Homeಅಂಕಣಗಳುಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

- Advertisement -
- Advertisement -

ಕರ್ನಾಟಕದ ರಾಜಕಾರಣ ಭಲೇ ಮಜವಾಗಿದೆಯಲ್ಲಾ. ಈ ಹುಚ್ಚರ ಸಂತೆಯನ್ನು ನೋಡಿ ಜನ ಎಲ್ಲಾ ಪಕ್ಷದವರನ್ನು ಶಪಿಸುವಂತಾಗಿದ್ದಾರಂತಲ್ಲಾ. ಇದಕ್ಕೆ ಹಲವಾರು ಪಕ್ಷಾಂತರಿಗಳ ಉದಾಹರಣೆ ನೋಡಬಹುದು. ಕಾಂಗ್ರೆಸ್, ಬಿಜೆಪಿ, ದಳ ಮೂರು ಪಾರ್ಟಿಗಳು ಒಂದಾದ ಸಮಯ ಇದು. ಎಲ್ಲರೂ ಒಂದೇ ತರಹ ಮಾತನಾಡುತ್ತಿದ್ದಾರೆ. ಆದರೆ ಈ ನಡುವೆ ನಡ್ಡಾ, ಶಾ, ಮೋದಿ ಕರ್ನಾಟಕದ ಕೆಲವು ರಾಜಕಾರಣಿಗಳನ್ನು ಗೋಶಾಲೆಗೆ ದೂಡಿದ್ದು ನೋಡಿದರೆ ಶಾನೆ ಅನುಮಾನವಾಗುತ್ತಿದೆಯಲ್ಲಾ. ಜನರ ತಲೆಯಲ್ಲಿ ತುಂಬಿರುವ ದೊಡ್ಡ ಅನುಮಾನವೆಂದರೆ ಇವಿಎಂ ಬಗೆಗಿನ ಸಂಶಯ. ಹೀಗಿದ್ದರೂ, ಹಳೆ ತಲೆಗಳು ಪಾರ್ಟಿಯನ್ನು ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ತರುವುದಿಲ್ಲ, ಮಾಗಿದ ರಾಜಕಾರಣಗಳಿಂದ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮನೆಹಾಳ ಕಾರ್ಯಕ್ರಮಗಳ ಅನುಷ್ಠಾನ ಕಷ್ಟ; ಇಂತಲ್ಲಿ ಜಗದೀಶ್ ಶೆಟ್ಟರ್‌ನಂತವರ ಅಗತ್ಯವಿಲ್ಲ. ಅದಿರಲಿ ಒಮ್ಮೆ ಮುಖ್ಯಮಂತ್ರಿಯಾಗಿದ್ದ ಶೆಟ್ಟರ್ ತನಗಿಂತ ಕಿರಿ ಹುಡುಗನ ಆಡಳಿತದಲ್ಲಿ ಕೇವಲ ಶಾಸಕನಾಗಿದ್ದು ಮುಂದೆಯೂ ಹಾಗೇ ಇರುತ್ತೇನೆಂದು ಹೇಳಿ ಟಿಕೆಟ್‌ಗಾಗಿ ರಚ್ಚೆ ಹಿಡಿದಿರುವುದು ಅಚ್ಚರಿಯಾಗಿದೆಯಲ್ಲಾ ಥೂತ್ತೇರಿ.

*****

ಪಾರ್ಟಿಯಿಂದ ಟಿಕೆಟ್ ಸಿಗದ ಹಲವಾರು ಜನ ಕೋಣವನ್ನು ಕಳೆದುಕೊಂಡ ಎಮ್ಮೆಯಂತೆ ಅಳುತ್ತಿದ್ದಾರೆ. ಈ ಪೈಕಿ ಉಡುಪಿ ಭಟ್ಟನ ಅಳು ನೋಡಿ ಕೃಷ್ಣನೇ ಅತ್ತ ತಿರುಗಿದನಂತೆ. ಇನ್ನ ಜಗದೀಶ್ ಶೆಟ್ಟರ ಅಳಲು ಜನಗಳನ್ನೇ ಬಿಟ್ಟಿದ್ದಾರೆ. ಎ.ಟಿ ರಾಮಸ್ವಾಮಿ ಮತ್ತು ಮುದ್ದಹನುಮೇಗೌಡರು ಒಳದುಃಖಿಗಳಾದ್ದರಿಂದ ದುಃಖ ಬಹಿರಂಗವಾಗಿ ಕಾಣಲಿಲ್ಲ. ಇನ್ನು ಶಿವಮೊಗ್ಗದ ಈಶ್ವರಪ್ಪನ ಸೊಸೆ ಅಳುವುದನ್ನು ಕೇಳಿ ಬಹಳ ಜನ ಮನೆಯ ಬಳಿಗೆ ಓಡಿಬಂದರಂತೆ. ಅಲ್ಲಿ ಈಶ್ವರಪ್ಪನೂ ದಂಗಾಗಿ ಕೂತಿದ್ದರಂತೆ. ಹೆಂಡತಿ ಆಸ್ಪತ್ರೆಯಲ್ಲಿರುವುದನ್ನಾದರೂ ಪಾರ್ಟಿ ಗ್ರಹಿಸಬೇಕಿತ್ತು; ಈಶ್ವರಪ್ಪನಿಗೆ ಎಷ್ಟು ಸಿಟ್ಟು ಬಂದಿತೆಂದರೆ ರಾಜಕಾರಣಕ್ಕೆ ನಿವೃತ್ತಿಯನ್ನೇ ಘೋಷಿಸಿಬಿಟ್ಟರು.

