Homeಮುಖಪುಟಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

'ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಹಾಗಾಗಿ ಬಿಜೆಪಿ ಮತ ನೀಡಿ ಎಂದು ಬೆದರಿಕೆಯೊಡ್ಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು ಎಂದು ರಾಜ್ಯದ ಲೇಖಕರು, ಸಾಹಿತಿಗಳು ಒತ್ತಾಯಿಸಿದ್ದಾರೆ.

ಪ್ರೊ. ಕೆ ಎಂ ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಪ್ರೊ. ಕಾಶೀನಾಥ ಅಂಬಲಗಿ, ದಿನೇಶ್‌ ಅಮೀನ್‌ ಮಟ್ಟು, ಗಿರಿಧರ ಕಾರ್ಕಳ, ಪುರುಷೋತ್ತಮ ಬಿಳಿಮಲೆ ಮತ್ತು ಶ್ರೀನಿವಾಸ ಕಾರ್ಕಳರವರು ಜಂಟಿ ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ 19, 2023ರಂದು ಕರ್ನಾಟದ ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, “ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿ ಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼ ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ XI, ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಕೇಂದ್ರದಲ್ಲಿರುವ ಎನ್‌ ಡಿ ಎ ಸರಕಾರವು ಹಂತ ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...