Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪಪ್ರಕರಣದ 14 ಜನ ಅಪರಾಧಿಗಳನ್ನು ಮತ್ತು ಕೊಲೆ ಆರೋಪದ 11 ಜನರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಲು ಅನುಮತಿ ನೀಡಿದ ಕಾರಣವನ್ನು ವಿವರಿಸುವಂತೆ ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸ್ವತಃ ಬಾನೋ ಅವರೇ ಸಲ್ಲಿಸಿದ ಅರ್ಜಿಗಳನ್ನು ಆಲಿಸುವಾಗ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿತು.

”ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಹಲವಾರು ಜನರನ್ನು ಕೊಲ್ಲಲಾಯಿತು” ಎಂಬುದನ್ನು ಪೀಠವು ಗಮನಿಸಿತು. ನೀವು ಈ ಪ್ರಕರಣವನ್ನು ಸಾಮಾನ್ಯವಾದ ಸೆಕ್ಷನ್ 302 [ಕೊಲೆ] ಪ್ರಕರಣದಂತೆ ನೋಡಬೇಡಿ. ಸೇಬನ್ನು ಕಿತ್ತಳೆ ಹಣ್ಣುಗಳೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಯೊಂದಿಗೆ ಹೋಲಿಸಲಾಗುವುದಿಲ್ಲ. ಅಪರಾಧಗಳು ಸಾಮಾನ್ಯವಾಗಿ ಸಮಾಜ ಮತ್ತು ಸಮುದಾಯದ ವಿರುದ್ಧ ನಡೆಯುತ್ತವೆ. ಅಸಮಾನರನ್ನು ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಹೇಳಿದೆ.

”ಶೀಘ್ರ ಬಿಡುಗಡೆಗಾಗಿ ಅಪರಾಧಿಗಳ ಅರ್ಜಿಗಳನ್ನು ನಿರ್ಧರಿಸುವಾಗ ಪ್ರಕರಣದ ಹಿನ್ನೆಲೆಯನ್ನು ಮನಸ್ಸಿನಿಂದ ನೋಡಬೇಕು. ಇಂದು ಬಿಲ್ಕಿಸ್ ಆದರೆ ನಾಳೆ ಅದು ಯಾರಿಗಾದರೂ ಆಗಬಹುದು.. ಸಂತ್ರಸ್ತರಿಗೆ ನೀವು ಏನು ಪರಿಹಾರ ವದಿಗಿಸಿದ್ದೀರಿ ಎನ್ನುವುದನ್ನು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ನ್ಯಾಯಾಲಯವು ಗುಜರಾತ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಕೇಂದ್ರ ಮತ್ತು ಗುಜರಾತ್ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಮಾರ್ಚ್ 27 ರಿಂದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎಂದು ಪಿಟಿಐ ವರದಿ ಮಾಡಿದೆ. ಅಂದು, ಅಪರಾಧಿಗಳಿಗೆ ವಿನಾಯತಿ ನೀಡುವ ಕುರಿತು ಮೂಲ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ಹೇಳಿತ್ತು.

ವಿಭಾಗೀಯ ಪೀಠವು ಆ ಆದೇಶವನ್ನು ಅನುಸರಿಸಿ, ಸರ್ಕಾರದ ನಿಲುವು ನ್ಯಾಯಾಲಯದ ನಿಂದನೆಯಾಗಿದೆ ಎಂದು ಟೀಕಿಸಿತು. ಏಕೆಂದರೆ ಸರ್ಕಾರ ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಂಡಿದೆ. ಮರುಪರಿಶೀಲನೆ ಮಾಡಿರುವ ಫೈಲ್‌ಗಳನ್ನು ಇನ್ನೂ ಸಲ್ಲಿಸುತ್ತಿಲ್ಲ ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

”ಇಂದು ಫೈಲ್‌ಗಳನ್ನು ನಮಗೆ ತೋರಿಸುವುದರಲ್ಲಿ ಏನು ಸಮಸ್ಯೆ? ನೀವು ಯಾಕೆ ದೂರ ಸರಿಯುತ್ತಿದ್ದೀರಾ? ನೀವು ವಿಮರ್ಶೆಯನ್ನು ಸಲ್ಲಿಸಿಲ್ಲ; ನಾವು ನಿಮ್ಮನ್ನು ಎಂದಿಗೂ ನಿಲ್ಲಿಸಲ್ಲ” ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.

ಗುಜರಾತ್ ಸರ್ಕಾರದ ನಿಲುವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದ ಮಾತ್ರಕ್ಕೆ ಅದನ್ನೇ ಮಾಡಬೇಕು ಎಂದಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2 ರಂದು ನಡೆಯಲಿದೆ.

