Homeಮುಖಪುಟಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? : ನಡ್ಡಾಗೆ ಪ್ರಕಾಶ್...

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? : ನಡ್ಡಾಗೆ ಪ್ರಕಾಶ್ ರಾಥೋಡ್ ಪ್ರಶ್ನೆ

- Advertisement -
- Advertisement -

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರವರಿಗೆ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಪ್ರಶ್ನಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ, “ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬೇಕು” ಎಂದು ಹೇಳಿದ್ದೀರಿ. ಇದು ಭಾರತದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಅಹಂಕಾರದ ಮಾತಾಗಿದೆ. ನಿಮ್ಮದು ಒಕ್ಕೂಟ ಸರ್ಕಾರ ಎನ್ನುವುದನ್ನು ಮರೆತು ಕನ್ನಡಿಗರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ಕೇಂದ್ರದಿಂದ ಹಣ ಬರುವುದಿಲ್ಲ ಎನ್ನುವ ಅರ್ಥದಲ್ಲಿ ನಿಮ್ಮ ಮಾತು ಧ್ವನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣವನ್ನು ಸ್ವೀಕರಿಸುವುದಿಲ್ಲವೇ? ಕನ್ನಡಿಗರು ಕನ್ನಡ ದ್ರೋಹಿಯಾದ ಬಿಜೆಪಿ ಸರ್ಕಾರಕ್ಕೆ ತೆರಿಗೆ ಹಣ ನೀಡುವುದಿಲ್ಲ ಎಂದು ಹಠಕ್ಕೆ ಬಿದ್ದರೆ ಅದರ ಪರಿಣಾಮ ಏನಾಗಬಹುದು ಎನ್ನುವ ಕಲ್ಪನೆಯಾದರೂ ನಿಮಗೆ ಇದೆಯೇ? ಭಾರತದ ಅಡಿಪಾಯ ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ವಜ್ರದಷ್ಟು ಗಟ್ಟಿಯಾಗಿದೆ. ಇದನ್ನು ದುರ್ಬಲಗೊಳಿಸುವ ಪ್ರಯತ್ನ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಬ್ಯಾಂಕ್‌ಗಳನ್ನು ನುಂಗಿದಿರಿ. ಅದೇ ರೀತಿ ಕನ್ನಡಿಗರ ಪಾಲಿನ ಉದ್ಯೋಗದ ಅವಕಾಶಗಳು ಮತ್ತು ಬದುಕಿನ ಅವಕಾಶಗಳನ್ನು ನಿರಂತರವಾಗಿ ಕಿತ್ತುಕೊಳ್ಳುತ್ತಲೇ ಇದ್ದೀರಿ. ಈಗ ಕನ್ನಡದ ಮಕ್ಕಳು ಕುಡಿಯುವ ನಂದಿನಿ ಹಾಲಿನ ಮೇಲೂ ನಿಮ್ಮ ಕಣ್ಣು ಬಿದ್ದಿದೆ. ಇವೆಲ್ಲದರ ಆಚೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಮಾತ್ರ ಕೇಂದ್ರದ ಅನುದಾನ ಎನ್ನುವ ಅರ್ಥದಲ್ಲಿ ಮಾತನಾಡಿ ಬೆದರಿಕೆ ಹಾಕಿರುವುದನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ ಎಂದು ಅವರು ಹೇಳಕೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಬಿಜೆಪಿಗೆ ಇರುವುದು ನೆನ್ನೆ ಮೊನ್ನೆಯ ಇತಿಹಾಸ. ಕನ್ನಡ ಸಂಸ್ಕೃತಿ ಮತ್ತು ಕನ್ನಡತನ ಹಾಗೂ ಕನ್ನಡ ನೆಲಕ್ಕೆ ಸಾವಿರಾರು ವರ್ಷಗಳ ಇತಿಹಾಸ, ಚರಿತ್ರೆ ಇದೆ. ಇದನ್ನು ಕೆಣಕುವ ಪ್ರಯತ್ನ ಮಾಡಬೇಡಿ. ನೀವು ಹಿಮಾಚಲ ಪ್ರದೇಶದಿಂದ ಬಂದು ಕನ್ನಡಿಗರ ಸಹನೆ ಮತ್ತು ಸ್ವಾಭಿಮಾನ ಕೆಣಕಬಾರದು. ನಿಮ್ಮ ರಾಜ್ಯದಲ್ಲೇ ನೀವು ನಿಮ್ಮ ಬಿಜೆಪಿಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಕರ್ನಾಟಕಕ್ಕೆ ಬಂದು ಈಗಾಗಲೇ ತುರ್ತುನಿಗಾ ಘಟಕದಲ್ಲಿ ಏದುಸಿರುವ ಬಿಡುತ್ತಿರುವ ಬಿಜೆಪಿಯ ಕುತ್ತಿಗೆ ಹಿಚುಕಬೇಡಿ. ಕನ್ನಡಿಗರ ಸಾರ್ವಭೌಮತ್ವವನ್ನು ಕೆಣಕುವ ಪ್ರಯತ್ನ ಮಾಡಬೇಡಿ ಎಂದಿದ್ದಾರೆ.

ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, “ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಮತ ಹಾಕದಿದ್ದರೆ ಮೋದಿಯ ಆರ್ಶೀವಾದದಿಂದ ತಪ್ಪಿಸಿಕೊಳ್ಳುವಿರಿ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ “ರಾಜ್ಯದ ಮತದಾರರಿಗೆ ಬೆದರಿಕೆ ಹಾಕಿದ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂ ಮಂತರ್ ಬಾಬಾನಾ’ ಎಂದು ಪ್ರಶ್ನಿಸಿದೆ. ಬಿಜೆಪಿಗರೇ, ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು ಅಲ್ಲವೇ” ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...