Homeಮುಖಪುಟಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

'ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಹಾಗಾಗಿ ಬಿಜೆಪಿ ಮತ ನೀಡಿ ಎಂದು ಬೆದರಿಕೆಯೊಡ್ಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ದೇಶದ ಕ್ಷಮೆ ಕೇಳಬೇಕು ಎಂದು ರಾಜ್ಯದ ಲೇಖಕರು, ಸಾಹಿತಿಗಳು ಒತ್ತಾಯಿಸಿದ್ದಾರೆ.

ಪ್ರೊ. ಕೆ ಎಂ ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಪ್ರೊ. ಕಾಶೀನಾಥ ಅಂಬಲಗಿ, ದಿನೇಶ್‌ ಅಮೀನ್‌ ಮಟ್ಟು, ಗಿರಿಧರ ಕಾರ್ಕಳ, ಪುರುಷೋತ್ತಮ ಬಿಳಿಮಲೆ ಮತ್ತು ಶ್ರೀನಿವಾಸ ಕಾರ್ಕಳರವರು ಜಂಟಿ ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ 19, 2023ರಂದು ಕರ್ನಾಟದ ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, “ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದೀಜಿಯವರ ಆಶೀರ್ವಾದ ಬೇಕು. ಆದ್ದರಿಂದ ರಾಜ್ಯವು ಮೋದಿ ಜಿ ಅವರ ಆಶೀರ್ವಾದದಿಂದ ದೂರವಿರಬಾರದುʼ ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ ಅವರು ʼ ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲʼ ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಪರಿಚ್ಛೇದ XI, ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರವಾಗಿದೆ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಕೇಂದ್ರದಲ್ಲಿರುವ ಎನ್‌ ಡಿ ಎ ಸರಕಾರವು ಹಂತ ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ನಡ್ಡಾ ಅವರ ಮಾತುಗಳು ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ಜೆ ಪಿ ನಡ್ಡಾ ಅವರು ಕೂಡಲೇ ಭಾರತದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...