ಏನಿದು ಪ್ರಕರಣ?

ಫೆಬ್ರವರಿ 27, 2002ರಂದು ಗುಜರಾತ್‌ನ ತುಂಬಾ ಕೋಮು ಗಲಭೆಗಳು ಭುಗಿಲೆದ್ದಿದ್ದವು. ಗಲಭೆ ಸಂಸ್ಕೃತಿಯ ಅವಿಭಾಜ್ಯ ಎಂದಾಗಿರುವ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆಗಳು ಪೊಲೀಸರ ಕಣ್ಗಾವಲಿನಲ್ಲಿಯೇ ನಡೆದವು. ದಿನ ಬೆಳಗಾಗಿ ಮುಖನೋಡುತ್ತಿದ್ದ ನೆರೆಹೊರೆಯವರು ಧರ್ಮದ ಅಮಲಿನಲ್ಲಿ ರಾಕ್ಷಸರಿಗಿಂತ ವಿಪರೀತವಾಗಿ ವರ್ತಿಸಿದರು.

ಗಲಭೆಯಿಂದ ರಕ್ಷಿಸಿಕೊಳ್ಳಲು ಕುಟುಂಬ ಸಮೇತ ಟ್ರಕ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಗಲಭೆಕೋರರು ಬಿಲ್ಕಿಸ್ ಬಾನೋ ಕೈಯಿಂದ ಅವಳ 3 ವರ್ಷದ ಮಗುವನ್ನು ಎಳೆದುಕೊಂಡು ನೆಲಕ್ಕೆ ಚಚ್ಚಿ ಕೊಂದರು. 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಮೇಲೆ, ಅವಳನ್ನು ದಿನಲೂ ನೋಡುತ್ತಿದ್ದ ಗಂಡಸರು ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರವೆಸಗಿದರು. ಗಾಡಿಯಲ್ಲಿದ್ದ ಬಿಲ್ಕಿಸ್ ಕುಟುಂಬದ 7 ಸದಸ್ಯರನ್ನು ಕೊಲೆ ಮಾಡಿದರು. ಬಿಲ್ಕಿಸ್ ಕೂಡ ಸತ್ತಿರಬಹುದೆಂದುಕೊಂಡ ಕೊಲೆಗಡುಕರು ಹೊರಟುಹೋದರು. ಆ ಕರಾಳ ಹಿಂಸೆಯ ಮಧ್ಯೆ ಬದುಕುಳಿದ ಬಿಲ್ಕಿಸ್ ತನ್ನ ಗಾಯಗಳನ್ನು ದಿನವೂ ಕೆದಕುವ ಭಯಾನಕ ನೆನಪುಗಳ ವಾತಾವರಣದಲ್ಲಿ ನ್ಯಾಯಕ್ಕಾಗಿ ಮುಳ್ಳಿನ ಹಾದಿ ತುಳಿದಳು.

ಸಂಪೂರ್ಣವಾಗಿ ಸರ್ಕಾರದ ಕೈಗೊಂಬೆಯಾಗಿದ್ದ ಪೊಲೀಸರು ಅವಳ ಕಂಪ್ಲೇಂಟನ್ನು ಕಡೆಗಣಿಸಿದರು. ಅನಿವಾರ್ಯವಾಗಿ ಅವಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ನಂತರ ಸುಪ್ರೀಂ ಕೋರ್ಟ್ 2003ರಲ್ಲಿ ಸಿಬಿಐಗೆ ವಿಚಾರಣೆಯನ್ನು ಒಪ್ಪಿಸಿತು. ಆದರೆ ನಿರಂತರವಾಗಿ ಭಯದ ನೆರಳಲ್ಲಿ ಬದುಕುತ್ತಿದ್ದ ಬಿಲ್ಕಿಸ್‌ಳ ಮನವಿಯ ಮೇರೆಗೆ ಕೇಸನ್ನು ನೆರೆ ರಾಜ್ಯವಾದ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ವಿಚಾರಣೆ ನಂತರ 20 ಜನರ ಪೈಕಿ 13 ಜನರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ ಕೋರ್ಟ್ 11 ಜನರಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತು. 2017ರಲ್ಲಿ ಬಾಂಬೆ ಹೈಕೋರ್ಟ್ ಈ ತೀರ್ಮಾನವನ್ನು ಎತ್ತಿ ಹಿಡಿಯಿತು. ಅತ್ಯಾಚಾರಿ, ಕೊಲೆಗಡುಕರು ಕೊನೆಗೂ ಜೈಲು ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...