ಕೆ.ಎಸ್.ಈಶ್ವರಪ್ಪ

ಈ ತ್ಯಾಗ ಮಗನ ಭವಿಷ್ಯಕ್ಕಾಗಿ ನಡೆದದು ಎಂದೂ ಜನ ಆಡಿಕೊಂಡರು. ಇನ್ನು ಮುಂದೆ ರಾಜಕಾರಣದ ವೇದಿಕೆಯಿಂದ ’ದನ ತಿನ್ನುವವರ ಗಂಟಲು ಸೀಳಬೇಕು, ಕೈ ಕತ್ತರಿಸಬೇಕು, ಆ ಸಿದ್ದರಾಮಯ್ಯ ನಾಯಿ ಇದ್ದಂತೆ, ಆ ಡಿ.ಕೆ.ಶಿ ಹಂದಿಯಿದ್ದಂತೆ, ಮುಸ್ಲಿಂ ಗೂಂಡಾಗಳಿಗೆ ತಕ್ಕಪಾಠ ಕಲಿಸಬೇಕು, ಹೆಣ್ಣು ಮಕ್ಕಳು ರೇಪಾದ್ರೆ ನಾವೇನು ಮಾಡಕಾಗತ್ತೆ, ನಲವತ್ತು ಪರಸೆಂಟು ಕೊಡಕ್ಕಾಗದೋನು ಸುಸೈಡ್ ಮಾಡಿಕತ್ತನೆ ಅಂತ ನನಿಗೇನು ಕನಸುಬಿದ್ದಿತ್ತೆ’ ಇಂತ ಮಾತುಗಳು ಒಡಕಲು ಸೈಲೆಂನ್ಸರ್ ಪೈಪಿನಂತ ಗಾಡಿಯಿಂದ ಹೊರಬರುವುದಿಲ್ಲ ಎಂಬ ಸಮಾಧಾನ ನಾಡಿನಲ್ಲಿ ಹರಡಿದೆಯಂತಲ್ಲಾ ಥೂತ್ತೇರಿ.

*****

ಟಿಕೆಟ್ ಸಿಗದವರೆಲ್ಲಾ ತಮ್ಮದೇ ಸಾವಿನ ಸಂದೇಶ ಬಂದಂತೆ ಅಳುತ್ತಿರುವಾಗ ಪ್ರಳಯವೇ ಸಂಭವಿಸಿದರೂ ಅಳಲಾರದ ರೇವಣ್ಣನವರು ಭವಾನಿಗೆ ಟಿಕೆಟ್ ಸಿಗದ ಕಾರಣಕ್ಕೆ ಅತ್ತಿರಬಹುದೆ ಎಂಬ ಗುಮಾನಿಯಾಯ್ತು. ಅವರನ್ನೇ ಕೇಳಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ ಟಕ್ ಟಕ್ ಟಕ್ ಟಕ್ ಟಕ್ ಟಕ್.. ಹಲೋ

“ಯಾರ್ರಿ ಅದು?”

“ನಮಸ್ಕಾರ ಸಾರ್ ನಾನು ಯಾಹು.”

“ಯಾವು ಅಂದ್ರೆ ಯಾರ್ರಿ?”

“ಪತ್ರಕರ್ತ ಸಾರ್.”

“ನಿಮ್ಮಿಂದ್ಲೆ ಕಂಡ್ರಿ ಹಿಂಗಾಗಿದ್ದು, ದಿನ ಬರದು ಬರದು ಮಡಗಿದ್ರಿ. ಈಗೇನು ಬರಿತಿರಿ?”

“ಭವಾನಿಯಕ್ಕನಿಗೆ ಟಿಕೆಟ್ ಸಿಗಲಿಲ್ಲ ಅಂತ ಬೇಜಾರಾಯ್ತ ಸಾ?”

