Homeಕರ್ನಾಟಕಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

ಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿಯಲು ಸ್ಟಾರ್ ಪ್ರಚಾರಕರು ಸಿದ್ಧರಾಗಿದ್ದಾರೆ. ರಾಜ್ಯದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಗಳ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿವೆ. ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 40 ನಾಯಕರನ್ನೊಳಗೊಂಡ ಪಟ್ಟಿ ಬಿಡುಗಡೆ ಮಾಡಿದ್ದರೆ, ಜೆಡಿಎಸ್‌ 27 ನಾಯಕರ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರಲ್ಲಿ ಸೋನಿಯಾ, ರಾಹುಲ್, ಖರ್ಗೆ, ಶೆಟ್ಟರ್‌, ರಮ್ಯಾ..

ಕರ್ನಾಟಕ ವಿಧಾನಸಭಾ ಚುನಾವಣೆಗೆ 40 ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್‌ ಬುಧವಾರ ಬಿಡುಗಡೆ ಮಾಡಿದೆ.

ಇತ್ತೀಚೆಗೆ ಬಿಜೆಪಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹಿರಿಯ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸ್ಥಾನ ಸಿಕ್ಕಿದೆ. ಕೆಪಿಸಿಸಿಯ ಐವರು ಕಾರ್ಯಾಧ್ಯಕ್ಷರಲ್ಲಿ ರಾಮಲಿಂಗಾ ರೆಡ್ಡಿ ಹಾಗೂ ಸತೀಶ ಜಾರಕಿಹೊಳಿ ಹೆಸರು ಮಾತ್ರ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇನ್ನು ತೇರದಾಳ ಕ್ಷೇತ್ರದ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದ ಉಮಾಶ್ರೀ ಹಾಗೂ ಮಾಗಡಿ ಅಥವಾ ಹರಿಹರ ಕ್ಷೇತ್ರದ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಎಚ್‌.ಎಂ. ರೇವಣ್ಣ ಅವರಿಗೆ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ. ನಟಿ ರಮ್ಯಾ ಹಾಗೂ ಹಾಸ್ಯನಟ ಸಾಧುಕೋಕಿಲಾ ಸಹ ಪಕ್ಷದ ತಾರಾ ಪ್ರಚಾರಕರಾಗಿದ್ದಾರೆ. ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌, ಮೂವರು ಮುಖ್ಯಮಂತ್ರಿಗಳಾದ ಅಶೋಕ್‌ ಗೆಹಲೋಟ್, ಭೂಪೇಶ್‌ ಬಘೇಲ್‌, ಸುಖ್ವಿಂದರ್‌ ಸಿಂಗ್‌ ಸುಖು ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್‌, ಜೈರಾಮ್‌ ರಮೇಶ್‌, ರಣದೀಪ್‌ ಸಿಂಗ್ ಸುರ್ಜೆವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ತಾರಾ ಪ್ರಚಾರಕರಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ರಾಜ್ಯ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್‌, ಜಿ.ಪರಮೇಶ್ವರ, ಕೆ.ಎಚ್‌.ಮುನಿಯಪ್ಪ, ಎಂ.ಬಿ.‍ಪಾಟೀಲ, ಎಂ. ವೀರಪ್ಪ ಮೊಯಿಲಿ, ಶಾಸಕ ಜಮೀರ್ ಅಹ್ಮದ್‌ ಖಾನ್‌, ಸಂಸದರಾದ ಡಿ.ಕೆ. ಸುರೇಶ್‌, ಜಿ.ಸಿ.ಚಂದ್ರಶೇಖರ್‌, ಸಯ್ಯದ್‌ ನಾಸಿರ್‌ ಹುಸೇನ್‌, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌, ಶಾಸಕಿ ರೂಪಾ ಶಶಿಧರ್‌ ಅವರಿಗೆ ಸ್ಥಾನ ಸಿಕ್ಕಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಪ್ರಥ್ವಿರಾಜ್‌ ಚವಾಣ್‌, ಅಶೋಕ್‌ ಚವಾಣ್ ಹಾಗೂ ತೆಲಂಗಾಣ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡರಾದ ಶಶಿ ತರೂರ್, ಪಿ.ಚಿದಂಬರಂ, ರಮೇಶ್‌ ಚೆನ್ನಿತಾಲ, ರಾಜ್‌ ಬಬ್ಬರ್‌ ಹಾಗೂ ಯುವ ನಾಯಕರಾದ ಕನ್ನಯ್ಯ ಕುಮಾರ್‌, ಇಮ್ರಾನ್‌ ಪ್ರತಾಪ್‌ಗರಿ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

