Homeಕರ್ನಾಟಕಜಗದೀಶ್ ಶೆಟ್ಟರ್‌ಗೆ ಐಟಿ ದಾಳಿಯ ಬೆದರಿಕೆ ಹಾಕಿದ ಬಿಜೆಪಿ: ಕಾಂಗ್ರೆಸ್ ಆರೋಪ

ಜಗದೀಶ್ ಶೆಟ್ಟರ್‌ಗೆ ಐಟಿ ದಾಳಿಯ ಬೆದರಿಕೆ ಹಾಕಿದ ಬಿಜೆಪಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಪಕ್ಷದಲ್ಲಿ ಉಳಿಸಿಕೊಳ್ಳಲು ಅವರಿಗೆ ಐಟಿ ದಾಳಿಯ ಬೆದರಿಕೆ ಹಾಕಲಾಗಿತ್ತು ಎಂದು ಕಾಂಗ್ರೆಸ್ ಹೊಸ ಬಾಂಬ್ ಸಿಡಿಸಿದೆ.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಅವರು, ”ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಆಶ್ರಯದಲ್ಲಿ ರಾಜಕೀಯ ಆರಂಭಿಸಿದ ಪ್ರಹ್ಲಾದ್ ಜೋಶಿ ತಮ್ಮ ಅಧಿಕಾರದ ದರ್ಪದಿಂದ ಎರಡು ದಿನಗಳ ಹಿಂದೆ ಜಗದೀಶ್ ಶೆಟ್ಟರ್ ಅವರ ಮನವೊಲಿಕೆ ಪ್ರಯತ್ನದ ವೇಳೆ ಐಟಿ ದಾಳಿಯ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

”ಜಗದೀಶ್ ಶೆಟ್ಟರ್‌ಗೆ ನೀವು ಬಿಜೆಪಿ ತೊರೆದರೆ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಜೋಶಿ ಅವರು ಬೆದರಿಕೆ ಹಾಕಿದ್ದಾರೆ” ಎಂದು ರಮೇಶ್‌ ಬಾಬು ಹೇಳಿದರು.

”ಆದರೆ, ಮೂಲತಃ ಶೆಟ್ಟರ್ ವಕೀಲರಾಗಿದ್ದು, ಅವರು ಜೋಶಿ ಅವರಿಗೆ ‘ನಾನು ವಕೀಲ ನಿಮ್ಮ ಬೆದರಿಕೆಗೆ ಜಗ್ಗುವುದಿಲ್ಲ’ ಎಂದು ಹೇಳಿ ಬಿಜೆಪಿ ಬಿಡುವ ದೃಢ ನಿರ್ಧಾರಕ್ಕೆ ಬಂದರು. ಅವರು ತಮ್ಮ ಸ್ವಾಭಿಮಾನ ಹಾಗೂ ರಾಜಕೀಯ ಇಚ್ಛಾಶಕ್ತಿಗಾಗಿ ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ಸೇರ್ಪಡೆಯಾಗಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ನಿಂದ 4ನೇ ಪಟ್ಟಿ ಬಿಡುಗಡೆ: ಹು-ಧಾ ಸೆಂಟ್ರಲ್‌ನಿಂದ ಶೆಟ್ಟರ್ ಸ್ಪರ್ಧೆ

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ. ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು” ಎಂದು ಹೇಳಿದೆ.

”ರಾಜ್ಯ ಕಂಡಿರುವ ಕೆಲವೇ ಸಜ್ಜನ ರಾಜಕಾರಣಿಗಳಲ್ಲಿ ಜಗದೀಶ್ ಶೆಟ್ಟರ್ ಒಬ್ಬರು. ಬಹಳ ಪ್ರಾಮಾಣಿಕವಾಗಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ” ಎಂದು ರಮೇಶ್ ಬಾಬು ಹೇಳಿದರು.

ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ರೈಡ್ ಪ್ಲ್ಯಾನ್: ಡಿಕೆಶಿ

ಈ ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ”ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸುತ್ತಿಲ್ಲ. ಜೊತೆಗೆ ನಮ್ಮ ನಾಯಕರ ಜೊತೆಗಿರುವ ಉದ್ದಿಮೆದಾರರನ್ನೂ ಸಹ ಗುರಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

”ಕಾಂಗ್ರೆಸ್ ನಾಯಕರ ಮನೆಗೆ ಬಂದು ಹೋಗುವ ‘ಬ್ಯುಸಿನೆಸ್‌ ಮನ್‌’ಗಳಿಗೆ ಬೆದರಿಕೆ ಹಾಕಲಾಗುತ್ತಿದೆ. ಐಟಿ ಅಧಿಕಾರಿಗಳ ದಾಳಿ ಕುರಿತು ಅವರೆಲ್ಲ ಭಯಬಿದ್ದಿದ್ದಾರೆ. ಆ ಕಾರಣದಿಂದ ಅವರು ನಮ್ಮ ಕರೆಗಳನ್ನೂ ಸ್ವೀಕರಿಸುತ್ತಿಲ್ಲ” ಎಂದು ಹೇಳಿಕೊಂಡಿದ್ದಾರೆ.

”ಐಟಿ ಅಧಿಕಾರಿಗಳು ನಮ್ಮ ಮೇಲಷ್ಟೆ ದಾಳಿ ಮಾಡುತ್ತಿದ್ದಾರೆ ಎಂದರೆ ಬಿಜೆಪಿಯಲ್ಲಿ ಇರುವವರೆಲ್ಲ ಸತ್ಯ ಹರಿಶ್ಚಂದ್ರರೇ? ಇಂತರ ರಾಜಕೀಯ ಪ್ರೇರಿತ ದಾಳಿಗಳನ್ನು ನಾವು ಎದುರಿಸುತ್ತೇವೆ” ಎಂದು  ಹೇಳಿದರು.

ಇದೇ ವೇಳೆ ಶೆಟ್ಟರ್, ಸವದಿ ಕುರಿತು ಮಾತನಾಡಿದ ಅವರು, ”ಈ ಮೊದಲು ನಮ್ಮ ಗುರಿ 140 ಸ್ಥಾನಗಳಾಗಿತ್ತು. ಆದರೆ, ಸವದಿ ಮತ್ತು ಶೆಟ್ಟರ್ ಆಗಮನದಿಂದ ನಾವು 150 ಸ್ಥಾನಗಳನ್ನು  ಗೆಲ್ಲಲಿದ್ದೇವೆ. ಲಿಂಗಾಯತ ಮತ್ತು ವಿರಶೈವ ಮತಗಳು ಈ ಚುನಾವಣೆಯಲ್ಲಿ ನಮಗೆ ಬರುತ್ತವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...