Homeಮುಖಪುಟಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

'ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಹಾಗಾಗಿ ಬಿಜೆಪಿ ಮತ ನೀಡಿ ಎಂದು ಬೆದರಿಕೆಯೊಡ್ಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು ಎಂದು ರಾಜ್ಯದ ಲೇಖಕರು, ಸಾಹಿತಿಗಳು ಒತ್ತಾಯಿಸಿದ್ದಾರೆ.

ಪ್ರೊ. ಕೆ ಎಂ ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಪ್ರೊ. ಕಾಶೀನಾಥ ಅಂಬಲಗಿ, ದಿನೇಶ್‌ ಅಮೀನ್‌ ಮಟ್ಟು, ಗಿರಿಧರ ಕಾರ್ಕಳ, ಪುರುಷೋತ್ತಮ ಬಿಳಿಮಲೆ ಮತ್ತು ಶ್ರೀನಿವಾಸ ಕಾರ್ಕಳರವರು ಜಂಟಿ ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ 19, 2023ರಂದು ಕರ್ನಾಟದ ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, “ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿ ಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼ ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ XI, ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಕೇಂದ್ರದಲ್ಲಿರುವ ಎನ್‌ ಡಿ ಎ ಸರಕಾರವು ಹಂತ ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...