20 ದಿನಗಳಲ್ಲಿ 20 ಕಡೆ ರಾಹುಲ್‌ ರ‍್ಯಾಲಿ

ಮುಂದಿನ 20 ದಿನಗಳಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು 20 ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಮುಂದಿನ 3 ವಾರಗಳಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಹಲವು ಪ್ರಚಾರ ಸಭೆ, ರೋಡ್‌ ಶೋಗಳಲ್ಲಿ ಭಾಗಿಯಾಗಲಿದ್ದಾರೆ. ಮೇ ಮೊದಲ ವಾರದಲ್ಲಿ ಸೋನಿಯಾ ಗಾಂಧಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಸ್ಟಾರ್ ಪ್ರಚಾರಕರಲ್ಲಿ ಮೋದಿ, ಶಾ, ಯೋಗಿಯದ್ದೇ ಸದ್ದು

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿ ಒಟ್ಟು 40 ಮಂದಿಯ ತಾರಾ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಆದರೆ, ಉಪಚುನಾವಣೆಗಳಲ್ಲಿ ತಾರಾ ಪ್ರಚಾರಕರಾಗಿ ಗಮನಸೆಳೆದಿದ್ದ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಈ ಬಾರಿ ಕೈಬಿಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್‌, ಪ್ರಲ್ಹಾದ ಜೋಶಿ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯಾ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಭಗವಂತ್‌ ಖೂಬಾ ಸ್ಟಾರ್ ಪ್ರಚಾರಕರಾಗಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ,  ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್‌ ಕುಮಾರ್‌ ಕಟೀಲ್, ಡಿ.ವಿ. ಸದಾನಂದಗೌಡ, ಕೆ.ಎಸ್‌. ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌. ಅಶೋಕ, ಕೆ. ಅಣ್ಣಾಮಲೈ, ಅರುಣ್ ಸಿಂಗ್‌, ಡಿ.ಕೆ. ಅರುಣಾ, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಬಿ. ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ ಯತ್ನಾಳ್, ಡಾ. ಉಮೇಶ್‌ ಜಾಧವ್‌, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್‌, ಜಗ್ಗೇಶ್, ಶೃತಿ, ತಾರಾ ಅನೂರಾಧ ತಾರಾ ಪ್ರಚಾರಕರ ಪಟ್ಟಿಯಲ್ಲಿ ಇದ್ದಾರೆ.

ಜೆಡಿಎಸ್ ಸ್ಟಾರ್ ಪ್ರಚಾರಕರಲ್ಲಿ ದೇವೇಗೌಡರ ಕುಟುಂಬದವರೇ ಹೆಚ್ಚು

ಜೆಡಿಎಸ್ ಪಕ್ಷವು ಚುನಾವಣಾ ಆಯೋಗದಿಂದ 27 ಸ್ಟಾರ್ ಪ್ರಚಾರಕರ ಪಟ್ಟಿಗೆ ಅನುಮೋದನೆ ಪಡೆದಿದ್ದು, ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಸೇರಿದಂತೆ ಅವರ ಕುಟುಂಬದ ಎಂಟು ಜನರ ಹೆಸರು ಅದರಲ್ಲಿದೆ.

ಜೆಡಿಎಸ್ ಸ್ಟಾರ್ ಪ್ರಚಾರಕರು:- ಎಚ್‌.ಡಿ. ಕುಮಾರಸ್ವಾಮಿ, ಅವರ ಪತ್ನಿ ಅನಿತಾ, ಮಗ ನಿಖಿಲ್‌ ಕುಮಾರಸ್ವಾಮಿ, ಶಾಸಕ ಎಚ್‌.ಡಿ. ರೇವಣ್ಣ, ಅವರ ಪತ್ನಿ ಭವಾನಿ, ಮಗ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಇನ್ನು ಕುಟುಂಬ ಹೊತುಪಡಿಸಿ ಯಾರೆಲ್ಲಾ ಸ್ಟಾರ್ ಪ್ರಚಾರಕರು?

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ರಾಜ್ಯಸಭೆ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ. ಶರವಣ, ಕೆ.ಎ. ತಿಪ್ಪೇಸ್ವಾಮಿ, ಎಸ್‌.ಎಲ್‌. ಭೋಜೇಗೌಡ, ಬಿ.ಎಂ. ಫಾರೂಕ್‌, ಪಕ್ಷದ ಮಹಿಳಾ ಘಟಕದ ಕಾರ್ಯಾ ಧ್ಯಕ್ಷೆ ನಜ್ಮಾ ನಝೀರ್‌ ಚಿಕ್ಕನೇರಳೆ ಪಟ್ಟಿಯಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...