನೋಡಿದ ಮನೆ ಮಾಲಿಕ ಕಪ್ಪು ವರ್ಣೀಯ ಮನೆ ಕಳ್ಳತನಕ್ಕೆ ಬಂದಿದ್ದಾನೆ ಎಂದು ಗುಂಡು ಹಾರಿಸಿದ್ದಾನೆ. ಗುಂಡು ಬಿದ್ದ ತಕ್ಷಣ ಅವನು ನೆಲಕ್ಕೆ ಬಿದ್ದಿದ್ದಾನೆ ಆಗಲೂ ಗುಂಡು ಹಾರಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಯಾರ್ಲ್ ಅವರು ”ಮಿಸೌರಿಯ ಅಗ್ರ ಬಾಸ್ ಕ್ಲಾರಿನೆಟ್ ಪ್ಲೇಯರ್‌ಗಳಲ್ಲಿ ಒಬ್ಬರು, ಮೆಟ್ರೋಪಾಲಿಟನ್‌ನ ಯುವ ಆರ್ಕೆಸ್ಟ್ರಾದಲ್ಲಿ ಅನೇಕ ವಾದ್ಯಗಳನ್ನು ಆತ ನುಡಿಸುತ್ತಿದ್ದ” ಎಂದು ಆ ಪುಟದಲ್ಲಿ ಹೇಳಲಾಗಿದೆ.

ಹಾಲೆ ಬೆರ್ರಿ, ಕೆರ್ರಿ ವಾಷಿಂಗ್ಟನ್ ಮತ್ತು ಜೆನ್ನಿಫರ್ ಹಡ್ಸನ್ ಅವರಂತಹ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ ಮತ್ತು ಯಾರ್ಲ್ ಕುಟುಂಬಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಸ್ಥಳೀಯ ಕಾಲಮಾನದಂತೆ ಆ ಪುಟವು $1.5m (28,70,16,982 ರೂ.) ಸಂಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...