Homeಮುಖಪುಟಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

- Advertisement -
- Advertisement -

ರಾಹುಲ್ ಗಾಂಧಿ ಅವರು ತಮ್ಮ ಮೇಲಿನ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆ ನೀಡಬೇಕೆಂಬ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ದಿನವೇ, ಪ್ರತ್ಯೇಕ ಪ್ರಕರಣದಲ್ಲಿ, 2002ರ ಗುಜರಾತ್ ದಂಗೆಯ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಎರಡು ವಿದೇಶಿ ಪತ್ರಿಕೆಗಳಲ್ಲಿ ಸಂಪಾದಕೀಯಗಳು -(ಫೈನಾನ್ಶಿಯಲ್ ಟೈಮ್ಸ್ ಮತ್ತು ವಾಷಿಂಗ್ಟನ್ ಟೈಮ್ಸ್ ) ಇದು ಭಾರತದಲ್ಲಿ ”ಪ್ರಜಾಪ್ರಭುತ್ವದ ಹಿನ್ನಡೆ” ಎಂದು ಕಳವಳ ವ್ಯಕ್ತಪಡಿಸಿವೆ.

ಚೀನಾವನ್ನು ವಿರೋಧಿಸುವ ಬರದಲ್ಲಿ ಮೋದಿ ಸರ್ಕಾರದ ಇಂತಹ ಕ್ರಮಗಳ ಬಗ್ಗೆ ಪಾಶ್ಚಿಮಾತ್ಯ ರಾಷ್ಟ್ರಗಳು ಕುರುಡಾಗಿವೆ ಎಂದು ಸಂಪಾದಕೀಯಗಳು ಟೀಕಿಸಿವೆ.

ಮಾರ್ಚ್‌ನಲ್ಲಿ ಅಮೆರಿಕಾ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರು ಭಾರತಕ್ಕೆ ಭೇಟಿ ನೀಡಿದಾಗ,  ಮೋದಿಯನ್ನು ”ಅದ್ಬುತವಾದ ದೂರದೃಷ್ಟಿ”ಯುಳ್ಳ ಮತ್ತು ”ಅತ್ಯಂತ ಜನಪ್ರಿಯ ವಿಶ್ವ ನಾಯಕ” ಎಂದು ಬಣ್ಣಿಸಿದ್ದಾರೆ ಎಂಬುವುದನ್ನು ಪತ್ರಿಕೆಗಳು ಗಮನಸೆಳೆದಿವೆ.

”ವ್ಯಾಪಾರಿಗಳು ಮತ್ತು ಹೂಡಿಕೆದಾರರು ಚೀನಾದಿಂದ ದೂರವಿದ್ದು, ವೈವಿಧ್ಯತೆ ಇರುವ ಭಾರತದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಆದರೆ ಭಾರತದಲ್ಲಿ ಈಗ ಕಾನೂನಿನ ನಿಯಮಗಳನ್ನು ದುರ್ಬಲಗೊಳ್ಳುತ್ತಿರುವುದರಿಂದ ಹೂಡಿಕಾದರರು ಎರಡು ಬಾರಿ ಯೋಚಿಸುವಂತೆ ಮಾಡುತ್ತದೆ” ಎಂದು ಫೈನಾನ್ಶಿಯಲ್ ಟೈಮ್ಸ್ ಬರೆದಿದೆ.

ಇದನ್ನೂ ಓದಿ: ಮೋದಿ ಜಂಗಲ್ ಸಫಾರಿ ಅಣಕಿಸುವ ವಿಡಿಯೋ ಮಾಡಿದ ಹಾಸ್ಯನಟನಿಗೆ ನೋಟಿಸ್; 11 ಸಾವಿರ ದಂಡ

ಭಾರತದಲ್ಲಿ ಪ್ರಜಾಪ್ರಭುತ್ವದ ಅವನತಿ-

”ಪತ್ರಿಕಾ ಸ್ವಾತಂತ್ರ್ಯ ಹರಣ, ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಲು ಪಠ್ಯಕ್ರಮದಲ್ಲಿ ಬದಲಾವಣೆ,
ಗಾಂಧಿಯವರ ಶಿಕ್ಷೆಯನ್ನು ತಡೆಯಲು ಸೂರತ್ ನ್ಯಾಯಾಲಯದ ನಿರಾಕರಣೆ ಜೊತೆಗೆ, ಮೋದಿ ಸರ್ಕಾರವು ವಿರೋಧ ಪಕ್ಷದವರನ್ನು ಮತ್ತು ವಿಮರ್ಶಕರನ್ನು ಗುರಿಯಾಗಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇದು ಪ್ರಜಾಪ್ರಭುತ್ವ ಅವನತಿಗೆ ಕಾರಣವಾಗುತ್ತದೆ” ಎಂದು ಫೈನಾನ್ಷಿಯಲ್ ಟೈಮ್ಸ್ ಸಂಪಾದಕೀಯವು ಹೇಳಿದೆ.

