Homeಮುಖಪುಟರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

ರಾತ್ರೋರಾತ್ರಿ ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಿಸಿದ ಕೊತ್ತೂರು ಮಂಜುನಾಥ್ ಯಾರು? ಕ್ಷೇತ್ರದ ಸಮೀಕ್ಷೆ ಹೀಗಿದೆ

- Advertisement -
- Advertisement -

ಬುಧವಾರ ರಾತ್ರಿ ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಳಬಾಗಿಲು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಡಾ. ಬಿ.ಸಿ ಮುದ್ದುಗಂಗಾಧರ್ ಎಂಬುವವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ 10 ಗಂಟೆಗಳಲ್ಲಿ ಅವರನ್ನು ಬದಲಿಸಿ ಆದಿನಾರಾಯಣ ಎಂಬುವವರಿಗೆ ಕಾಂಗ್ರೆಸ್ ಬಿ ಫಾರಂ ನೀಡಿದೆ. ಇದಕ್ಕೆ ಕಾರಣರಾದ ವ್ಯಕ್ತಿ ಕೊತ್ತೂರು ಮಂಜುನಾಥ್! ಯಾರಿವರು? ಅಭ್ಯರ್ಥಿ ಬದಲಾಗಲು ಕಾರಣವೇನು?

ಮುಳಬಾಗಿಲು ವಿಧಾನಸಭಾ ಕ್ಷೇತ್ರ 2008ರಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಯಿತು. ಆ ಚುನಾವಣೆಯಲ್ಲಿ ಆಗ ಕಾಂಗ್ರೆಸ್ ಅಭ್ಯರ್ಥಿ ಅಮರೇಶ್‌ರವರು ಜೆಡಿಎಸ್‌ನ ಎನ್ ಮುನಿನಂಜಪ್ಪನವರನ್ನು 1,854 ಮತಗಳಿಂದ ಮಣಿಸಿ ಶಾಸಕರಾದರು. ಆದರೆ 2013ರ ವೇಳೆಗೆ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟವರು ಕೊತ್ತೂರು ಮಂಜುನಾಥ್. ಕಾಂಗ್ರೆಸ್ ಟಿಕೆಟ್ ನೀಡದಿದ್ದುದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು 73,146 ಮತಗಳನ್ನು ಪಡೆದು ಜೆಡಿಎಸ್ ಅಭ್ಯರ್ಥಿ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

ಮುಳಬಾಗಿಲು ತಾಲ್ಲೂಕಿನ ಮರಹೇರು ಕೊತ್ತೂರು ಗ್ರಾಮದ ಇವರು ಜನಪ್ರಿಯ ಶಾಸಕರೂ ಆಗಿದ್ದರು. 2018ರ ಚುನಾವಣೆ ವೇಳೆಗೆ ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು. ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್‌ರವರು ಪ್ರಬಲ ಪೈಪೋಟಿ ಕೊಟ್ಟರೂ ಸಹ 6,715 ಮತಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಕಾಂಗ್ರೆಸ್ ಟಿಕೆಟ್ ಸಿಗದುದ್ದಕ್ಕೆ ಬೇಸರಗೊಂಡು ಬಿಜೆಪಿ ಸೇರಿದ್ದ ಮಾಜಿ ಶಾಸಕ ಅಮರೇಶ್ ಕೇವಲ 8,411 ಮತಗಳಿಗೆ ಸೀಮಿತಗೊಂಡರು.

