Homeಕರ್ನಾಟಕಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

ಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿಯಲು ಸ್ಟಾರ್ ಪ್ರಚಾರಕರು ಸಿದ್ಧರಾಗಿದ್ದಾರೆ. ರಾಜ್ಯದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಗಳ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿವೆ. ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 40 ನಾಯಕರನ್ನೊಳಗೊಂಡ ಪಟ್ಟಿ ಬಿಡುಗಡೆ ಮಾಡಿದ್ದರೆ, ಜೆಡಿಎಸ್‌ 27 ನಾಯಕರ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರಲ್ಲಿ ಸೋನಿಯಾ, ರಾಹುಲ್, ಖರ್ಗೆ, ಶೆಟ್ಟರ್‌, ರಮ್ಯಾ..

ಕರ್ನಾಟಕ ವಿಧಾನಸಭಾ ಚುನಾವಣೆಗೆ 40 ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್‌ ಬುಧವಾರ ಬಿಡುಗಡೆ ಮಾಡಿದೆ.

ಇತ್ತೀಚೆಗೆ ಬಿಜೆಪಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹಿರಿಯ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸ್ಥಾನ ಸಿಕ್ಕಿದೆ. ಕೆಪಿಸಿಸಿಯ ಐವರು ಕಾರ್ಯಾಧ್ಯಕ್ಷರಲ್ಲಿ ರಾಮಲಿಂಗಾ ರೆಡ್ಡಿ ಹಾಗೂ ಸತೀಶ ಜಾರಕಿಹೊಳಿ ಹೆಸರು ಮಾತ್ರ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇನ್ನು ತೇರದಾಳ ಕ್ಷೇತ್ರದ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದ ಉಮಾಶ್ರೀ ಹಾಗೂ ಮಾಗಡಿ ಅಥವಾ ಹರಿಹರ ಕ್ಷೇತ್ರದ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಎಚ್‌.ಎಂ. ರೇವಣ್ಣ ಅವರಿಗೆ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ. ನಟಿ ರಮ್ಯಾ ಹಾಗೂ ಹಾಸ್ಯನಟ ಸಾಧುಕೋಕಿಲಾ ಸಹ ಪಕ್ಷದ ತಾರಾ ಪ್ರಚಾರಕರಾಗಿದ್ದಾರೆ. ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌, ಮೂವರು ಮುಖ್ಯಮಂತ್ರಿಗಳಾದ ಅಶೋಕ್‌ ಗೆಹಲೋಟ್, ಭೂಪೇಶ್‌ ಬಘೇಲ್‌, ಸುಖ್ವಿಂದರ್‌ ಸಿಂಗ್‌ ಸುಖು ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್‌, ಜೈರಾಮ್‌ ರಮೇಶ್‌, ರಣದೀಪ್‌ ಸಿಂಗ್ ಸುರ್ಜೆವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ತಾರಾ ಪ್ರಚಾರಕರಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ರಾಜ್ಯ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್‌, ಜಿ.ಪರಮೇಶ್ವರ, ಕೆ.ಎಚ್‌.ಮುನಿಯಪ್ಪ, ಎಂ.ಬಿ.‍ಪಾಟೀಲ, ಎಂ. ವೀರಪ್ಪ ಮೊಯಿಲಿ, ಶಾಸಕ ಜಮೀರ್ ಅಹ್ಮದ್‌ ಖಾನ್‌, ಸಂಸದರಾದ ಡಿ.ಕೆ. ಸುರೇಶ್‌, ಜಿ.ಸಿ.ಚಂದ್ರಶೇಖರ್‌, ಸಯ್ಯದ್‌ ನಾಸಿರ್‌ ಹುಸೇನ್‌, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌, ಶಾಸಕಿ ರೂಪಾ ಶಶಿಧರ್‌ ಅವರಿಗೆ ಸ್ಥಾನ ಸಿಕ್ಕಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಪ್ರಥ್ವಿರಾಜ್‌ ಚವಾಣ್‌, ಅಶೋಕ್‌ ಚವಾಣ್ ಹಾಗೂ ತೆಲಂಗಾಣ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡರಾದ ಶಶಿ ತರೂರ್, ಪಿ.ಚಿದಂಬರಂ, ರಮೇಶ್‌ ಚೆನ್ನಿತಾಲ, ರಾಜ್‌ ಬಬ್ಬರ್‌ ಹಾಗೂ ಯುವ ನಾಯಕರಾದ ಕನ್ನಯ್ಯ ಕುಮಾರ್‌, ಇಮ್ರಾನ್‌ ಪ್ರತಾಪ್‌ಗರಿ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

