Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪಪ್ರಕರಣದ 14 ಜನ ಅಪರಾಧಿಗಳನ್ನು ಮತ್ತು ಕೊಲೆ ಆರೋಪದ 11 ಜನರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಲು ಅನುಮತಿ ನೀಡಿದ ಕಾರಣವನ್ನು ವಿವರಿಸುವಂತೆ ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸ್ವತಃ ಬಾನೋ ಅವರೇ ಸಲ್ಲಿಸಿದ ಅರ್ಜಿಗಳನ್ನು ಆಲಿಸುವಾಗ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿತು.

”ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಮತ್ತು ಹಲವಾರು ಜನರನ್ನು ಕೊಲ್ಲಲಾಯಿತು” ಎಂಬುದನ್ನು ಪೀಠವು ಗಮನಿಸಿತು. ನೀವು ಈ ಪ್ರಕರಣವನ್ನು ಸಾಮಾನ್ಯವಾದ ಸೆಕ್ಷನ್ 302 [ಕೊಲೆ] ಪ್ರಕರಣದಂತೆ ನೋಡಬೇಡಿ. ಸೇಬನ್ನು ಕಿತ್ತಳೆ ಹಣ್ಣುಗಳೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಯೊಂದಿಗೆ ಹೋಲಿಸಲಾಗುವುದಿಲ್ಲ. ಅಪರಾಧಗಳು ಸಾಮಾನ್ಯವಾಗಿ ಸಮಾಜ ಮತ್ತು ಸಮುದಾಯದ ವಿರುದ್ಧ ನಡೆಯುತ್ತವೆ. ಅಸಮಾನರನ್ನು ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಹೇಳಿದೆ.

”ಶೀಘ್ರ ಬಿಡುಗಡೆಗಾಗಿ ಅಪರಾಧಿಗಳ ಅರ್ಜಿಗಳನ್ನು ನಿರ್ಧರಿಸುವಾಗ ಪ್ರಕರಣದ ಹಿನ್ನೆಲೆಯನ್ನು ಮನಸ್ಸಿನಿಂದ ನೋಡಬೇಕು. ಇಂದು ಬಿಲ್ಕಿಸ್ ಆದರೆ ನಾಳೆ ಅದು ಯಾರಿಗಾದರೂ ಆಗಬಹುದು.. ಸಂತ್ರಸ್ತರಿಗೆ ನೀವು ಏನು ಪರಿಹಾರ ವದಿಗಿಸಿದ್ದೀರಿ ಎನ್ನುವುದನ್ನು ತೋರಿಸದಿದ್ದರೆ, ನಾವು ನಮ್ಮದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ನ್ಯಾಯಾಲಯವು ಗುಜರಾತ್ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಕೇಂದ್ರ ಮತ್ತು ಗುಜರಾತ್ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಮಾರ್ಚ್ 27 ರಿಂದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಎಂದು ಪಿಟಿಐ ವರದಿ ಮಾಡಿದೆ. ಅಂದು, ಅಪರಾಧಿಗಳಿಗೆ ವಿನಾಯತಿ ನೀಡುವ ಕುರಿತು ಮೂಲ ಕಡತಗಳೊಂದಿಗೆ ಸಿದ್ಧವಾಗಿರುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ಹೇಳಿತ್ತು.

ವಿಭಾಗೀಯ ಪೀಠವು ಆ ಆದೇಶವನ್ನು ಅನುಸರಿಸಿ, ಸರ್ಕಾರದ ನಿಲುವು ನ್ಯಾಯಾಲಯದ ನಿಂದನೆಯಾಗಿದೆ ಎಂದು ಟೀಕಿಸಿತು. ಏಕೆಂದರೆ ಸರ್ಕಾರ ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಂಡಿದೆ. ಮರುಪರಿಶೀಲನೆ ಮಾಡಿರುವ ಫೈಲ್‌ಗಳನ್ನು ಇನ್ನೂ ಸಲ್ಲಿಸುತ್ತಿಲ್ಲ ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

”ಇಂದು ಫೈಲ್‌ಗಳನ್ನು ನಮಗೆ ತೋರಿಸುವುದರಲ್ಲಿ ಏನು ಸಮಸ್ಯೆ? ನೀವು ಯಾಕೆ ದೂರ ಸರಿಯುತ್ತಿದ್ದೀರಾ? ನೀವು ವಿಮರ್ಶೆಯನ್ನು ಸಲ್ಲಿಸಿಲ್ಲ; ನಾವು ನಿಮ್ಮನ್ನು ಎಂದಿಗೂ ನಿಲ್ಲಿಸಲ್ಲ” ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದೆ.

ಗುಜರಾತ್ ಸರ್ಕಾರದ ನಿಲುವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದ ಮಾತ್ರಕ್ಕೆ ಅದನ್ನೇ ಮಾಡಬೇಕು ಎಂದಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2 ರಂದು ನಡೆಯಲಿದೆ.

