Homeಮುಖಪುಟಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?

- Advertisement -
- Advertisement -

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ನೂರಾರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಒಂದೇ ಕುಟಂಬದಿಂದ ಇಬ್ಬಿಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರಕ್ಕೆ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್, ಸರ್ವಜ್ಞ ನಗರದಿಂದ ಕೆ.ಜೆ.ಜಾರ್ಜ್‌ ಮತ್ತು ಅವರ ಪುತ್ರ ರಾಣಾ ಜಾರ್ಜ್‌, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಮತ್ತು ಅವರ ತಾಯಿ ಸುನೀತಾ ಪುಟ್ಟಣ್ಣಯ್ಯನವರು ಸೇರಿದಂತೆ ಒಂದೇ ಕುಟುಂಬದ ಹಲವರು ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿ ಏಕೆ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಉತ್ತರ ಸರಳವಾಗಿದ್ದು, ಕಾರಣಾಂತರಗಳಿಂದ ಒಬ್ಬರ ನಾಮಪತ್ರ ತಿರಸ್ಕೃತಗೊಂಡುಬಿಟ್ಟರೆ ಅವರ ಪರವಾಗಿ ಇನ್ನೊಬ್ಬರು ಅಭ್ಯರ್ಥಿಯಾಗಿ ಕಣದಲ್ಲಿಳಿಯಬಹುದು ಎಂದು ಮುಂದಾಲೋಚನೆಯಿಂದ ಈ ರೀತಿಯಾಗಿ ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವ ರೂಢಿ ಬೆಳೆದು ಬಂದಿದೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವೇನು?

ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅವರ ಪೌರತ್ವ ದಾಖಲೆ, ವಯಸ್ಸು ಮತ್ತು ಜಾತಿ ಪ್ರಮಾಣ ಪತ್ರ (ಅವರು ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದರೆ), ಹಾಗೆಯೇ ಯಾವುದಾದರೂ ಕ್ರಿಮಿನಲ್ ಪ್ರಕರಣಗಳಿದ್ದರೆ ಅವುಗಳ ಅಫಿಡವಿಟ್ ಮತ್ತು ಅಭ್ಯರ್ಥಿಗಳ ಮತ್ತು ಅವರ ಹತ್ತಿರದ ಸಂಬಂಧಿಯ ಆಸ್ತಿ ಮಾಲೀಕತ್ವ ಮತ್ತು ನಗದು, ಚಿನ್ನಾಭರಣಗಳ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲದೆ ಪಕ್ಷದ ವತಿಯಿಂದ ಸ್ಪರ್ಧಿಸುವಾಗ ಆ ಪಕ್ಷದ ಬಿ ಫಾರಂನಲ್ಲಿ ಎಲ್ಲಾ ಕಾಲಂಗಳನ್ನು ತುಂಬಬೇಕು. ಜೊತೆಗೆ 10 ಜನ ಸೂಚಕರ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ಇವುಗಳಲ್ಲಿ ಯಾವುದಾದರೂ ಒಂದು ತಪ್ಪಾದರೆ, ಬಿಟ್ಟು ಹೋದರೆ ಅಂತಹ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

ಎ ಫಾರ್ಮ್ ಎಂದರೇನು?

ಇದು ‘ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ರಾಜಕೀಯ ಪಕ್ಷ’ ಅಥವಾ ‘ನೋಂದಾಯಿತ ಆದರೆ ಗುರುತಿಸದ ರಾಜಕೀಯ ಪಕ್ಷ’ದಿಂದ ಕ್ಷೇತ್ರದ ಚುನಾವಣಾಧಿಕಾರಿ ಅಥವಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪಕ್ಷದ ಪದಾಧಿಕಾರಿಗಳ ಹೆಸರುಗಳನ್ನು ತಿಳಿಸಲು ಸಲ್ಲಿಸುವ ಅರ್ಜಿಯಾಗಿದೆ. ಇಲ್ಲಿ ಇರುವ ಹೆಸರು ಮತ್ತು ಸಹಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅಧಿಕಾರ ಪಡೆದಿದ್ದಾರೆ. ಇದು ಸಾಮಾನ್ಯವಾಗಿ ರಾಜಕೀಯ ಪಕ್ಷವೊಂದರ ಅಧ್ಯಕ್ಷ ಅಥವಾ ಕಾರ್ಯದರ್ಶಿಗಳ ಹೆಸರು, ಸಹಿ ಮತ್ತು ಪಕ್ಷದ ಮುದ್ರೆಯನ್ನು ಹೊಂದಿರಬೇಕು. ಟಿಕೆಟ್‌ಗಳನ್ನು ವಿತರಿಸಲು ಪಕ್ಷದಿಂದ ಅಧಿಕಾರ ಪಡೆದ ಪದಾಧಿಕಾರಿಗಳ ಮಾದರಿ ಸಹಿಯನ್ನು ಸಹ ಈ ಫಾರ್ಮ್ ಒಳಗೊಂಡಿದೆ.