“ಆಗದಿಲವೇನ್ರಿ? ನನ್ನಂಥೋನಿಗೇ ಅಳು ಬತ್ತದೆ.”

“ಅಳು ಅದಿಮಿಕ್ಕಬಾರ್ದು ಸಾ, ಮನಸೋಯಿಚ್ಚೆ ಅತ್ತಬುಡಬೇಕು.”

“ಜನ ಏನಂತರ್ರೀ.. ನೀವೇಳಿದಂಗೆ ಅಳಕ್ಕಾಯ್ತದ?”

ಇದನ್ನೂ ಓದಿ: “ಸುದೀಪನೂ ನಲವತ್ತು ಪರಸೆಂಟಾದ ಅಂತಾರಲ್ಲಾ ಸಾರ್”

“ಸಾರ್ ಭವಾನಿಯಕ್ಕ ಒಳ್ಳೆ ಆಡಳಿತಗಾರ್ತಿ. ನಿಜಕ್ಕೂ ಆ ಭವಾನಿದೇವಿಯಂಗೆ ಕಾಣ್ತರೆ. ಕುಮಾರಣ್ಣನ ಹೆಂಡ್ತಿ ಶಾಸಕರಾಗಬಹುದು, ಅದೇ ಭವಾನಿಯಕ್ಕ ಆಗಕ್ಕಾಗಲ್ಲ ಅಂದ್ರೆ ಇದ್ಯಾವ ನ್ಯಾಯ ಸಾ?”

“ನಾನು ನಿಮ್ಮಂಗೆ ಕೇಳಿದೆ ಕಂಡ್ರಿ, ಆದ್ರೆ ಕುಮಾರ ಹಟಹಿಡಿದುಬುಟ್ಟ. ಪ್ರಕಾಸ ಅಂತ ಹಾಸನದ ಎಮ್ಮೆಲ್ಲೆ ಇದ್ದ ನೋಡು, ಅವುಂದು ಕುಮಾರಂದು ಏನೂ ಯವಾರಿತ್ತಂತೆ, ಅವುನು ಸತ್ತೋದ, ಆ ರುಣ ತೀರಿಸಕ್ಕೆ ಅವುನ ಮಗನಿಗೇ ಟಿಕೆಟ್ ಕೊಟ್ಟ. ನಾವೇನು ಮಾಡಕಾಯ್ತದೆ. ನಾನೆ ಪಾರ್ಟಿ ಪ್ರಸಿಡೆಂಟಾಗಿದ್ರೆ ಮದ್ಲು ಭವಾನಿಗೆ ಟಿಕೆಟ್ ಕೊಟ್ಟು ಅಮ್ಯಾಲೆ ಉಳದೋರಿಗೆ ಕೊಡತ್ತಿದ್ದೆ.”

“ಈ ವಿಷಯದಲ್ಲಿ ದೇವೇಗೌಡ್ರು ನಿಮ್ಮ ಪರ ಇರಲಿಲ್ವ ಸಾ?”

“ಇದ್ರು ಕಂಡ್ರೀ. ಪಾಪ ಅವುರ ತಾನೆ ಏನು ಮಾಡ್ಯಾರು, ಕುಂತು ಬುಟ್ಟವುರೆ. ಮದ್ಲಿನಂಗಿದ್ರೆ ಬುಡತಿದ್ವ ನಾವೂ”

“ಅದು ಪತ್ತೆ ಆಯ್ತ ಸಾ?”

“ಯಾವುದ್ರಿ?”

“ದೇವೇಗೌಡ್ರ ಮ್ಯಾಲೆ ಯಾವುದೋ ಕ್ಯಟ್ಟ ಕಣ್ಣು ಬಿದ್ದಿದೆ ಅಂತ ಕುಮಾರಣ್ಣ ಅತ್ತರಲ್ಲ, ಅದು ಸಾರ್.”

“ಈ ಎಲಕ್ಸನ್ ಗಲಾಟಿಲಿ ಅದ ಯಾರೂ ಅಂತ ಕಂಡಿರಲಿಲ್ಲ ಕಂಡ್ರಿ.”

ರೇವಣ್ಣ

“ಅಂಜನ ಹಾಕಿ ನೋಡಿದ್ರೆ ಗೊತ್ತಾಗದು ಸಾ. ಉಡುಪಿ ಕಡೆ ಬನ್ನಂಜೆ ಗೋವಿಂದಾಚಾರಿ ಅಂತ ಇದ್ದರು. ಅವುರ ಮನೆಲಿ ಒಂದು ಪುಸ್ತಕ ಕಳೆದೋಗಿತ್ತಂತೆ, ಅಂಜನ ಹಾಕಿ ನೋಡಿದಾಗ ಅದಿದ್ದ ಜಾಗ ಕಾಣತಂತೆ. ಅಂಗೆ ನೀವೂ ಅಂಜನ ಹಾಕಬೇಕಾಗಿತ್ತು.”