20 ದಿನಗಳಲ್ಲಿ 20 ಕಡೆ ರಾಹುಲ್‌ ರ‍್ಯಾಲಿ

ಮುಂದಿನ 20 ದಿನಗಳಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು 20 ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಮುಂದಿನ 3 ವಾರಗಳಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಹಲವು ಪ್ರಚಾರ ಸಭೆ, ರೋಡ್‌ ಶೋಗಳಲ್ಲಿ ಭಾಗಿಯಾಗಲಿದ್ದಾರೆ. ಮೇ ಮೊದಲ ವಾರದಲ್ಲಿ ಸೋನಿಯಾ ಗಾಂಧಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಸ್ಟಾರ್ ಪ್ರಚಾರಕರಲ್ಲಿ ಮೋದಿ, ಶಾ, ಯೋಗಿಯದ್ದೇ ಸದ್ದು

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿ ಒಟ್ಟು 40 ಮಂದಿಯ ತಾರಾ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಆದರೆ, ಉಪಚುನಾವಣೆಗಳಲ್ಲಿ ತಾರಾ ಪ್ರಚಾರಕರಾಗಿ ಗಮನಸೆಳೆದಿದ್ದ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಈ ಬಾರಿ ಕೈಬಿಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್‌, ಪ್ರಲ್ಹಾದ ಜೋಶಿ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯಾ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಭಗವಂತ್‌ ಖೂಬಾ ಸ್ಟಾರ್ ಪ್ರಚಾರಕರಾಗಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ,  ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್‌ ಕುಮಾರ್‌ ಕಟೀಲ್, ಡಿ.ವಿ. ಸದಾನಂದಗೌಡ, ಕೆ.ಎಸ್‌. ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌. ಅಶೋಕ, ಕೆ. ಅಣ್ಣಾಮಲೈ, ಅರುಣ್ ಸಿಂಗ್‌, ಡಿ.ಕೆ. ಅರುಣಾ, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಬಿ. ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ ಯತ್ನಾಳ್, ಡಾ. ಉಮೇಶ್‌ ಜಾಧವ್‌, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್‌, ಜಗ್ಗೇಶ್, ಶೃತಿ, ತಾರಾ ಅನೂರಾಧ ತಾರಾ ಪ್ರಚಾರಕರ ಪಟ್ಟಿಯಲ್ಲಿ ಇದ್ದಾರೆ.

ಜೆಡಿಎಸ್ ಸ್ಟಾರ್ ಪ್ರಚಾರಕರಲ್ಲಿ ದೇವೇಗೌಡರ ಕುಟುಂಬದವರೇ ಹೆಚ್ಚು

ಜೆಡಿಎಸ್ ಪಕ್ಷವು ಚುನಾವಣಾ ಆಯೋಗದಿಂದ 27 ಸ್ಟಾರ್ ಪ್ರಚಾರಕರ ಪಟ್ಟಿಗೆ ಅನುಮೋದನೆ ಪಡೆದಿದ್ದು, ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಸೇರಿದಂತೆ ಅವರ ಕುಟುಂಬದ ಎಂಟು ಜನರ ಹೆಸರು ಅದರಲ್ಲಿದೆ.

ಜೆಡಿಎಸ್ ಸ್ಟಾರ್ ಪ್ರಚಾರಕರು:- ಎಚ್‌.ಡಿ. ಕುಮಾರಸ್ವಾಮಿ, ಅವರ ಪತ್ನಿ ಅನಿತಾ, ಮಗ ನಿಖಿಲ್‌ ಕುಮಾರಸ್ವಾಮಿ, ಶಾಸಕ ಎಚ್‌.ಡಿ. ರೇವಣ್ಣ, ಅವರ ಪತ್ನಿ ಭವಾನಿ, ಮಗ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಇನ್ನು ಕುಟುಂಬ ಹೊತುಪಡಿಸಿ ಯಾರೆಲ್ಲಾ ಸ್ಟಾರ್ ಪ್ರಚಾರಕರು?

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ರಾಜ್ಯಸಭೆ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ. ಶರವಣ, ಕೆ.ಎ. ತಿಪ್ಪೇಸ್ವಾಮಿ, ಎಸ್‌.ಎಲ್‌. ಭೋಜೇಗೌಡ, ಬಿ.ಎಂ. ಫಾರೂಕ್‌, ಪಕ್ಷದ ಮಹಿಳಾ ಘಟಕದ ಕಾರ್ಯಾ ಧ್ಯಕ್ಷೆ ನಜ್ಮಾ ನಝೀರ್‌ ಚಿಕ್ಕನೇರಳೆ ಪಟ್ಟಿಯಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...