ಬಿ ಫಾರಂ ಎಂದರೇನು?

ಈ ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ಇವರೇ ಎಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ವಿಶೇಷ ಅಧಿಕಾರಿಯು ತನ್ನ ಸಹಿ ಮತ್ತು ಮುದ್ರೆಯೊಂದಿಗೆ ನೀಡಲ್ಪಟ್ಟ ಫಾರಂ ಅನ್ನು ಬಿ ಫಾರಂ ಎನ್ನಲಾಗುತ್ತದೆ. ಇದನ್ನು ತುಂಬಿ ತಮ್ಮ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ಅಭ್ಯರ್ಥಿಗಳು ಸಲ್ಲಿಸುತ್ತಾರೆ. ಇದು ಪಕ್ಷದ ಚಿಹ್ನೆಯನ್ನು ಒಳಗೊಂಡಿದ್ದು ಕೆಲವೊಮ್ಮೆ ಇಬ್ಬರ ಹೆಸರುಗಳನ್ನು ಬರೆದಿರಲಾಗುತ್ತದೆ. ಅದರಲ್ಲಿ ಮೊದಲನೇಯದು ಅಧಿಕೃತ ಅಭ್ಯರ್ಥಿಯಾಗಿದ್ದರೆ ಮತ್ತೊಂದು ಎರಡನೇ ಅಭ್ಯರ್ಥಿಯಾಗಿರುತ್ತದೆ. ಒಂದು ವೇಳೆ ಮೊದಲನೇ ವ್ಯಕ್ತಿಯ ನಾಮಪತ್ರ ತಿರಸ್ಕೃತಗೊಂಡಲ್ಲಿ ಎರಡನೇ ವ್ಯಕ್ತಿ ಸ್ಪರ್ಧಿಸಬಹುದಾಗಿರುತ್ತದೆ.

ಸಿ ಫಾರಂ ಎಂದರೇನು?

ಕೆಲವೊಂದು ಪಕ್ಷಗಳು ಸಿ ಫಾರಂ ಕೊಡುವುದನ್ನು ಅಭ್ಯಾಸ ಮಾಡಿಕೊಂಡಿವೆ. ಅಂದರೆ ಇಬ್ಬರು ವ್ಯಕ್ತಿಗಳಿಗೆ ಬಿ ಫಾರಂ ನೀಡಿ, ಅಂತಿಮ ಕ್ಷಣದಲ್ಲಿ ಅವರಲ್ಲಿ ಒಬ್ಬರಿಗೆ ಮಾತ್ರ ಸಿ ಫಾರಂ ನೀಡಿ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಮಾಡಿಕೊಳ್ಳುತ್ತವೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣಗಳೇನು?

ಕೆಲವೊಮ್ಮೆ ಅಭ್ಯರ್ಥಿಗಳು ಬಿ ಫಾರಂ ನಲ್ಲಿನ ಎಲ್ಲಾ ಕಾಲಂಗಳನ್ನು ತುಂಬಿರುವುದಿಲ್ಲ. ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಜೊತೆಗೆ 10 ಜನ ಸೂಚಕರು ಅದೇ ವಿಧಾನಸಭಾ ಕ್ಷೇತ್ರದವರಾಗಿರಬೇಕು. ಸುಳ್ಳು ದಾಖಲೆ ಪತ್ರಗಳನ್ನು ಸಲ್ಲಿಸುವಂತಿಲ್ಲ. ಕಡೆಯ ದಿನದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಇವುಗಳಲ್ಲಿ ಲೋಪದೋಷವಾದಲ್ಲಿ ಅಂತಹ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...