“ಅಂಗೈ ಹುಣ್ಣಿಗೆ ಕನ್ನಡಿ ಬೇಕೇನ್ರಿ! ನಮ್ಮಪ್ಪನಿಗೆ ಏನು ವಸಿ ಜನ ಆಗದೋರಿದ್ದರೆ, ದೇವರು ನಮ್ಮಪ್ಪ ಕಡೆ ಇದ್ದಿದ್ರಿಂದ ಅವುರೆಲ್ಲ ತೀರೋದ್ರು. ನಮ್ಮಪ್ಪ ಇನ್ನು ಗಟ್ಟಿ ಮುಟ್ಟಾಗವುರೆ.”

“ಗಟ್ಟಿ ಜೀವ ಸಾರ್ ಅದು, ಪುನಃ ತನ್ನ ಕುಟುಂಬನ ಕರ್ನಾಟಕದ ಸಿಂಹಾಸನದ ಮೇಲೆ ಕೂರಿಸೆ ಹೋಗದದು.”

“ನಮ್ಮಾಸೆನೂ ಅದೆ ಅಲವೇನ್ರಿ! ಕುಮಾರ ಮತ್ತೆ ಮುಖ್ಯಮಂತ್ರಿ ಆಗಬೇಕು, ನಾನು ಪಿಡಬ್ಲುಡಿ ಮಂತ್ರಿ ಆಗಬೇಕು ಅಂತ ಹೋರಾಡ್ತಯಿರದು.”

“ಜೊತೆಗೆ ಇಂಧನ ಖಾತೆ, ಕೆಎಂಎಫ್‌ನೂ ನೀವೇ ವಹಿಸಿಕೋಬೇಕು ಸಾರ್. ಯಾವುದೇ ಖಾತೆ ಕೊಟ್ರು ಚನ್ನಾಗಿ ನಿಭಾಯಿಸ್ತಿರಿ ನೀವು. ಆ ಶಕ್ತಿ ಇವತ್ತು ಯಾವನಿಗೂ ಇಲ್ಲ.”

“ಅಲ್ಲ ಕಂಡ್ರೀ ನಾನು ಪಿಡಬ್ಲುಡಿ ಮಂತ್ರಿಯಾಗಿದ್ದಾಗ ಬೆಂಗಳೂರು ರೋಡು ಯಂಗಿದ್ದೋ.. ಒಂದೆಒಂದು ಬಟನ್ನು (ಗುಂಡಿ) ರಸ್ತೆಲಿ ಕಾಣತಿರಲಿಲ್ಲ. ಈ ಬಿಜೆಪಿಗಳು ಬಂದು ರೋಡು ತುಂಬ ಬರೀ ಬಟನ್ನಗಳೇಯ. ಪಾರ್ಟಿ ಪರಸೆಂಟು ಅಂದ್ರೆ ಯಾವು ರೋಡು ಚನ್ನಾಗಿರತವುರಿ?”

“ನೀವು ಪುನಃ ಮಂತ್ರಿಯಾಗಿ ಪಿಡಬ್ಲುಡಿ, ಇಂಧನ ಖಾತೆ ಮತ್ತು ಕೆಎಂಎಫ್ ಪಡಕೋಬೇಕು ಸಾರ್. ಅಂಗೆ ಭವಾನಿಯಕ್ಕನ್ನ ಎಮ್ಮೆಲ್ಸಿ ಮಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮಾಡಬೇಕು ಸಾ.”

“ಆದ್ಕೆ ನಿಮಗೆ ತಲೆಯಿಲ್ಲ ಅನ್ನದು.”

“ಯಾಕ್ ಸಾ?”

“ಅಲ್ಲಕಂಡ್ರಿ ಅವುಳು ಜಿಲ್ಲಾ ಪಂಚಾಯ್ತಿ ಆಡಳಿತ ಮಾಡುವಾಗಲ್ವಾ, ಇಸುಗೂಲುಡುಗ್ರು ವಳ್ಳೆ ನಂಬರ್ ತಗಂಡಿದ್ದೂ, ಆದ್ಕೆ ಎಜುಕೇಶನ್ ಮಂತ್ರಿ ಮಾಡನ ಅಂತ ಇದ್ದಿನಿ. ಆ ಮಹಿಳೆ ಮಕ್ಕಳು ಕಲ್ಯಾಣ ಇಲಾಖೆ ಯಾರಿಗೆ ಬೇಕ್ರಿ?”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...