ಹೈಕೋರ್ಟ್‌ನಲ್ಲಿಯೂ ಕೂಡ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ತಿರಸ್ಕೃತಗೊಂಡಿದ್ದರಿಂದ ಅವರು ಮುಳಬಾಗಿಲು ಪ.ಜಾ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದರೂ ಅವರಿಗೆ ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅವರು ಮುಳಬಾಗಿಲು ಕ್ಷೇತ್ರಕ್ಕೆ ತನ್ನ ಅನುಯಾಯಿ ಆದಿನಾರಾಯಣರವರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಕಾಂಗ್ರೆಸ್ ಡಾ. ಬಿ.ಸಿ ಮುದ್ದುಗಂಗಾಧರ್ ಹೆಸರು ಪ್ರಕಟಿಸಿದಾಗ ಕೋಪಗೊಂಡ ಮಂಜುನಾಥ್, ಈಗ ಘೋಷಿಸಿರುವ ಅಭ್ಯರ್ಥಿಯ ಹೆಸರೇ ಕೇಳಿಲ್ಲ. ಹಾಗಾಗಿ ಬದಲಿಸಬೇಕು, ಇಲ್ಲವಾದಲ್ಲಿ ತಾನು ಕೋಲಾರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಹಠ ಹಿಡಿದು ಕೂತರು. ಕೊನೆಗೂ ಕೊತ್ತೂರು ಮಂಜು ಒತ್ತಡಕ್ಕೆ ಮಣಿದು ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನೇ ಪಕ್ಷ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದ ಡಾ. ಬಿ ಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣಗೆ ಪಕ್ಷ ಟಿಕೆಟ್ ನೀಡಿದೆ. ಏಕೆಂದರೆ ಕೊತ್ತೂರು ಮಂಜುನಾಥ್ ಬೆಂಬಲವಿಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಗೆಲುವು ಕಷ್ಟ ಎಂಬುದು ಕಳೆದ ಎರಡು ಚುನಾವಣೆಗಳಲ್ಲಿ ನಿರೂಪಿತವಾಗಿದೆ.

ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್‌

ಜೆಡಿಎಸ್ ಪಕ್ಷವು ಸಮೃದ್ಧಿ ಮಂಜುನಾಥ್‌ ನವರಿಗೆ ಟಿಕೆಟ್ ನೀಡಿದೆ. ಅವರು ಕಳೆದ ಬಾರಿ ಪೈಪೋಟಿ ನೀಡಿ ಸೋಲನಪ್ಪಿದ್ದರು. ಈ ಬಾರಿ ಗೆದ್ದು ತೀರುವ ಹಠ ತೊಟ್ಟಿದ್ದಾರೆ.

ಬಿಜೆಪಿಗೆ ಮುಳಬಾಗಿಲಿನಲ್ಲಿ ಯಾವುದೇ ನೆಲೆ ಇಲ್ಲ. ಅದು ಶಿಗೇಹಳ್ಳಿ ಸುಂದರ್‌ ಎಂಬುವವರಿಗೆ ಟಿಕೆಟ್ ನೀಡಿದೆ. ಇನ್ನು ಕಳೆದ ಸಲ ಗೆದ್ದು ಶಾಸಕರಾಗಿದ್ದ ಎಚ್.ನಾಗೇಶ್‌ರವರು ಕಾಂಗ್ರೆಸ್ ಪಕ್ಷ ಸೇರಿದ್ದು, ಮಹದೇವಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಳಬಾಗಿಲಿನಲ್ಲಿ ಸದ್ಯಕ್ಕೆ ಕಾಂಗ್ರೆಸ್‌ನ ಆದಿನಾರಾಯಣ ಮತ್ತು ಜೆಡಿಎಸ್‌ನ ಸಮೃದ್ಧಿ ಮಂಜುನಾಥ್‌ ನಡುವೆ ಹಣಾಹಣಿ ನಡೆಯುತ್ತಿದೆ.

ಅಂದಾಜು ಜಾತಿವಾರು ಮತಗಳು

ಕೋಲಾರ ಜಿಲ್ಲೆಯ ಎಲ್ಲಾ ಕ್ಷೇತ್ರಗಳಂತೆ ಮುಳಬಾಗಿಲಿನಲ್ಲಿಯೂ ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಸ್‌ಸಿ, ಎಸ್‌ಟಿ ಮತಗಳು ಸುಮಾರು 60,000ದಷ್ಟಿದ್ದು ಒಕ್ಕಲಿಗ ಮತಗಳು 50,000ದಷ್ಟಿವೆ. ಮುಸ್ಲಿಮರು 35,000ಕ್ಕೂ ಹೆಚ್ಚಿನ ಮತಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು ಇತರ ಹಿಂದುಳಿದ ವರ್ಗಗಳ 50,000 ಮತ್ತು ಉಳಿದ ಸಮುದಾಯಗಳ 10,000 ಮತಗಳಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮುಳಬಾಗಿಲು: ಪಕ್ಷೇತರ ಅಭ್ಯರ್ಥಿಗಳ ಪಾರುಪತ್ಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...