Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪಪ್ರಕರಣದ 14 ಜನ ಅಪರಾಧಿಗಳನ್ನು ಮತ್ತು ಕೊಲೆ ಆರೋಪದ 11 ಜನರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಲು ಅನುಮತಿ ನೀಡಿದ ಕಾರಣವನ್ನು ವಿವರಿಸುವಂತೆ ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸ್ವತಃ ಬಾನೋ ಅವರೇ ಸಲ್ಲಿಸಿದ ಅರ್ಜಿಗಳನ್ನು ಆಲಿಸುವಾಗ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿತು.

”ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಹಲವಾರು ಜನರನ್ನು ಕೊಲ್ಲಲಾಯಿತು” ಎಂಬುದನ್ನು ಪೀಠವು ಗಮನಿಸಿತು. ನೀವು ಈ ಪ್ರಕರಣವನ್ನು ಸಾಮಾನ್ಯವಾದ ಸೆಕ್ಷನ್ 302 [ಕೊಲೆ] ಪ್ರಕರಣದಂತೆ ನೋಡಬೇಡಿ. ಸೇಬನ್ನು ಕಿತ್ತಳೆ ಹಣ್ಣುಗಳೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಯೊಂದಿಗೆ ಹೋಲಿಸಲಾಗುವುದಿಲ್ಲ. ಅಪರಾಧಗಳು ಸಾಮಾನ್ಯವಾಗಿ ಸಮಾಜ ಮತ್ತು ಸಮುದಾಯದ ವಿರುದ್ಧ ನಡೆಯುತ್ತವೆ. ಅಸಮಾನರನ್ನು ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಹೇಳಿದೆ.

”ಶೀಘ್ರ ಬಿಡುಗಡೆಗಾಗಿ ಅಪರಾಧಿಗಳ ಅರ್ಜಿಗಳನ್ನು ನಿರ್ಧರಿಸುವಾಗ ಪ್ರಕರಣದ ಹಿನ್ನೆಲೆಯನ್ನು ಮನಸ್ಸಿನಿಂದ ನೋಡಬೇಕು. ಇಂದು ಬಿಲ್ಕಿಸ್ ಆದರೆ ನಾಳೆ ಅದು ಯಾರಿಗಾದರೂ ಆಗಬಹುದು.. ಸಂತ್ರಸ್ತರಿಗೆ ನೀವು ಏನು ಪರಿಹಾರ ವದಿಗಿಸಿದ್ದೀರಿ ಎನ್ನುವುದನ್ನು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ನ್ಯಾಯಾಲಯವು ಗುಜರಾತ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಕೇಂದ್ರ ಮತ್ತು ಗುಜರಾತ್ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಮಾರ್ಚ್ 27 ರಿಂದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎಂದು ಪಿಟಿಐ ವರದಿ ಮಾಡಿದೆ. ಅಂದು, ಅಪರಾಧಿಗಳಿಗೆ ವಿನಾಯತಿ ನೀಡುವ ಕುರಿತು ಮೂಲ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ಹೇಳಿತ್ತು.

ವಿಭಾಗೀಯ ಪೀಠವು ಆ ಆದೇಶವನ್ನು ಅನುಸರಿಸಿ, ಸರ್ಕಾರದ ನಿಲುವು ನ್ಯಾಯಾಲಯದ ನಿಂದನೆಯಾಗಿದೆ ಎಂದು ಟೀಕಿಸಿತು. ಏಕೆಂದರೆ ಸರ್ಕಾರ ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಂಡಿದೆ. ಮರುಪರಿಶೀಲನೆ ಮಾಡಿರುವ ಫೈಲ್‌ಗಳನ್ನು ಇನ್ನೂ ಸಲ್ಲಿಸುತ್ತಿಲ್ಲ ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

”ಇಂದು ಫೈಲ್‌ಗಳನ್ನು ನಮಗೆ ತೋರಿಸುವುದರಲ್ಲಿ ಏನು ಸಮಸ್ಯೆ? ನೀವು ಯಾಕೆ ದೂರ ಸರಿಯುತ್ತಿದ್ದೀರಾ? ನೀವು ವಿಮರ್ಶೆಯನ್ನು ಸಲ್ಲಿಸಿಲ್ಲ; ನಾವು ನಿಮ್ಮನ್ನು ಎಂದಿಗೂ ನಿಲ್ಲಿಸಲ್ಲ” ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.

ಗುಜರಾತ್ ಸರ್ಕಾರದ ನಿಲುವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದ ಮಾತ್ರಕ್ಕೆ ಅದನ್ನೇ ಮಾಡಬೇಕು ಎಂದಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2 ರಂದು ನಡೆಯಲಿದೆ.

