Homeಕರ್ನಾಟಕಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

ಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

- Advertisement -
- Advertisement -

ಸುಡಾನ್‌ನಲ್ಲಿ ನಡೆಯುತ್ತಿರುವ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ಸಂಘ‍ರ್ಷದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವ ಜೈಶಂಕರ್‌ ಪ್ರತಿ ಟ್ವೀಟ್ ಮಾಡಿದ್ದು, ಟ್ವಿಟರ್ ವಾರ್‌ಗೆ ಕಾರಣವಾಗಿದೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದರು. ಇದಕ್ಕೆ ಟ್ವಿಟರ್‌ನಲ್ಲೇ ಪ್ರತಿಕ್ರಿಯಿಸಿರುವ ಜೈಶಂಕರ್‌, ‘ಇದನ್ನು ರಾಜಕೀಯಗೊಳಿಸಬೇಡಿ’ ಎಂದು ತಿರುಗೇಟು ನೀಡಿದ್ದರು. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್‌ ಏಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದಿದ್ದರು.

ಅದಕ್ಕೆ ಜೈಶಂಕರ್ ಅವರು, ”ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ಆಶ್ಚರ್ಯವಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿವೆ. ದಯವಿಟ್ಟು ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಜೈಶಂಕರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ”ನೀವು ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವುದರಿಂದ ನಾನು ನಿಮಗೆ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ಆದರೆ ನೀವು ಆಶ್ಚರ್ಯಗೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ಸಹಾಯ ಮಾಡುವ ವ್ಯಕ್ತಿಯ ಸಂಪರ್ಕ ಮಾಡಿಕೊಡಿ” ಎಂದು ತಿರುಗೇಟು ನೀಡಿದ್ದಾರೆ.

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...