ಏನಿದು ಪ್ರಕರಣ?

ಫೆಬ್ರವರಿ 27, 2002ರಂದು ಗುಜರಾತ್‌ನ ತುಂಬಾ ಕೋಮು ಗಲಭೆಗಳು ಭುಗಿಲೆದ್ದಿದ್ದವು. ಗಲಭೆ ಸಂಸ್ಕೃತಿಯ ಅವಿಭಾಜ್ಯ ಎಂದಾಗಿರುವ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆಗಳು ಪೊಲೀಸರ ಕಣ್ಗಾವಲಿನಲ್ಲಿಯೇ ನಡೆದವು. ದಿನ ಬೆಳಗಾಗಿ ಮುಖನೋಡುತ್ತಿದ್ದ ನೆರೆಹೊರೆಯವರು ಧರ್ಮದ ಅಮಲಿನಲ್ಲಿ ರಾಕ್ಷಸರಿಗಿಂತ ವಿಪರೀತವಾಗಿ ವರ್ತಿಸಿದರು.

ಗಲಭೆಯಿಂದ ರಕ್ಷಿಸಿಕೊಳ್ಳಲು ಕುಟುಂಬ ಸಮೇತ ಟ್ರಕ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಗಲಭೆಕೋರರು ಬಿಲ್ಕಿಸ್ ಬಾನೋ ಕೈಯಿಂದ ಅವಳ 3 ವರ್ಷದ ಮಗುವನ್ನು ಎಳೆದುಕೊಂಡು ನೆಲಕ್ಕೆ ಚಚ್ಚಿ ಕೊಂದರು. 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಮೇಲೆ, ಅವಳನ್ನು ದಿನಲೂ ನೋಡುತ್ತಿದ್ದ ಗಂಡಸರು ಒಬ್ಬರಾದ ಮೇಲೆ ಒಬ್ಬರಂತೆ ಅತ್ಯಾಚಾರವೆಸಗಿದರು. ಗಾಡಿಯಲ್ಲಿದ್ದ ಬಿಲ್ಕಿಸ್ ಕುಟುಂಬದ 7 ಸದಸ್ಯರನ್ನು ಕೊಲೆ ಮಾಡಿದರು. ಬಿಲ್ಕಿಸ್ ಕೂಡ ಸತ್ತಿರಬಹುದೆಂದುಕೊಂಡ ಕೊಲೆಗಡುಕರು ಹೊರಟುಹೋದರು. ಆ ಕರಾಳ ಹಿಂಸೆಯ ಮಧ್ಯೆ ಬದುಕುಳಿದ ಬಿಲ್ಕಿಸ್ ತನ್ನ ಗಾಯಗಳನ್ನು ದಿನವೂ ಕೆದಕುವ ಭಯಾನಕ ನೆನಪುಗಳ ವಾತಾವರಣದಲ್ಲಿ ನ್ಯಾಯಕ್ಕಾಗಿ ಮುಳ್ಳಿನ ಹಾದಿ ತುಳಿದಳು.

ಸಂಪೂರ್ಣವಾಗಿ ಸರ್ಕಾರದ ಕೈಗೊಂಬೆಯಾಗಿದ್ದ ಪೊಲೀಸರು ಅವಳ ಕಂಪ್ಲೇಂಟನ್ನು ಕಡೆಗಣಿಸಿದರು. ಅನಿವಾರ್ಯವಾಗಿ ಅವಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ನಂತರ ಸುಪ್ರೀಂ ಕೋರ್ಟ್ 2003ರಲ್ಲಿ ಸಿಬಿಐಗೆ ವಿಚಾರಣೆಯನ್ನು ಒಪ್ಪಿಸಿತು. ಆದರೆ ನಿರಂತರವಾಗಿ ಭಯದ ನೆರಳಲ್ಲಿ ಬದುಕುತ್ತಿದ್ದ ಬಿಲ್ಕಿಸ್‌ಳ ಮನವಿಯ ಮೇರೆಗೆ ಕೇಸನ್ನು ನೆರೆ ರಾಜ್ಯವಾದ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ವಿಚಾರಣೆ ನಂತರ 20 ಜನರ ಪೈಕಿ 13 ಜನರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ ಕೋರ್ಟ್ 11 ಜನರಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತು. 2017ರಲ್ಲಿ ಬಾಂಬೆ ಹೈಕೋರ್ಟ್ ಈ ತೀರ್ಮಾನವನ್ನು ಎತ್ತಿ ಹಿಡಿಯಿತು. ಅತ್ಯಾಚಾರಿ, ಕೊಲೆಗಡುಕರು ಕೊನೆಗೂ ಜೈಲು ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...