ಏನಿದು ಪ್ರಕರಣ?

ಫೆಬ್ರವರಿ 27, 2002ರಂದು ಗುಜರಾತ್‌ನ ತುಂಬಾ ಕೋಮು ಗಲಭೆಗಳು ಭುಗಿಲೆದ್ದಿದ್ದವು. ಗಲಭೆ ಸಂಸ್ಕೃತಿಯ ಅವಿಭಾಜ್ಯ ಎಂದಾಗಿರುವ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆಗಳು ಪೊಲೀಸರ ಕಣ್ಗಾವಲಿನಲ್ಲಿಯೇ ನಡೆದವು. ದಿನ ಬೆಳಗಾಗಿ ಮುಖನೋಡುತ್ತಿದ್ದ ನೆರೆಹೊರೆಯವರು ಧರ್ಮದ ಅಮಲಿನಲ್ಲಿ ರಾಕ್ಷಸರಿಗಿಂತ ವಿಪರೀತವಾಗಿ ವರ್ತಿಸಿದರು.

ಗಲಭೆಯಿಂದ ರಕ್ಷಿಸಿಕೊಳ್ಳಲು ಕುಟುಂಬ ಸಮೇತ ಟ್ರಕ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಗಲಭೆಕೋರರು ಬಿಲ್ಕಿಸ್ ಬಾನೋ ಕೈಯಿಂದ ಅವಳ 3 ವರ್ಷದ ಮಗುವನ್ನು ಎಳೆದುಕೊಂಡು ನೆಲಕ್ಕೆ ಚಚ್ಚಿ ಕೊಂದರು. 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಮೇಲೆ, ಅವಳನ್ನು ದಿನಲೂ ನೋಡುತ್ತಿದ್ದ ಗಂಡಸರು ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರವೆಸಗಿದರು. ಗಾಡಿಯಲ್ಲಿದ್ದ ಬಿಲ್ಕಿಸ್ ಕುಟುಂಬದ 7 ಸದಸ್ಯರನ್ನು ಕೊಲೆ ಮಾಡಿದರು. ಬಿಲ್ಕಿಸ್ ಕೂಡ ಸತ್ತಿರಬಹುದೆಂದುಕೊಂಡ ಕೊಲೆಗಡುಕರು ಹೊರಟುಹೋದರು. ಆ ಕರಾಳ ಹಿಂಸೆಯ ಮಧ್ಯೆ ಬದುಕುಳಿದ ಬಿಲ್ಕಿಸ್ ತನ್ನ ಗಾಯಗಳನ್ನು ದಿನವೂ ಕೆದಕುವ ಭಯಾನಕ ನೆನಪುಗಳ ವಾತಾವರಣದಲ್ಲಿ ನ್ಯಾಯಕ್ಕಾಗಿ ಮುಳ್ಳಿನ ಹಾದಿ ತುಳಿದಳು.

ಸಂಪೂರ್ಣವಾಗಿ ಸರ್ಕಾರದ ಕೈಗೊಂಬೆಯಾಗಿದ್ದ ಪೊಲೀಸರು ಅವಳ ಕಂಪ್ಲೇಂಟನ್ನು ಕಡೆಗಣಿಸಿದರು. ಅನಿವಾರ್ಯವಾಗಿ ಅವಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ನಂತರ ಸುಪ್ರೀಂ ಕೋರ್ಟ್ 2003ರಲ್ಲಿ ಸಿಬಿಐಗೆ ವಿಚಾರಣೆಯನ್ನು ಒಪ್ಪಿಸಿತು. ಆದರೆ ನಿರಂತರವಾಗಿ ಭಯದ ನೆರಳಲ್ಲಿ ಬದುಕುತ್ತಿದ್ದ ಬಿಲ್ಕಿಸ್‌ಳ ಮನವಿಯ ಮೇರೆಗೆ ಕೇಸನ್ನು ನೆರೆ ರಾಜ್ಯವಾದ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ವಿಚಾರಣೆ ನಂತರ 20 ಜನರ ಪೈಕಿ 13 ಜನರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ ಕೋರ್ಟ್ 11 ಜನರಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತು. 2017ರಲ್ಲಿ ಬಾಂಬೆ ಹೈಕೋರ್ಟ್ ಈ ತೀರ್ಮಾನವನ್ನು ಎತ್ತಿ ಹಿಡಿಯಿತು. ಅತ್ಯಾಚಾರಿ, ಕೊಲೆಗಡುಕರು ಕೊನೆಗೂ ಜೈಲು ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...