”ಮೋದಿ ಬೆಂಬಲಿಗರು ದೇಶದಲ್ಲಿನ ಬಹುತೇಕ ಮಾಧ್ಯಮ, ನಾಗರಿಕ ಸಮಾಜ ಮತ್ತು ರಾಜಕೀಯ ನಾಯಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಗ್ರಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಮುಸ್ಲಿಂ ಅಲ್ಪಸಂಖ್ಯಾತರೊಂದಿಗೆ ಅಂತರ್-ಧರ್ಮೀಯ ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆ” ಎಂದು ಸಂಪಾದಕೀಯದಲ್ಲಿ ಸೇರಿಸಿದ್ದಾರೆ.

”ಭಾರತವು “ಸರ್ವಾಧಿಕಾರ” ಆಡಳಿತವನ್ನು ಹೊಂದುತ್ತಿದೆ” ಎಂದು ವೆರೈಟೀಸ್ ಆಫ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್, ಸ್ವೀಡಿಷ್ ಥಿಂಕ್ ಟ್ಯಾಂಕ್‌ ಬಣ್ಣಿಸಿರುವ ಬಗ್ಗೆ ಬ್ರಿಟಿಷ್ ದಿನಪತ್ರಿಕೆ ಗಮನಿಸಿದೆ.

”2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಕುರಿತಾದ ಸಾಕ್ಷ್ಯಚಿತ್ರವನ್ನು ಬ್ರಿಟಿಷ್ ಬ್ರಾಡ್‌ಕಾಸ್ಟರ್ (ಬಿಬಿಸಿ) ಬಿಡುಗಡೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಕೆಲವೇ ವಾರಗಳ ನಂತರ, ಫೆಬ್ರವರಿಯಲ್ಲಿ BBCಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ (ಐಟಿ) ದಾಳಿ ನಡೆಸಿದ ಬಗ್ಗೆ ಉಲ್ಲೇಖಿಸಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಸಂಪಾದಕೀಯದಲ್ಲಿ ಪತ್ರಿಕೆ ಬರೆದಿದೆ.

”ಮೋದಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮಾಲೀಕರೊಂದಿಗೆ ಸಂಬಂಧ ಹೊಂದಿದೆ. ಆ ಮೂಲಕ ಸರ್ಕಾರವು ಮಾಧ್ಯಮದ ಮೇಲೆ ಅಗಾಧವಾದ ಪ್ರಭಾವವನ್ನು ಬೀರುತ್ತದೆ ಮತ್ತು ಮಾಧ್ಯಮಗಳ ಸಂಪಾದಕರು ಸರ್ಕಾರದ ರೇಖೆಯನ್ನು ಅನುಸರಿಸಲು ಪತ್ರಕರ್ತರಿಗೆ ಒತ್ತಡ ಹೇರುತ್ತಾರೆ” ಎಂದು ಫೈನಾನ್ಶಿಯಲ್ ಟೈಮ್ಸ್ ಆರೋಪ ಮಾಡಿದೆ.

ಇತ್ತಿಚೆಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಯಿತು ಅದು “ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಿರುತ್ಸಾಹಗೊಳಿಸುವ ಬೆಳವಣಿಗೆಯಾಗಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಬರೆದಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಲಾದ ಹಲವಾರು ಬದಲಾವಣೆಗಳಲ್ಲಿ, 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ, ಮೋಹನ್‌ದಾಸ್ ಕರಮಚಂದ್ ಗಾಂಧಿಯನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳ ಪ್ರಯತ್ನಗಳು ಮತ್ತು ನಂತರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲಿನ ನಿಷೇಧದ ಪ್ಯಾರಾಗಳನ್ನು ಕೈಬಿಡಲಾಗಿದೆ. ಈಗ ಯಾವುದೇ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

”ಆರೋಗ್ಯಕರ ಪ್ರಜಾಪ್ರಭುತ್ವವು ಅಹಿತಕರ ಘಟನೆಗಳನ್ನು ಮರುಪರಿಶೀಲಣೆ ಮಾಡದೆಯೇ ಗಾಳಿಗೆ ತೂರಿದೆ” ಎಂದು ವಾಷಿಂಗ್ಟನ್ ಪೋಸ್ಟ್ ಸಂಪಾದಕೀಯ ಹೇಳಿದೆ.

ಅಮೆರಿಕ ಮೂಲದ ದಿನಪತ್ರಿಕೆಯ ಸಂಪಾದಕೀಯವು ಬಿಬಿಸಿ ಕಚೇರಿ ಮೇಲಿನ ದಾಳಿಯನ್ನು ಟೀಕಿಸಿದ್ದು, ”ಚೀನಾ, ರಷ್ಯಾ ಮತ್ತು ಇತರ ಸರ್ವಾಧಿಕಾರಗಳು ಸುದ್ದಿ ಮಾಧ್ಯಮವನ್ನು ಮೌನಗೊಳಿಸಲು ಸಾಮಾನ್ಯವಾಗಿ ಬಳಸುವ ಬೆದರಿಕೆ ತಂತ್ರವನ್ನು ಭಾರತ ಸರ್ಕಾರ ಅನುಸರಿಸುತ್ತಿದೆ” ಎಂದು ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...